AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಈಗ ಭಾರತ, ಅಂದು ನೀವು.. ಮಾಡಿದ್ದುಣ್ಣೋ ಮಹರಾಯ! ತಮ್ಮದೆ ಮಂಡಳಿಯ ಕಾಲೆಳೆದ ವಾನ್, ಪೀಟರ್ಸನ್

IND vs ENG: ಕೋವಿಡ್ ಪ್ರಕರಣಗಳು ತಮ್ಮ ಶಿಬಿರದಲ್ಲಿ ವರದಿಯಾದ ಕಾರಣ ಇಂಗ್ಲೆಂಡ್ ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸದ ಮಧ್ಯದಲ್ಲಿ ಏಕದಿನ ಸರಣಿಯನ್ನು ಕೈಬಿಟ್ಟಿತ್ತು. ಇದನ್ನು ನೆನಪಿಸಿ ವಾನ್ ಟ್ವೀಟ್ ಮಾಡಿದ್ದಾರೆ.

IND vs ENG: ಈಗ ಭಾರತ, ಅಂದು ನೀವು.. ಮಾಡಿದ್ದುಣ್ಣೋ ಮಹರಾಯ! ತಮ್ಮದೆ ಮಂಡಳಿಯ ಕಾಲೆಳೆದ ವಾನ್, ಪೀಟರ್ಸನ್
ಮ್ಯಾಂಚೆಸ್ಟರ್ ಟೆಸ್ಟ್​ ರದ್ದುಗೊಂಡಿದೆ
TV9 Web
| Updated By: ಪೃಥ್ವಿಶಂಕರ|

Updated on:Sep 10, 2021 | 6:03 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಕೊನೆಯ ಮತ್ತು ಐದನೇ ಟೆಸ್ಟ್ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿತ್ತು. ಆದರೆ ಟೀಂ ಇಂಡಿಯಾದಲ್ಲಿ ಕೊರೊನಾ ಪ್ರಕರಣಗಳ ಕಾರಣ ಈ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ಬಿಸಿಸಿಐ ಈ ಪಂದ್ಯವನ್ನು ನಂತರ ಆಯೋಜಿಸುವ ಬಗ್ಗೆ ಇಸಿಬಿಯೊಂದಿಗೆ ಮಾತನಾಡುವುದಾಗಿ ಹೇಳಿದೆ. ಪಂದ್ಯ ಆರಂಭಕ್ಕೆ ಸ್ವಲ್ಪ ಮೊದಲು, ಈ ಪಂದ್ಯ ನಡೆಯುವುದಿಲ್ಲ ಎಂಬ ಸುದ್ದಿ ಹೊರಬಿದ್ದಿತು. ಈ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸಿದೆ. ಈ ಪಂದ್ಯದಿಂದ ಸರಣಿ ನಿರ್ಧಾರವಾಗುತ್ತಿತ್ತು. ಆದರೆ ಈಗ ಇದಕ್ಕಾಗಿ ಕಾಯುವಿಕೆ ಹೆಚ್ಚಾಗಿದೆ. ಪಂದ್ಯ ರದ್ದಾದ ಸುದ್ದಿಯ ನಂತರ, ಅನೇಕ ಅನುಭವಿಗಳ ಪ್ರತಿಕ್ರಿಯೆಗಳು ಮುಂಚೂಣಿಗೆ ಬಂದಿವೆ. ಇಂಗ್ಲೆಂಡಿನ ಮಾಜಿ ನಾಯಕ ಮೈಕಲ್ ವಾನ್ ತಮ್ಮದೇ ತಂಡವನ್ನು ನಿಂದಿಸಿದ್ದಾರೆ.

ವಾನ್ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಪ್ರವಾಸವನ್ನು ನೆನಪಿಸಿಕೊಂಡು ಟ್ವೀಟ್ ಮೂಲಕ ಇಂಗ್ಲಿಷ್ ತಂಡವನ್ನು ಕಾಲೆಳೆದಿದ್ದಾರೆ. ವಾನ್ ಟ್ವೀಟ್, ಭಾರತವು ಇಂಗ್ಲೀಷ್ ಕ್ರಿಕೆಟ್ ಅನ್ನು ನಿರಾಶೆಗೊಳಿಸಿತು !!! ಆದರೆ ಇಂಗ್ಲೆಂಡ್ ದಕ್ಷಿಣ ಆಫ್ರಿಕಾ ಕ್ರಿಕೆಟ್ ಅನ್ನು ನಿರಾಶೆಗೊಳಿಸಿತು !!! ಕೋವಿಡ್ ಪ್ರಕರಣಗಳು ತಮ್ಮ ಶಿಬಿರದಲ್ಲಿ ವರದಿಯಾದ ಕಾರಣ ಇಂಗ್ಲೆಂಡ್ ಕಳೆದ ವರ್ಷ ದಕ್ಷಿಣ ಆಫ್ರಿಕಾ ಪ್ರವಾಸದ ಮಧ್ಯದಲ್ಲಿ ಏಕದಿನ ಸರಣಿಯನ್ನು ಕೈಬಿಟ್ಟಿತ್ತು. ಇದನ್ನು ನೆನಪಿಸಿ ವಾನ್ ಟ್ವೀಟ್ ಮಾಡಿದ್ದಾರೆ.

ವಾನ್​ ದಾರಿ ಹಿಡಿದ ಕೆವಿನ್ ಪೀಟರ್ಸನ್ ವಾನ್ ಹೊರತುಪಡಿಸಿ, ಇನ್ನೊಬ್ಬ ಇಂಗ್ಲೆಂಡ್ ಮಾಜಿ ನಾಯಕ ತನ್ನ ತಂಡಕ್ಕೆ ಸಲಹೆ ನೀಡಿದ್ದಾರೆ. ಇಂಗ್ಲೆಂಡ್​ನ ಮಾಜಿ ನಾಯಕ ಕೆವಿನ್ ಪೀಟರ್ಸನ್ ಕೂಡ ಟ್ವೀಟ್ ಮಾಡುವ ಮೂಲಕ ಇಂಗ್ಲೆಂಡ್ ದಕ್ಷಿಣ ಆಫ್ರಿಕಾ ಪ್ರವಾಸವನ್ನು ನೆನಪಿಸಿಕೊಂಡಿದ್ದಾರೆ. ಕೋವಿಡ್ ಭಯದಿಂದ ಇಂಗ್ಲೆಂಡ್ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಬಿಟ್ಟುಬಿಟ್ಟಿತು. ಇದು ಸಿಎಸ್‌ಎಗೆ ಬಹಳಷ್ಟು ತೊಂದರೆ ಉಂಟುಮಾಡಿತು. ಆದ್ದರಿಂದ ಯಾರನ್ನೂ ಬೆರಳು ಮಾಡಬೇಡಿ ಎಂದು ಪೀಟರ್ಸನ್ ಟ್ವೀಟ್ ಮಾಡಿದ್ದಾರೆ.

ಪಂದ್ಯ ನಂತರ ಆಯೋಜನೆಯಾಗಬಹುದು ಪಂದ್ಯ ಆರಂಭಕ್ಕೂ ಮುನ್ನ, ಈ ಪಂದ್ಯವನ್ನು ಇಂದಿನಿಂದ ಅಂದರೆ ಶುಕ್ರವಾರದಿಂದ ಆರಂಭಿಸಲು ಸಾಧ್ಯವಿಲ್ಲ ಎಂದು ಸುದ್ದಿಯಿತ್ತು. ಆದರೆ ನಂತರ ಬಿಸಿಸಿಐ ಮತ್ತು ಇಸಿಬಿ ಪರಸ್ಪರ ಒಪ್ಪಿಗೆಯ ಮೇರೆಗೆ ಈ ಪಂದ್ಯವನ್ನು ರದ್ದುಗೊಳಿಸಲು ನಿರ್ಧರಿಸಿವೆ. ಭಾರತ ಶಿಬಿರದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು, ಟೀಮ್ ಇಂಡಿಯಾ ಆಡಲು ನಿರಾಕರಿಸಿತು. ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯವನ್ನು ಮುಂದೂಡಬೇಕಾಯಿತು. ಟೀಮ್ ಇಂಡಿಯಾ ಕೊನೆಯದಾಗಿ 2007 ರಲ್ಲಿ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿತು. BCCI ಈಗ ಒಂದು ಹೇಳಿಕೆಯನ್ನು ನೀಡಿದೆ, ಅದು ಮುಂದಿನ ಹಂತದಲ್ಲಿ ಈ ಪಂದ್ಯವನ್ನು ಆಯೋಜಿಸಲು ಇಂಗ್ಲಿಷ್ ಮಂಡಳಿಯೊಂದಿಗೆ ಕೆಲಸ ಮಾಡುವುದಾಗಿ ಹೇಳಿದೆ. ಎರಡೂ ಮಂಡಳಿಗಳು ಆಟಗಾರರ ಸುರಕ್ಷತೆಗೆ ಧಕ್ಕೆಯಾಗದಂತೆ ರದ್ದಾದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಅನ್ನು ಮರು-ಸಂಘಟಿಸಲು ಕೆಲಸ ಮಾಡುತ್ತವೆ ಎಂದು ಬಿಸಿಸಿಐ ಹೇಳಿದೆ.

ಟೀಂ ಇಂಡಿಯಾದಲ್ಲಿ ಕೊರೊನಾ ಪ್ರಕರಣ ಭಾರತ ತಂಡದ ಮುಖ್ಯ ಕೋಚ್ ಆಗಿರುವ ರವಿಶಾಸ್ತ್ರಿ ಅವರು ಮೊದಲು ಕೋವಿಡ್ -19 ಗೆ ತುತ್ತಾದರು. ನಾಲ್ಕನೇ ಟೆಸ್ಟ್ ಪಂದ್ಯದ ಕೊನೆಯ ದಿನದಂದು ಅವರ ವರದಿ ಪಾಸಿಟಿವ್ ಆಗಿತ್ತು. ಅವರೊಂದಿಗೆ ಬೌಲಿಂಗ್ ತರಬೇತುದಾರ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್. ಶ್ರೀಧರ್ ಮತ್ತು ಫಿಸಿಯೋ ನಿತಿನ್ ಪಟೇಲ್ ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಇದರ ನಂತರ ಭರತ್ ಮತ್ತು ಶ್ರೀಧರ್ ಸಹ ಕೊರೊನಾ ಸೋಂಕಿಗೆ ಒಳಗಾದರು. ಇದರ ನಂತರ, ತಂಡದ ಎರಡನೇ ಫಿಸಿಯೋ ಯೋಗೀಶ್ ಪರ್ಮಾರ್ ಕೂಡ ಕೋವಿಡ್‌ನ ಹಿಡಿತಕ್ಕೆ ಒಳಗಾದರು.

Published On - 5:00 pm, Fri, 10 September 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್