AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ

Mumbai Indians vs Lucknow Super Giants in Kannada Playing XI: ಈ ಪಂದ್ಯಕ್ಕೆ ಮುಂಬೈ ತಂಡದ ನಾಯಕನನ್ನು ಬದಲಿಸಲಾಗಿದೆ. ಗಾಯದ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ ಈ ಪಂದ್ಯವನ್ನು ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ.

MI vs LSG Playing XI: ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ನಾಲ್ಕು ಬದಲಾವಣೆ
Mi Vs Lsg Toss
ಪೃಥ್ವಿಶಂಕರ
|

Updated on:May 04, 2026 | 7:28 PM

Share

ಐಪಿಎಲ್ 2026 (IPL 2026) ರ 47 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (MI vs LSG) ನಡುವೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇದುವರೆಗೆ ಈ ಆವೃತ್ತಿಯಲ್ಲಿ ಉಭಯ ತಂಡಗಳ ಪ್ರದರ್ಶನ ನಿರಸವಾಗಿದೆ. ಏಕೆಂದರೆ ಮುಂಬೈ ಆಡಿರುವ 9 ಪಂದ್ಯಗಳಲ್ಲಿ 7 ರಲ್ಲಿ ಸೋತಿದ್ದರೆ, ಇತ್ತ ಲಕ್ನೋ ಆಡಿರುವ 8 ಪಂದ್ಯಗಳಲ್ಲಿ 6 ರಲ್ಲಿ ಸೋತಿದೆ. ಇದರರ್ಥ ಮುಂಬೈ ಲೀಗ್ ಹಂತದಲ್ಲೇ ತನ್ನ ಪ್ರಯಾಣವನ್ನು ಅಂತ್ಯಗೊಳಿಸುವುದು ಭಾಗಶಃ ಖಚಿತವಾಗಿದೆ. ಇತ್ತ ಲಕ್ನೋ ಮುಂದಿನ ಸುತ್ತಿಗೆ ಅರ್ಹತೆ ಪಡೆಯಬೇಕಾದರೆ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಿದೆ. ಹೀಗಾಗಿ ಈ ಪಂದ್ಯ ಲಕ್ನೋಗೆ ಬಹಳ ಮುಖ್ಯವಾಗಿದೆ.

ಟಾಸ್ ಗೆದ್ದ ಮುಂಬೈ

ಈ ಪಂದ್ಯಕ್ಕೆ ಮುಂಬೈ ತಂಡದ ನಾಯಕನನ್ನು ಬದಲಿಸಲಾಗಿದೆ. ಗಾಯದ ಕಾರಣದಿಂದಾಗಿ ಹಾರ್ದಿಕ್ ಪಾಂಡ್ಯ ಈ ಪಂದ್ಯವನ್ನು ಆಡುತ್ತಿಲ್ಲ. ಹೀಗಾಗಿ ಅವರ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಸೂರ್ಯಕುಮಾರ್ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಹೀಗಾಗಿ ಲಕ್ನೋ ತಂಡ ಮೊದಲು ಬ್ಯಾಟಿಂಗ್‌ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ.

ಅದರಂತೆ ಮುಂಬೈ ತಂಡದಲ್ಲಿ ನಾಯಕ ಸೇರಿದಂತೆ ಮೂರು ಬದಲಾವಣೆಗಳನ್ನು ಮಾಡಲಾಗಿದೆ. ಗಾಯದ ಕಾರಣದಿಂದಾಗಿ ಕೆಲವು ಪಂದ್ಯಗಳಿಗೆ ಗೈರಾಗಿದ್ದ ಮಾಜಿ ನಾಯಕ ರೋಹಿತ್ ಶರ್ಮಾ ಈ ಪಂದ್ಯದಿಂದ ತಂಡದಲ್ಲಿ ಆಡುತ್ತಿದ್ದಾರೆ. ಹಾಗೆಯೇ ಹಾರ್ದಿಕ್ ಪಾಂಡ್ಯ ಬದಲಿಗೆ ದೀಪಕ್ ಚಾಹರ್ ಆಡುತ್ತಿದ್ದರೆ, ಟ್ರೆಂಟ್ ಬೌಲ್ಟ್ ಬದಲಿಗೆ ಕಾರ್ಬಿನ್ ಬಾಷ್ ಆಡಲಿದ್ದಾರೆ. ಇತ್ತ ಲಕ್ನೋ ತಂಡದಲ್ಲೂ ಮೂರು ಬದಲಾವಣೆಗಳನ್ನು ಮಾಡಲಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಮುಂಬೈ ಇಂಡಿಯನ್ಸ್: ರಿಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ನಮನ್ ಧೀರ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ವಿಲ್ ಜಾಕ್ಸ್, ರಾಜ್ ಬಾವಾ (ರಾಬಿನ್ ಮಿಂಜ್ ಬದಲಿಗೆ), ಕಾರ್ಬಿನ್ ಬಾಷ್ (ಟ್ರೆಂಟ್ ಬೌಲ್ಟ್ ಬದಲಿಗೆ), ದೀಪಕ್ ಚಹಾರ್ (ಹಾರ್ದಿಕ್ ಪಾಂಡ್ಯ ಬದಲಿಗೆ), ಜಸ್ಪ್ರೀತ್ ಬುಮ್ರಾ, ಎಎಮ್ ಗಜನ್ಫರ್, ಮತ್ತು ರಘು ಶರ್ಮಾ (ಕ್ರಿಶ್ ಭಗತ್ ಬದಲಿಗೆ).

ಇಂಪ್ಯಾಕ್ಟ್ ಪ್ಲೇಯರ್ಸ್​: ರೋಹಿತ್ ಶರ್ಮಾ, ಮಯಾಂಕ್ ರಾವತ್, ರಾಬಿನ್ ಮಿಂಜ್, ಶಾರ್ದೂಲ್ ಠಾಕೂರ್ ಮತ್ತು ಟ್ರೆಂಟ್ ಬೌಲ್ಟ್.

ಲಕ್ನೋ ಸೂಪರ್​ಜೈಂಟ್ಸ್: ಮಿಚೆಲ್ ಮಾರ್ಷ್, ಜೋಶ್ ಇಂಗ್ಲಿಸ್ (ಆಯುಷ್ ಬಡೋನಿ ಬದಲಿಗೆ), ನಿಕೋಲಸ್ ಪೂರನ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್ (ನಾಯಕ), ಅಕ್ಷತ್ ರಘುವಂಶಿ (ಮುಕುಲ್ ಚೌಧರಿ ಬದಲಿಗೆ), ಹಿಮ್ಮತ್ ಸಿಂಗ್ (ದಿಗ್ವೇಶ್ ಸಿಂಗ್ ಬದಲಿಗೆ), ಮೊಹಮ್ಮದ್ ಶಮಿ, ಮೊಹ್ಸಿನ್ ಖಾನ್, ಅವೇಶ್ ಖಾನ್, ಮತ್ತು ಪ್ರಿನ್ಸ್ ಯಾದವ್.

ಇಂಪ್ಯಾಕ್ಟ್ ಪ್ಲೇಯರ್ಸ್​: ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ಸಿಂಗ್, ಮಯಾಂಕ್ ಯಾದವ್, ಶಹಬಾಜ್ ಅಹಮದ್ ಮತ್ತು ಅಬ್ದುಲ್ ಸಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:25 pm, Mon, 4 May 26

Follow Us
ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಸ್ಪಷ್ಟನೆ
ಕಾನೂನು ಇರುವುದೇ ಹಾಗೆ: ಬಿಜೆಪಿ ಆರೋಪಗಳಿಗೆ ಸ್ಪೀಕರ್ ಖಾದರ್ ಸ್ಪಷ್ಟನೆ
ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಟಿಎಂಸಿ ಗೂಂಡಾಗಳ ದೌರ್ಜನ್ಯವನ್ನು ಬಿಜೆಪಿ ಸಹಿಸುವುದಿಲ್ಲ; ಸುವೇಂದು ಅಧಿಕಾರಿ
ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ
ಆ ಸ್ಟಾರ್ ನಟನ ಸಿನಿಮಾ ನೋಡುವುದೇ ಬಿಟ್ಟ ಯಶ್: ವಿಡಿಯೋ
ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್
ಎರಡುವರೆ ವರ್ಷ ಬಳಿಕ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಜೀವರಾಜ್
ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?
ಮೇ 10ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಏನು ವಿಶೇಷ?
ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್
ಸಿಕ್ಕ ಸಿಕ್ಕ ಗೋಡೆ ನೋಡಿ ಮೂತ್ರ ವಿಸರ್ಜನೆ ಮಾಡ್ತೀರಾ? ಹುಷಾರ್
ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ
ಬಡ್ತಿ ಪರೀಕ್ಷೆಯಲ್ಲೂ ಕನ್ನಡಕ್ಕೆ ಅವಕಾಶ ನೀಡದ ರೈಲ್ವೆ ಇಲಾಖೆ
ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ
ಡಾಬಸ್ ಪೇಟೆ ಬಳಿ ಸರಣಿ ಅಪಘಾತ: ಇಬ್ಬರ ಸ್ಥಿತಿ ಗಂಭೀರ
ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌
ಪ್ರಮಾಣ ವಚನಕ್ಕೆ ಸಿದ್ಧತೆ ನಡೆಸಿದ್ದ ವಿಜಯ್‌ಗೆ ಬಿಗ್‌ ಶಾಕ್‌
ದಾವಣಗೆರೆ: ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಹೇಳಿದ್ದಿಷ್ಟು
ದಾವಣಗೆರೆ: ಕಾಂಗ್ರೆಸ್​​ ಗೆಲುವಿಗೆ ಕಾರಣ ಯಾರು? ಜಬ್ಬಾರ್​ ಹೇಳಿದ್ದಿಷ್ಟು