AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ajinkya Rahane: ಜಸ್ಟ್ 37 ಅಷ್ಟೇ… ನಾನು ಇನ್ನೂ ಸಹ ಯಂಗ್..!

MI vs KKR: ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು 20 ಓವರ್​ಗಳಲ್ಲಿ 220 ರನ್​ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ಕೇವಲ 19.1 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Ajinkya Rahane: ಜಸ್ಟ್ 37 ಅಷ್ಟೇ... ನಾನು ಇನ್ನೂ ಸಹ ಯಂಗ್..!
Ajinkya Rahane
ಝಾಹಿರ್ ಯೂಸುಫ್
|

Updated on: Mar 30, 2026 | 10:59 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆರ್ ತಂಡವು 20 ಓವರ್​ಗಳಲ್ಲಿ 220 ರನ್ ಕಲೆಹಾಕಿತು. ಈ ಗುರಿಯನ್ನು ಮುಂಬೈ ಇಂಡಿಯನ್ಸ್ ತಂಡವು 19.1 ಓವರ್​ಗಳಲ್ಲಿ ಚೇಸ್ ಮಾಡಿದೆ. ಪರಿಣಾಮ ಮೊದಲ ಮ್ಯಾಚ್​ನಲ್ಲಿ ಬೃಹತ್ ಮೊತ್ತ ಪೇರಿಸಿದರೂ ಕೆಕೆಆರ್ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಆರಂಭಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ, ನಾವು  220-225 ರನ್​ಗಳ ಗುರಿ ಉತ್ತಮ ಮೊತ್ತ ಎಂದು ನಾನು ಭಾವಿಸಿದ್ದೆವು. ಅದರಂತೆ ನಾವು ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆವು. ಆದರೆ ಅನಾನುಭವಿ ಬೌಲಿಂಗ್ ದಾಳಿಯಿಂದಾಗಿ ಸೋಲಬೇಕಾಯಿತು.

ಮುಂಬೈ ಇಂಡಿಯನ್ಸ್ ಎಂಬುದು ಬಲಿಷ್ಠ ಬ್ಯಾಟಿಂಗ್ ತಂಡ. ಅವರ ವಿರುದ್ಧ ಆಡುವುದೇ ಕಲಿಕೆಯ ವಿಷಯ. ಏಕೆಂದರೆ ನಮ್ಮ ತಂಡದಲ್ಲಿದದ್ದು ಅನಾನುಭವಿ ಬೌಲರ್​ಗಳು. ವೈಭವ್ ಅರೋರ, ಕಾರ್ತಿಕ್ ತ್ಯಾಗಿ, ಐಪಿಎಲ್‌ಗೆ ಹೊಸಬರಾದ ಬ್ಲೆಸಿಂಗ್ ಮುಝರಬಾನಿ ಎಲ್ಲರೂ ದೊಡ್ಡ ಅನುಭವ ಹೊಂದಿಲ್ಲ.

ಇದರ ಸಂಪೂರ್ಣ ಲಾಭ ಪಡೆದಿರುವ ಮುಂಬೈ ಇಂಡಿಯನ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದೆ. ಇದರಿಂದಾಗಿ ನಮ್ಮ ಬೌಲರ್‌ಗಳು ಖಂಡಿತವಾಗಿಯೂ ಕಲಿಯುತ್ತಾರೆ. ಈ ಕಲಿಕೆಯೊಂದಿಗೆ ಮುಂದಿನ ಪಂದ್ಯದಲ್ಲಿ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವ ವಿಶ್ವಾಸವಿದೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಮೊದಲ ಪಂದ್ಯದಲ್ಲಿ ಚೆನ್ನಾಗಿ ಬ್ಯಾಟಿಂಗ್ ಮಾಡಿರುವುದು ಸಕಾರಾತ್ಮಕ ವಿಷಯ. ಚೆಂಡಿನೊಂದಿಗೆ ಆ ಸಮತೋಲನವನ್ನು ಕಂಡುಕೊಳ್ಳಬೇಕಿದೆ. ಇಲ್ಲಿ ಕ್ಯಾಮರೋನ್ ಗ್ರೀನ್ ಫಿಟ್​ನೆಸ್ ಸಮಸ್ಯೆಯ ಕಾರಣ ಮೊದಲ ಮ್ಯಾಚ್​ನಲ್ಲಿ ಬೌಲಿಂಗ್ ಮಾಡಿರಲಿಲ್ಲ. ಇದಾಗ್ಯೂ ಮುಂದಿನ ಮ್ಯಾಚ್​ಗಳಲ್ಲಿ ನಮ್ಮ ಬೌಲರ್​ಗಳಿಂದ ಉತ್ತಮ ಪ್ರದರ್ಶನವನ್ನು ಮೂಡಿಬರಲಿದೆ ಎಂಬ ವಿಶ್ವಾಸವಿದೆ ಎಂದು ಅಜಿಂಕ್ಯ ರಹಾನೆ ಹೇಳಿದ್ದಾರೆ.

ಇನ್ನು ಈ ಪಂದ್ಯದಲ್ಲಿ 40 ಎಸೆತಗಳಲ್ಲಿ 5 ಭರ್ಜರಿ ಸಿಕ್ಸರ್​ಗಳೊಂದಿಗೆ ಅಜಿಂಕ್ಯ ರಹಾನೆ 67 ರನ್ ಬಾರಿಸಿದ್ದರು. ಈ ಬಗ್ಗೆ ಕೇಳಿದಾಗ, ನಾನು ಇನ್ನೂ ಸಹ ಯಂಗ್ ಆಟಗಾರ. ನನಗೆ ಜಸ್ಟ್ 37 ವರ್ಷವಷ್ಟೇ ಆಗಿದೆ ಎಂದು ನಕ್ಕರು.

ಇದೇ ವೇಳೆ ಸ್ನಾಯು ಸೆಳೆತದ ಕಾರಣ ಮೈದಾನದಿಂದ ಹೊರಗುಳಿದ ಬಗ್ಗೆ ಮಾತನಾಡಿದ ರಹಾನೆ, ಇದೀಗ ಸರಿಯಾಗಿದೆ. ಸ್ನಾಯು ಸೆಳೆತವಿದ್ದ ಕಾರಣ ಫೀಲ್ಡಿಂಗ್ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಯಾವುದೇ ಸಮಸ್ಯೆಯಿಲ್ಲ. ಈ ಮೂಲಕ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದೇನೆ ಎಂಬುದನ್ನು ಖಚಿತಪಡಿಸಿದ್ದಾರೆ.

ಇದನ್ನೂ ಓದಿ: IPL 2026: ಪ್ಲೇಆಫ್​ ಆಡಲಿರುವ 4 ತಂಡಗಳನ್ನು ಹೆಸರಿಸಿದ ಅಂಬಾಟಿ ರಾಯುಡು

ಇತ್ತ ಅಜಿಂಕ್ಯ ರಹಾನೆ ಅರ್ಧದಲ್ಲೇ ಮೈದಾನ ತೊರೆದಿದ್ದರಿಂದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಉಪನಾಯಕ ರಿಂಕು ಸಿಂಗ್ ಮುನ್ನಡೆಸಿದ್ದರು. ಆದರೆ ಮುಂಬೈ ಇಂಡಿಯನ್ಸ್ ಬ್ಯಾಟರ್​ಗಳ ಅಬ್ಬರದಿಂದಾಗಿ ರಿಂಕು ಪ್ಲ್ಯಾನಿಂಗ್​ಗಳು ತಲೆಕೆಳಗಾಗಿದ್ದವು.

Follow Us
ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ
ಗುಜರಾತ್​ನಲ್ಲಿ ದಲಿತರು, ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ
ಮೈಜುಮ್ಮೆನ್ನಿಸುವ ವಿಡಿಯೋ: ಬೃಹತ್ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು!
ಮೈಜುಮ್ಮೆನ್ನಿಸುವ ವಿಡಿಯೋ: ಬೃಹತ್ ಹಾವನ್ನು ನುಂಗುತ್ತಿದ್ದ ಮತ್ತೊಂದು ಹಾವು!
ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ
ಕಾರಿಂದ ವಾಟರ್ ಬಲೂನ್ ಎಸೆದ ಬಾಲಕ
ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?
ಗಿಲ್ಲಿ ಬಳಿ ಲವ್​ ಟಿಪ್ಸ್ ಕೇಳಿದ ಅಭಿಮಾನಿ; ನಟನ ಉತ್ತರ ಏನು?
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಗಂಗಾವತಿಯಲ್ಲಿ ಸೈಕೋ ಕಳ್ಳ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಉಗುರುಗಳಿಗೆ ಈ ಬಣ್ಣ ಹಚ್ಚಿದ್ರೆ ತೊಂದರೆ ತಪ್ಪಿದ್ದಲ್ಲ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ವಿದೇಶಿ ಅತಿಥಿಗಳ ಮುಂದೆ ಎಡವಿ ಬಿದ್ದ ಪಾಕಿಸ್ತಾನ ಉಪ ಪ್ರಧಾನಿ ಇಶಾಕ್ ದಾರ್
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ರಾಮುಲು-ಸಚಿವ ತಿಮ್ಮಾಪುರ ಪ್ರಚಾರದ ವೇಳೆ ಕೈ ಕೈ ಮಿಲಾಯಿಸಿಸಿದ ಕಾರ್ಯಕರ್ತರು
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನಲ್ಲಿ ಧರೆಗುರುಳಿದ ಮರದ ಬೃಹತ್ ರೆಂಬೆ: ತಪ್ಪಿದ ಭಾರೀ ಅನಾಹುತ