AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಈ ತಂಡ ಏಕದಿನ, ಟಿ20 ವಿಶ್ವಕಪ್‌, ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲಬೇಕು ಎಂದ ಮೈಕಲ್ ವಾನ್

ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ (Michael Vaughan) ದೊಡ್ಡ ಹೇಳಿಕೆ ನೀಡಿದ್ದು, ಭಾರತದ ಈಗಿನ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ (T20I World Cup) ಮತ್ತು ಚಾಂಪಿಯನ್ ಟ್ರೋಫಿಯನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ.

ಭಾರತದ ಈ ತಂಡ ಏಕದಿನ, ಟಿ20 ವಿಶ್ವಕಪ್‌, ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲಬೇಕು ಎಂದ ಮೈಕಲ್ ವಾನ್
Team India and Michael Vaughan
TV9 Web
| Updated By: Vinay Bhat|

Updated on:Jul 14, 2022 | 10:23 AM

Share

ಭಾರತ ಕ್ರಿಕೆಟ್ ತಂಡ (Team India) ಸದ್ಯ ಏಕದಿನ ಮತ್ತು ಟಿ20 ಕ್ರಿಕೆಟ್​ನಲ್ಲಿ ಬಲಿಷ್ಠ ತಂಡವಾಗಿ ಹೊರಹೊಮ್ಮುತ್ತಿದೆ. ಸದ್ಯ ಸಾಗುತ್ತಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲೂ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರುತ್ತಿದೆ. ಇದಕ್ಕೂ ಮುನ್ನ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನೂ ಭಾರತ ವಶಪಡಿಸಿಕೊಂಡಿತ್ತು. ಹೀಗಿರುವಾಗ ಇಂಗ್ಲೆಂಡ್ ತಂಡದ ಮಾಜಿ ನಾಯಕ ಮೈಕಲ್ ವಾನ್ (Michael Vaughan) ದೊಡ್ಡ ಹೇಳಿಕೆ ನೀಡಿದ್ದು, ಭಾರತದ ಈಗಿನ ಕ್ರಿಕೆಟ್ ತಂಡ ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ (T20I World Cup) ಮತ್ತು ಚಾಂಪಿಯನ್ ಟ್ರೋಫಿಯನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಏಕದಿನ ವಿಶ್ವಕಪ್​ಗೆ ವಾತಾವರಣ ವರ್ಷದಿಂದ ವರ್ಷಕ್ಕೆ ಬದಲಾಗುತ್ತಾ ಇರುತ್ತದೆ. ಆದರೆ, ಭಾರತ ಹೋದಲ್ಲೆಲ್ಲ ವೈಟ್ ಬಾಲ್ ಕ್ರಿಕೆಟ್​ನಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ ಎಂಬುದು ವಾನ್ ಮಾತು.

“ಭಾರತ ತಂಡವು ಸಂದರ್ಭಕ್ಕೆ ತಕ್ಕಂತೆ ಆಡುತ್ತದೆ. ಅದನ್ನು ನಾವು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಕಂಡಿದ್ದೇವೆ. ನಾವು ಆಕ್ರಮಣಶೀಲತೆ ಬಗ್ಗೆ ಮಾತಾಡುತ್ತೇವೆ. ಭಾರತ ತಂಡದ ಬೌಲಿಂಗ್ ವಿಭಾಗದಲ್ಲಿ ಅದಿದೆ. ಆಕ್ರಮಣಕಾರಿ ಆಟ ತಂಡಕ್ಕೆ ತುಂಬಾ ನೆರವು ನೀಡುತ್ತದೆ. ಇಂಗ್ಲೆಂಡ್ ಅತ್ಯುತ್ತಮ ತಂಡ. ಇದುವೇ ಟೀಮ್ ಇಂಡಿಯಾಕ್ಕೆ ಸಹಕಾರಿ ಆಗಿರುವುದು. ಭಾರತದ ಈ ಏಕದಿನ ತಂಡ ಅನೇಕ ಪಂದ್ಯಗಳನ್ನು ಗೆಲ್ಲುತ್ತದೆ. ಭಾರತ ಇಷ್ಟು ಉತ್ತಮ ಪ್ರದರ್ಶನ ನೀಡಲು ಕಾರಣ ಐಪಿಎಲ್. ಭಾರತೀಯ ಆಟಗಾರರಲ್ಲಿ ಅತ್ಯುತ್ತಮ ಕೌಶಲ್ಯವಿದೆ,” ಎಂದು ಹೇಳಿದ್ದಾರೆ.

ಇಂದು ಎರಡನೇ ಏಕದಿನ:

ಇದನ್ನೂ ಓದಿ
Image
India Playing XI vs ENG: ಏಕದಿನ ಸರಣಿ ವಶಕ್ಕೆ ಪಡೆಯಲು ಮಾಸ್ಟರ್ ಪ್ಲಾನ್: ಭಾರತದಲ್ಲಿ ಮಹತ್ವದ ಬದಲಾವಣೆ
Image
IND vs ENG 2nd ODI: ಕ್ರಿಕೆಟ್ ಕಾಶಿಯಲ್ಲಿಂದು ದ್ವಿತೀಯ ಏಕದಿನ: ವಿರಾಟ್ ಕೊಹ್ಲಿ ಈ ಪಂದ್ಯಕ್ಕೂ ಅನುಮಾನ
Image
IND vs WI: ವೆಸ್ಟ್ ಇಂಡೀಸ್‌ ವಿರುದ್ಧದ ಟಿ20 ಸರಣಿಯಿಂದಲೂ ಕೊಹ್ಲಿ ಔಟ್..! ರಾಹುಲ್ ಕಥೆ ಏನು?
Image
ICC T20 Rankings: 44 ಸ್ಥಾನ ಜಿಗಿದು ಟಾಪ್ 5ನೇ ಸ್ಥಾನಕ್ಕೆ ಸೂರ್ಯಕುಮಾರ್ ಎಂಟ್ರಿ; ಟಾಪ್ 20ರಲ್ಲೂ ಇಲ್ಲ ಕೊಹ್ಲಿ..!

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯನ್ನು ವಶಪಡಿಸಿಕೊಂಡ ಬಳಿಕ ಭಾರತ ಇದೀಗ ಏಕದಿನ ಸರಣಿ ಮೇಲೂ ಕಣ್ಣಿಟ್ಟಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 10 ವಿಕೆಟ್​​ಗಳ ಭರ್ಜರಿ ಗೆಲುವು ಕಂಡಿತ್ತು. ಇದೀಗ ರೋಹಿತ್ ಪಡೆ ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಇಂದು ಕ್ರಿಕೆಟ್ ಕಾಶಿ ಲಾರ್ಡ್ಸ್​ ಮೈದಾನದಲ್ಲಿ ದ್ವಿತೀಯ ಪಂದ್ಯ ಆಯೋಜಿಸಲಾಗಿದ್ದು ಭಾರತ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಇಂಗ್ಲೆಂಡ್​​ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ತವರಿನಲ್ಲೇ ಹೀನಾಯ ಸೋಲು ಕಂಡಿರುವ ಬಟ್ಲರ್ ನಾಯಕತ್ವಕ್ಕೂ ಇದೊಂದು ಅಗ್ನಿಪರೀಕ್ಷೆಯಾಗಿದೆ.

ಇಂಗ್ಲೆಂಡ್ ತಂಡದ ನಾಯಕನಾಗಿದ್ದ ಇಯಾನ್ ಮಾರ್ಗನ್ ನಾಯಕತ್ವ ತೊರೆದ ಬಳಿಕ ಕ್ಯಾಪ್ಟನ್ ಆಗಿರುವ ಬಟ್ಲರ್​ ಟಿ20 ಸರಣಿ ಕಳೆದುಕೊಂಡಿದ್ದರು. ಈಗ ಏಕದಿನ ಸರಣಿ ವಶಪಡಿಸಿಕೊಳ್ಳಬೇಕಾದರೆ ಇಂದು ಗೆಲ್ಲಲೇ ಬೇಕಿದೆ. ಆಂಗ್ಲರ ತಂಡದಲ್ಲಿ ಬೆನ್​ ಸ್ಟೋಕ್ಸ್​, ಜೋ ರೂಟ್​, ಬೈರ್​ಸ್ಟೋರಂತಹ ಬಲಿಷ್ಠ ಆಟಗಾರರಿದ್ದರು ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವುತ್ತಿದೆ. ಬ್ಯಾಟಿಂಗ್ ವೈಫಲ್ಯವನ್ನು ಸರಿಪಡಿಸಿಕೊಂಡರೆ, ಈ ಪಂದ್ಯದಲ್ಲಿ ಜಯಿಸುವ ಆಸೆ ಈಡೇರಬಹುದು. ಒಟ್ಟಾರೆ ಇಂದು ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

Published On - 10:23 am, Thu, 14 July 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?