AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2027: ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ವದ ಬದಲಾವಣೆ

Jatin Barucha Joins Mumbai Indians: ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಇತ್ತೀಚಿನ ಆವೃತ್ತಿಗಳಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ತಂಡವನ್ನು ಬಲಪಡಿಸುವ ನಿಟ್ಟಿನಲ್ಲಿ, ಮುಂಬೈ ಇಂಡಿಯನ್ಸ್ ಮಾಜಿ ರಾಜಸ್ಥಾನ್ ರಾಯಲ್ಸ್ ಕ್ರಿಕೆಟ್ ನಿರ್ದೇಶಕ ಜುಬಿನ್ ಭರುಚಾ ಅವರನ್ನು ಪ್ರದರ್ಶನ ನಿರ್ದೇಶಕರಾಗಿ ನೇಮಿಸಿದೆ. ಯುವ ಪ್ರತಿಭೆಗಳನ್ನು ಗುರುತಿಸಿ, ಅಭಿವೃದ್ಧಿಪಡಿಸುವಲ್ಲಿ ಅಪಾರ ಅನುಭವ ಹೊಂದಿರುವ ಭರುಚಾ, ಮುಂಬೈ ಇಂಡಿಯನ್ಸ್‌ಗೆ ಹೊಸ ಆಟಗಾರರನ್ನು ಬೆಳೆಸಲು ಮತ್ತು ತಂಡದ ಭವಿಷ್ಯದ ಯಶಸ್ಸಿಗೆ ನೆರವಾಗಲಿದ್ದಾರೆ.

IPL 2027: ಮುಂಬೈ ಇಂಡಿಯನ್ಸ್ ತಂಡದಲ್ಲಿ ಮಹತ್ವದ ಬದಲಾವಣೆ
Mumbai Indians
ಪೃಥ್ವಿಶಂಕರ
|

Updated on:Aug 22, 2026 | 5:29 PM

Share

ಐದು ಬಾರಿಯ ಐಪಿಎಲ್ (IPL) ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಪ್ರದರ್ಶನ ಕಳೆದ ಕೆಲವು ಆವೃತ್ತಿಗಳಿಂದ ಉತ್ತಮವಾಗಿಲ್ಲ. ತಂಡದಲ್ಲಿ ಘಟಾನುಘಟಿ ಆಟಗಾರರೇ ಇದ್ದರೂ ಪ್ರದರ್ಶನ ಮಾತ್ರ ಸುಧಾರಿಸುತ್ತಿಲ್ಲ. ಹೀಗಾಗಿ ಪ್ರತಿ ಆವೃತ್ತಿಗೂ ಮುನ್ನ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕೆಲವು ಬದಲಾವಣೆಗಳಾಗುತ್ತವೆ. ಅದರಂತೆ 2027 ರ ಐಪಿಎಲ್ ಆರಂಭಕ್ಕೆ ಇನ್ನು ಸಾಕಷ್ಟು ಸಮಯ ಇದ್ದರೂ ಮುಂಬೈ ಫ್ರಾಂಚೈಸಿ ತನ್ನ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಲು ತಂಡಕ್ಕೆ ಪ್ರದರ್ಶನ ನಿರ್ದೇಶಕರಾಗಿ ಜುಬಿನ್ ಭರುಚಾ ಅವರನ್ನು ಸೇರಿಸಿಕೊಂಡಿದೆ. ಈ ಮೊದಲು ರಾಜಸ್ಥಾನ್ ರಾಯಲ್ಸ್ ತಂಡದಲ್ಲಿದ್ದ ಜುಬಿನ್, ಇದೀಗ ಮುಂಬೈ ಇಂಡಿಯನ್ಸ್ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮಾಹಿತಿ ನೀಡಿದ ಮುಂಬೈ

ಆಗಸ್ಟ್ 22 ರ ಶನಿವಾರದಂದು ಮುಂಬೈ ಇಂಡಿಯನ್ಸ್ ಪತ್ರಿಕಾ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಜುಬಿನ್ ಭರುಚಾ ಮುಂಬೈ ಫ್ರಾಂಚೈಸಿಗೆ ಸೇರಿದ್ದಾರೆ. ಅವರು ಮುಖ್ಯ ಕೋಚ್ ಮಹೇಲಾ ಜಯವರ್ಧನೆ ಸೇರಿದಂತೆ ಮುಂಬೈ ಇಂಡಿಯನ್ಸ್ ಸಹಾಯಕ ಸಿಬ್ಬಂದಿಯೊಂದಿಗೆ ಕೆಲಸ ಮಾಡಲಿದ್ದು, ಹೊಸ ಆಟಗಾರರನ್ನು ಬೆಳೆಸುವ ಕೆಲಸವನ್ನು ನಿರ್ವಹಿಸಲಿದ್ದಾರೆ ಎಂದಿದೆ.

ಯಾರು ಈ ಜುಬಿನ್ ಭರುಚಾ?

ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಜುಬಿನ್ ಭರುಚಾ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರ್ಪಡೆಗೊಂಡಿರುವುದು ಮಹತ್ವದ್ದಾಗಿದೆ. ಏಕೆಂದರೆ ಅವರಿಗೆ ಯುವ ಆಟಗಾರರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ವ್ಯಾಪಕ ಅನುಭವವಿದೆ. ಕಳೆದ ದಶಕದಲ್ಲಿ ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಹೊರಹೊಮ್ಮಿರುವ ಅನೇಕ ಯುವ ಆಟಗಾರರ ಹಿಂದೆ ಜುಬಿನ್ ಭರುಚಾ ಅವರ ಶ್ರಮವಿದೆ.

ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿಯಂತಹ ಯುವ ಪ್ರತಿಭೆಗಳ ಹುಡುಕಾಟದಲ್ಲಿ ಭರುಚಾ ಅವರ ಕೊಡುಗೆ ಅಪಾರವಾಗಿದೆ. ಎರಡು ವರ್ಷಗಳ ಹಿಂದೆ ವೈಭವ್ ಅವರ ಟ್ರಯಲ್ಸ್ ನಡೆಸಿದವರು ಭರುಚಾ. ವೈಭವ್ ಅವರ ಆಟವನ್ನು ಗಮನಿಸಿದ ಭರುಚಾ ಐಪಿಎಲ್ ಹರಾಜಿನಲ್ಲಿ ಅವರನ್ನು ಖರೀದಿಸುವಂತೆ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಸಲಹೆ ನೀಡಿದ್ದರು.

IND vs ENG: ‘ಇದು ಐಪಿಎಲ್ ಅಲ್ಲ’; ಟೀಂ ಇಂಡಿಯಾ ಆಟಗಾರರನ್ನು ಎಚ್ಚರಿಸಿದ ಆರ್ಚರ್

ರಾಜಸ್ಥಾನ ತಂಡದಲ್ಲಿದ್ದ ಭರುಚಾ

ಮುಂಬೈ ಮತ್ತು ಸರ್ರೆ ಪರ 17 ಪ್ರಥಮ ದರ್ಜೆ ಪಂದ್ಯಗಳಲ್ಲಿ 1,000 ಕ್ಕೂ ಹೆಚ್ಚು ರನ್ ಗಳಿಸಿರುವ ಮಾಜಿ ಬ್ಯಾಟ್ಸ್‌ಮನ್ ಜುಬಿನ್ ಭರುಚಾ, ಐಪಿಎಲ್ ಆರಂಭದಿಂದಲೂ ರಾಜಸ್ಥಾನ ರಾಯಲ್ಸ್‌ ತಂಡದಲ್ಲಿ ಕೆಲಸ ಮಾಡಿದ್ದಾರೆ. 2008 ರಿಂದ 2015 ರವರೆಗೆ ತಂಡದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಭರುಚಾ ಎರಡು ವರ್ಷಗಳ ನಿಷೇಧದ ಸಮಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ ತಂಡದಲ್ಲಿದ್ದರು. ನಂತರ 2018 ರಲ್ಲಿ ರಾಜಸ್ಥಾನ ತಂಡಕ್ಕೆ ಮರಳಿದ ಭರುಚಾ 2026 ರವರೆಗೆ ರಾಜಸ್ಥಾನ ರಾಯಲ್ಸ್‌ನಲ್ಲಿ ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Sat, 22 August 26

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ