AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?

Team India: ಕೇವಲ 14 ರನ್​ಗಳಿಸಿ ಆದರ್ಶ್ ಔಟಾದರೆ, ಆ ಬಳಿಕ ಬಂದ ರುದ್ರ ಪಟೇಲ್ (5) ಹಾಗೂ ಉದಯ್ ಸಹರಾನ್ (20) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಶಿನ್ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?
Arshin Kulkarni-Hardik Pandya
TV9 Web
| Edited By: |

Updated on: Dec 09, 2023 | 2:32 PM

Share

ಹಾರ್ದಿಕ್ ಪಾಂಡ್ಯ (Hardik Pandya) ಅಪರೂಪದ ಆಲ್​ರೌಂಡರ್​…ಅವರು ಮೈದಾನದಲ್ಲಿ ಕಾಣಿಸಿಕೊಳ್ಳುವುದೇ ಅಪರೂಪ…ಹೀಗೆ ಹಾರ್ದಿಕ್ ಪಾಂಡ್ಯ ಬಗ್ಗೆ ಇತ್ತೀಚೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾ ವ್ಯಂಗ್ಯವಾಡಿದ್ದರು. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ಪ್ರಮುಖ ಟೂರ್ನಿಗಳಿಗೆ ಪಾಂಡ್ಯ ಕೈಕೊಡುತ್ತಾ ಬಂದಿರುವುದು. ಆದರೆ ಇತ್ತ ಅವರ ಸ್ಥಾನ ತುಂಬಬಲ್ಲ ಮತ್ತೋರ್ವ ಆಲ್​ರೌಂಡರ್ ಇಲ್ಲದಿರುವುದು ಪಾಂಡ್ಯ ಪಾಲಿಗೆ ವರವಾಗುತ್ತಾ ಬಂದಿದೆ.

ಆದರೀಗ ಹಾರ್ದಿಕ್ ಪಾಂಡ್ಯಗೆ ಸವಾಲೆಸೆಯಬಲ್ಲ ವೇಗದ ಬೌಲರ್​ರೊಬ್ಬನ ಎಂಟ್ರಿಯಾಗಿದೆ. ಅದು ಕೂಡ ಅಂಡರ್​-19 ಏಷ್ಯಾಕಪ್ ಮೂಲಕ ಎಂಬುದು ವಿಶೇಷ.

ಹೆಸರು ಅರ್ಶಿನ್ ಕುಲ್ಕರ್ಣಿ. ಮಧ್ಯಮ ವೇಗದ ಬೌಲಿಂಗ್ ಆಲ್​ರೌಂಡರ್. ಅಂಡರ್-14 ಮಹಾರಾಷ್ಟ್ರ ತಂಡದ ಪರ ಕಣಕ್ಕಿಳಿಯುವ ಮೂಲಕ ಕ್ರಿಕೆಟ್ ಕೆರಿಯರ್ ಆರಂಭಿಸಿರುವ ಅರ್ಶಿನ್ ಕುಲ್ಕರ್ಣಿ ಇದೀಗ ಟೀಮ್ ಇಂಡಿಯಾದಲ್ಲಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್​ನ ಮೊದಲ ಪಂದ್ಯದಲ್ಲೇ ಅರ್ಶಿನ್ ಎಲ್ಲರ ಗಮನ ಸೆಳೆದಿದ್ದಾರೆ. ಅದು ಕೂಡ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನದ ಮೂಲಕ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 173 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ್ದು ಅರ್ಶಿನ್ ಕುಲ್ಕರ್ಣಿ ಹಾಗೂ ಆದರ್ಶ್ ಸಿಂಗ್.

ಕೇವಲ 14 ರನ್​ಗಳಿಸಿ ಆದರ್ಶ್ ಔಟಾದರೆ, ಆ ಬಳಿಕ ಬಂದ ರುದ್ರ ಪಟೇಲ್ (5) ಹಾಗೂ ಉದಯ್ ಸಹರಾನ್ (20) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಶಿನ್ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಅಷ್ಟೇ ಅಲ್ಲದೆ ಅಜೇಯ 70 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಜವಾಬ್ದಾರಿಯುತ ಬ್ಯಾಟಿಂಗ್​​ನಿಂದಾಗಿ ಇದೀಗ ಅರ್ಶಿನ್ ಎಲ್ಲರ ಗಮನ ಸೆಳೆದಿದ್ದಾರೆ.

ಅದರಲ್ಲೂ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿರುವ ಅರ್ಶಿನ್ ಆರಂಭಿಕನಾಗಿಯೂ ಮಿಂಚಿರುವುದು ಹೊಸ ಭರವಸೆ ಮೂಡಿಸಿದೆ. ಏಕೆಂದರೆ ಈ ಪಂದ್ಯದಲ್ಲಿ 8 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಅರ್ಶಿನ್ ಕೇವಲ 29 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಆರಂಭಿಕನಾಗಿ ಅರ್ಧಶತಕವನ್ನೂ ಬಾರಿಸಿ ಭಾರತ ತಂಡಕ್ಕೆ ಜಯ ತಂದುಕೊಟ್ಟರು.

ಇತ್ತ ಹಾರ್ದಿಕ್ ಪಾಂಡ್ಯಗೆ ಬದಲಿ ಆಟಗಾರನ ಹುಡುಕಾಟದಲ್ಲಿರುವ ಆಯ್ಕೆ ಸಮಿತಿ ಮುಂದೆ ಹೊಸ ಆಯ್ಕೆಯೊಂದು ತೆರೆದುಕೊಂಡಿದೆ. ಇತ್ತ ಅಂಡರ್-19 ಏಷ್ಯಾಕಪ್​ನಲ್ಲಿ ಮಿಂಚಿದರೆ ಅರ್ಶಿನ್ ಕುಲ್ಕರ್ಣಿಗೆ ಐಪಿಎಲ್ ಬಾಗಿಲು ತೆರೆದುಕೊಳ್ಳುವುದು ಖಚಿತ.

ಇದನ್ನೂ ಓದಿ: Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!

ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ಅರ್ಶಿನ್ ಕುಲ್ಕರ್ಣಿಗೆ ಅವಕಾಶ ಸಿಕ್ಕರೆ, ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಹೊಸ ಪ್ರತಿಸ್ಪರ್ಧಿ ಹುಟ್ಟಿಕೊಳ್ಳುವುದಂತು ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಪಾಲಿಗೆ ಚಿಂತೆಯಾಗಿದ್ದ ವೇಗದ ಬೌಲಿಂಗ್ ಆಲ್​ರೌಂಡರ್ ಕೊರತೆಯನ್ನು ಅರ್ಶಿನ್ ಕುಲ್ಕರ್ಣಿ ನೀಗಿಸಲಿದ್ದಾರಾ ಕಾದು ನೋಡಬೇಕಿದೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ