AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?

Team India: ಕೇವಲ 14 ರನ್​ಗಳಿಸಿ ಆದರ್ಶ್ ಔಟಾದರೆ, ಆ ಬಳಿಕ ಬಂದ ರುದ್ರ ಪಟೇಲ್ (5) ಹಾಗೂ ಉದಯ್ ಸಹರಾನ್ (20) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಶಿನ್ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಟೀಮ್ ಇಂಡಿಯಾಗೆ ಯುವ ಆಲ್​ರೌಂಡರ್ ಎಂಟ್ರಿ: ಹಾರ್ದಿಕ್ ಪಾಂಡ್ಯಗೆ ಪ್ರತಿಸ್ಪರ್ಧಿ?
Arshin Kulkarni-Hardik Pandya
TV9 Web
| Edited By: |

Updated on: Dec 09, 2023 | 2:32 PM

Share

ಹಾರ್ದಿಕ್ ಪಾಂಡ್ಯ (Hardik Pandya) ಅಪರೂಪದ ಆಲ್​ರೌಂಡರ್​…ಅವರು ಮೈದಾನದಲ್ಲಿ ಕಾಣಿಸಿಕೊಳ್ಳುವುದೇ ಅಪರೂಪ…ಹೀಗೆ ಹಾರ್ದಿಕ್ ಪಾಂಡ್ಯ ಬಗ್ಗೆ ಇತ್ತೀಚೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ಅಜಯ್ ಜಡೇಜಾ ವ್ಯಂಗ್ಯವಾಡಿದ್ದರು. ಇದಕ್ಕೆ ಮುಖ್ಯ ಕಾರಣ ಭಾರತ ತಂಡದ ಪ್ರಮುಖ ಟೂರ್ನಿಗಳಿಗೆ ಪಾಂಡ್ಯ ಕೈಕೊಡುತ್ತಾ ಬಂದಿರುವುದು. ಆದರೆ ಇತ್ತ ಅವರ ಸ್ಥಾನ ತುಂಬಬಲ್ಲ ಮತ್ತೋರ್ವ ಆಲ್​ರೌಂಡರ್ ಇಲ್ಲದಿರುವುದು ಪಾಂಡ್ಯ ಪಾಲಿಗೆ ವರವಾಗುತ್ತಾ ಬಂದಿದೆ.

ಆದರೀಗ ಹಾರ್ದಿಕ್ ಪಾಂಡ್ಯಗೆ ಸವಾಲೆಸೆಯಬಲ್ಲ ವೇಗದ ಬೌಲರ್​ರೊಬ್ಬನ ಎಂಟ್ರಿಯಾಗಿದೆ. ಅದು ಕೂಡ ಅಂಡರ್​-19 ಏಷ್ಯಾಕಪ್ ಮೂಲಕ ಎಂಬುದು ವಿಶೇಷ.

ಹೆಸರು ಅರ್ಶಿನ್ ಕುಲ್ಕರ್ಣಿ. ಮಧ್ಯಮ ವೇಗದ ಬೌಲಿಂಗ್ ಆಲ್​ರೌಂಡರ್. ಅಂಡರ್-14 ಮಹಾರಾಷ್ಟ್ರ ತಂಡದ ಪರ ಕಣಕ್ಕಿಳಿಯುವ ಮೂಲಕ ಕ್ರಿಕೆಟ್ ಕೆರಿಯರ್ ಆರಂಭಿಸಿರುವ ಅರ್ಶಿನ್ ಕುಲ್ಕರ್ಣಿ ಇದೀಗ ಟೀಮ್ ಇಂಡಿಯಾದಲ್ಲಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ಅಂಡರ್-19 ಏಷ್ಯಾಕಪ್​ನ ಮೊದಲ ಪಂದ್ಯದಲ್ಲೇ ಅರ್ಶಿನ್ ಎಲ್ಲರ ಗಮನ ಸೆಳೆದಿದ್ದಾರೆ. ಅದು ಕೂಡ ಅತ್ಯುತ್ತಮ ಆಲ್​ರೌಂಡರ್ ಪ್ರದರ್ಶನದ ಮೂಲಕ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 50 ಓವರ್​ಗಳಲ್ಲಿ 173 ರನ್​ಗಳಿಸಿ ಆಲೌಟ್ ಆಗಿತ್ತು. ಈ ಗುರಿಯನ್ನು ಬೆನ್ನತ್ತಲು ಟೀಮ್ ಇಂಡಿಯಾ ಪರ ಇನಿಂಗ್ಸ್ ಆರಂಭಿಸಿದ್ದು ಅರ್ಶಿನ್ ಕುಲ್ಕರ್ಣಿ ಹಾಗೂ ಆದರ್ಶ್ ಸಿಂಗ್.

ಕೇವಲ 14 ರನ್​ಗಳಿಸಿ ಆದರ್ಶ್ ಔಟಾದರೆ, ಆ ಬಳಿಕ ಬಂದ ರುದ್ರ ಪಟೇಲ್ (5) ಹಾಗೂ ಉದಯ್ ಸಹರಾನ್ (20) ಕೂಡ ಬೇಗನೆ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅರ್ಶಿನ್ ಟೀಮ್ ಇಂಡಿಯಾವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಅಷ್ಟೇ ಅಲ್ಲದೆ ಅಜೇಯ 70 ರನ್​ ಬಾರಿಸುವ ಮೂಲಕ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. ಈ ಜವಾಬ್ದಾರಿಯುತ ಬ್ಯಾಟಿಂಗ್​​ನಿಂದಾಗಿ ಇದೀಗ ಅರ್ಶಿನ್ ಎಲ್ಲರ ಗಮನ ಸೆಳೆದಿದ್ದಾರೆ.

ಅದರಲ್ಲೂ ವೇಗದ ಬೌಲಿಂಗ್ ಆಲ್​ರೌಂಡರ್ ಆಗಿರುವ ಅರ್ಶಿನ್ ಆರಂಭಿಕನಾಗಿಯೂ ಮಿಂಚಿರುವುದು ಹೊಸ ಭರವಸೆ ಮೂಡಿಸಿದೆ. ಏಕೆಂದರೆ ಈ ಪಂದ್ಯದಲ್ಲಿ 8 ಓವರ್​ಗಳನ್ನು ಬೌಲಿಂಗ್ ಮಾಡಿದ್ದ ಅರ್ಶಿನ್ ಕೇವಲ 29 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಅಷ್ಟೇ ಅಲ್ಲದೆ ಆರಂಭಿಕನಾಗಿ ಅರ್ಧಶತಕವನ್ನೂ ಬಾರಿಸಿ ಭಾರತ ತಂಡಕ್ಕೆ ಜಯ ತಂದುಕೊಟ್ಟರು.

ಇತ್ತ ಹಾರ್ದಿಕ್ ಪಾಂಡ್ಯಗೆ ಬದಲಿ ಆಟಗಾರನ ಹುಡುಕಾಟದಲ್ಲಿರುವ ಆಯ್ಕೆ ಸಮಿತಿ ಮುಂದೆ ಹೊಸ ಆಯ್ಕೆಯೊಂದು ತೆರೆದುಕೊಂಡಿದೆ. ಇತ್ತ ಅಂಡರ್-19 ಏಷ್ಯಾಕಪ್​ನಲ್ಲಿ ಮಿಂಚಿದರೆ ಅರ್ಶಿನ್ ಕುಲ್ಕರ್ಣಿಗೆ ಐಪಿಎಲ್ ಬಾಗಿಲು ತೆರೆದುಕೊಳ್ಳುವುದು ಖಚಿತ.

ಇದನ್ನೂ ಓದಿ: Virat Kohli: ಏಕದಿನದಲ್ಲಿ ರಿಕಿ ಪಾಂಟಿಂಗ್ ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದ ಕಿಂಗ್ ಕೊಹ್ಲಿ..!

ಹೀಗಾಗಿಯೇ ಈ ಬಾರಿಯ ಐಪಿಎಲ್​ನಲ್ಲಿ ಅರ್ಶಿನ್ ಕುಲ್ಕರ್ಣಿಗೆ ಅವಕಾಶ ಸಿಕ್ಕರೆ, ಟೀಮ್ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಸ್ಥಾನಕ್ಕೆ ಹೊಸ ಪ್ರತಿಸ್ಪರ್ಧಿ ಹುಟ್ಟಿಕೊಳ್ಳುವುದಂತು ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಕಳೆದ ಕೆಲ ವರ್ಷಗಳಿಂದ ಟೀಮ್ ಇಂಡಿಯಾ ಪಾಲಿಗೆ ಚಿಂತೆಯಾಗಿದ್ದ ವೇಗದ ಬೌಲಿಂಗ್ ಆಲ್​ರೌಂಡರ್ ಕೊರತೆಯನ್ನು ಅರ್ಶಿನ್ ಕುಲ್ಕರ್ಣಿ ನೀಗಿಸಲಿದ್ದಾರಾ ಕಾದು ನೋಡಬೇಕಿದೆ.

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್