AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಪಾಕ್ ತಂಡ ಪ್ರಕಟ; ಕೋಚ್​ ಕುರ್ಚಿಯಿಂದ ಕೆಳಗಿಳಿದ ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್!

ತಂಡದ ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ರಾಜೀನಾಮೆ ನೀಡಿದ್ದಾರೆ ಎಂಬುದದನ್ನು ಪಿಸಿಬಿ ಸ್ವತಃ ದೃಢಪಡಿಸಿದೆ.

ಟಿ20 ವಿಶ್ವಕಪ್​ಗೆ ಪಾಕ್ ತಂಡ ಪ್ರಕಟ; ಕೋಚ್​ ಕುರ್ಚಿಯಿಂದ ಕೆಳಗಿಳಿದ ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್!
ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್
TV9 Web
| Edited By: |

Updated on: Sep 06, 2021 | 3:50 PM

Share

ಟಿ20 ವಿಶ್ವಕಪ್ ಅನ್ನು ಹತ್ತಿರದಲ್ಲಿಟ್ಟುಕೊಂಡು ಹೊಸ ಕ್ರಿಕೆಟ್ ತರಬೇತುದಾರನನ್ನು ಹುಡುಕುವ ಸವಾಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಂದೆ ಹುಟ್ಟಿಕೊಂಡಿದೆ. ಹೌದು, ಟಿ 20 ವಿಶ್ವಕಪ್‌ಗಾಗಿ 15 ಜನರ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ, ಪಾಕಿಸ್ತಾನ ಕ್ರಿಕೆಟ್‌ಗೆ ಸಂಬಂಧಿಸಿದ ಮತ್ತೊಂದು ದೊಡ್ಡ ಸುದ್ದಿ ಹೊರಬಿದ್ದಿದೆ. ತಂಡದ ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ರಾಜೀನಾಮೆ ನೀಡಿದ್ದಾರೆ ಎಂಬುದದನ್ನು ಪಿಸಿಬಿ ಸ್ವತಃ ದೃಢಪಡಿಸಿದೆ.

ಮಿಸ್ಬಾ ಮತ್ತು ವಕಾರ್ 2019 ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಮತ್ತು ಬೌಲಿಂಗ್ ತರಬೇತುದಾರರಾಗಿ ನೇಮಕಗೊಂಡರು. ಪಿಸಿಬಿಯ ಒಪ್ಪಂದದ ಪ್ರಕಾರ, ಅವರ ಅಧಿಕಾರಾವಧಿಗೆ ಇನ್ನೂ ಒಂದು ವರ್ಷ ಬಾಕಿಯಿದೆ. ಆದಾಗ್ಯೂ, ಈಗ ಇಬ್ಬರೂ ರಾಜೀನಾಮೆ ನೀಡಿರುವುದರಿಂದ, ಪಿಸಿಬಿ ನ್ಯೂಜಿಲ್ಯಾಂಡ್ ವಿರುದ್ಧದ ತವರು ಸರಣಿಗೆ ತಂಡಕ್ಕೆ ಸಕ್ಲೇನ್ ಮುಷ್ತಾಕ್ ಮತ್ತು ಅಬ್ದುಲ್ ರಜಾಕ್ ಅವರಿಗೆ ತಂಡದ ನಿರ್ವಹಣೆಯ ಜವಬ್ದಾರಿಯನ್ನು ಹಸ್ತಾಂತರಿಸಿದೆ.

ಮಿಸ್ಬಾ ಕುಟುಂಬಕ್ಕಾಗಿ ಕೋಚ್ ಕುರ್ಚಿಯನ್ನು ಬಿಟ್ಟರು ಮಿಸ್ಬಾ ಉಲ್ ಹಕ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರದ ಬಗ್ಗೆ ಮಾತನಾಡಿ, ನಾನು ಈಗ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ಬಯಸುತ್ತೆನೆ. ವೆಸ್ಟ್ ಇಂಡೀಸ್​ನಲ್ಲಿ ಸರಣಿಯ ಅಂತ್ಯದ ನಂತರ, ಕೊರೊನಾದಿಂದಾಗಿ ನಾನು ಜಮೈಕಾದಲ್ಲಿ ಸಂಪರ್ಕತಡೆಯನ್ನು ಹೊಂದಿದ್ದಾಗ, ನನ್ನ ಕಳೆದ 2 ವರ್ಷಗಳ ಗ್ರಾಫ್ ನೋಡಲು ನನಗೆ ಅವಕಾಶ ಸಿಕ್ಕಿತು. ಅದನ್ನು ನೋಡುತ್ತಾ, ನಾನು ಈಗ ನನ್ನ ಕುಟುಂಬಕ್ಕೂ ಸಮಯ ನೀಡಬೇಕು ಎಂದು ನಿರ್ಧರಿಸಿದ್ದೇನೆ. ನಾನು ಪಾಕಿಸ್ತಾನದ ಮುಖ್ಯ ತರಬೇತುದಾರನ ಕುರ್ಚಿಯನ್ನು ತೊರೆಯಲು ಇದು ಒಂದು ದೊಡ್ಡ ಕಾರಣವಾಗಿದೆ.

ಇದು ನನ್ನ ನಿರ್ಧಾರಕ್ಕೆ ಸರಿಯಾದ ಸಮಯ. ಕಳೆದ 2 ವರ್ಷಗಳು ತುಂಬಾ ಖುಷಿಯಾಯಿತು. ಇದಕ್ಕಾಗಿ ನಾನು ಎಲ್ಲಾ ತಂಡ ಮತ್ತು ನಿರ್ವಹಣೆಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಂಬರುವ ಕ್ರಿಕೆಟ್ ಸರಣಿ ಮತ್ತು ಟಿ 20 ಗಾಗಿ ನಾನು ಪಾಕಿಸ್ತಾನ ತಂಡವನ್ನು ಅಭಿನಂದಿಸುತ್ತೇನೆ ಎಂದರು.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!