AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಇಬ್ಬರು ವಿದೇಶಿ ಸ್ಟಾರ್ ಆಟಗಾರರು ಔಟ್?

ಆರ್​ಸಿಬಿಯಲ್ಲಿ ಕೆಲವೇ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಕಾರಣಕ್ಕೆ ಎರಡು ವಿದೇಶಿ ಆಟಗಾರರಿಗೆ ಬೇಂಚ್ ಕಾಯಿಸುವ ಕೆಲಸ ನೀಡಲು ನಿರ್ಧರಿಸಲಾಗಿದೆ ಎಂದು ವರದಿ ಆಗಿದೆ

ಆರ್​ಸಿಬಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಇಬ್ಬರು ವಿದೇಶಿ ಸ್ಟಾರ್ ಆಟಗಾರರು ಔಟ್?
ಗ್ರೀನ್-ಮ್ಯಾಕ್ಸ್​ವೆಲ್
ರಾಜೇಶ್ ದುಗ್ಗುಮನೆ
|

Updated on: Apr 11, 2024 | 9:51 AM

Share

ಆರ್​ಸಿಬಿ (RCB) ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮುಖಾಮುಖಿ ಆಗುತ್ತಿವೆ. ಐಪಿಎಲ್ ಈ ಸೀಸನ್​ನ​ 25ನೇ ಮ್ಯಾಚ್ ಇದಾಗಿದ್ದು, ಎರಡೂ ತಂಡಗಳು ತಲಾ ಎರಡು ಪಾಯಿಂಟ್ ಗಳಿಸಿ ಅಂಕಪಟ್ಟಿಯಲ್ಲಿ ಕೊನೆಯಲ್ಲಿವೆ. ಇಂದು ಗೆದ್ದ ತಂಡಕ್ಕೆ ಎರಡು ಅಂಕ ಸಿಗಲಿದೆ. ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರೋ ಆರ್​​ಸಿಬಿಗೆ ಇಂದು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಇದಕ್ಕಾಗಿ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಆರ್​ಸಿಬಿ ತಂಡ ಆಡಿದ ಐದು ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದಿದೆ. ಮುಂಬೈ ಇಂಡಿಯನ್ಸ್ ಆಡಿದ ನಾಲ್ಕು ಪಂದ್ಯಗಳಲ್ಲಿ ಒಂದು ಮ್ಯಾಚ್ ಗೆದ್ದಿದೆ. ಹೀಗಾಗಿ ಎರಡೂ ತಂಡಗಳಿಗೆ ಗೆಲ್ಲಬೇಕಾದ ಅನಿವಾರ್ಯತೆ ಇದೆ. ಮುಂಬೈಗೆ ಹೋಂ ಪಿಚ್ ಆಗಿರುವುದರಿಂದ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯೂ ಹೌದು. ಆರ್​ಸಿಬಿಯಲ್ಲಿ ಕೆಲವೇ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಈ ಕಾರಣಕ್ಕೆ ಎರಡು ವಿದೇಶಿ ಆಟಗಾರರಿಗೆ ಬೇಂಚ್ ಕಾಯಿಸುವ ಕೆಲಸ ನೀಡಲು ನಿರ್ಧರಿಸಲಾಗಿದೆ ಎಂದು ವರದಿ ಆಗಿದೆ

ವಿರಾಟ್ ಕೊಹ್ಲಿ ಮಾತ್ರ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದಾರೆ. ವಿದೇಶಿ ಆಟಗಾರರಾದ ಮ್ಯಾಕ್ಸ್​ವೆಲ್ ಹಾಗೂ ಕ್ಯಾಮರೂನ್ ಗ್ರೀನ್ ಸಂಪೂರ್ಣ ವಿಫಲತೆ ಕಂಡಿದ್ದಾರೆ. ಇಬ್ಬರೂ ಬೌಲಿಂಗ್ ಹಾಗೂ ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿಲ್ಲ. ಮ್ಯಾಕ್ಸ್​ವೆಲ್​ ಐದು ಇನ್ನಿಂಗ್ಸ್​ನಲ್ಲಿ ಗಳಿಸಿದ್ದು 32 ರನ್ ಮಾತ್ರ. ಗ್ರೀನ್ 68 ರನ್ ಕಲೆ ಹಾಕಿದ್ದು, ಬೌಲಿಂಗ್​ನಲ್ಲಿ ದುಬಾರಿ ಆಗಿದ್ದಾರೆ.

ಇದನ್ನೂ ಓದಿ: ಮುಂಬೈ- ಆರ್​ಸಿಬಿ ಫೈಟ್; ಪಂದ್ಯ ಎಲ್ಲಿ ನಡೆಯಲ್ಲಿದೆ ಗೊತ್ತಾ?

ಇಂದಿನ ಪಂದ್ಯಕ್ಕೆ ಮ್ಯಾಕ್ಸ್​ವೆಲ್ ಬದಲು ವಿಲ್ ಜಾಕ್ಸ್ ಬರೋ ಸಾಧ್ಯತೆ ಇದೆ. ಈ ಮೂಲಕ ವಿರಾಟ್ ಕೊಹ್ಲಿ ಹಾಗೂ ಫಾಪ್​ ಡುಪ್ಲೆಸಿಸ್ ಓಪನಿಂಗ್ ತೆರಳಲಿದ್ದು, ಆ ಬಳಿಕ ವಿಲ್ ಜಾಕ್ಸ್ ಅಖಾಡಕ್ಕೆ ಇಳಿಯಲಿದ್ದಾರೆ. ಬೌಲಿಂಗ್​ನಲ್ಲೂ ಅವರು ಸಹಕಾರಿ ಆಗಲಿದ್ದಾರೆ. ರಜತ್ ಪಟಿದಾರ್ ಬದಲು ಮಹಿಪಾಲ್ ಲೊಮ್ರೊರ್ ಬರೋ ಸಾಧ್ಯತೆ ಇದೆ. ಗ್ರೀನ್​ನ ಕೈಬಿಟ್ಟರೆ ಆ ಸ್ಥಾನಕ್ಕೆ ಯಾರು ಎನ್ನುವ ಪ್ರಶ್ನೆ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ