AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಪಾಕ್ ತಂಡ ಪ್ರಕಟ; ಕೋಚ್​ ಕುರ್ಚಿಯಿಂದ ಕೆಳಗಿಳಿದ ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್!

ತಂಡದ ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ರಾಜೀನಾಮೆ ನೀಡಿದ್ದಾರೆ ಎಂಬುದದನ್ನು ಪಿಸಿಬಿ ಸ್ವತಃ ದೃಢಪಡಿಸಿದೆ.

ಟಿ20 ವಿಶ್ವಕಪ್​ಗೆ ಪಾಕ್ ತಂಡ ಪ್ರಕಟ; ಕೋಚ್​ ಕುರ್ಚಿಯಿಂದ ಕೆಳಗಿಳಿದ ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್!
ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್
TV9 Web
| Updated By: ಪೃಥ್ವಿಶಂಕರ|

Updated on: Sep 06, 2021 | 3:50 PM

Share

ಟಿ20 ವಿಶ್ವಕಪ್ ಅನ್ನು ಹತ್ತಿರದಲ್ಲಿಟ್ಟುಕೊಂಡು ಹೊಸ ಕ್ರಿಕೆಟ್ ತರಬೇತುದಾರನನ್ನು ಹುಡುಕುವ ಸವಾಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಂದೆ ಹುಟ್ಟಿಕೊಂಡಿದೆ. ಹೌದು, ಟಿ 20 ವಿಶ್ವಕಪ್‌ಗಾಗಿ 15 ಜನರ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ, ಪಾಕಿಸ್ತಾನ ಕ್ರಿಕೆಟ್‌ಗೆ ಸಂಬಂಧಿಸಿದ ಮತ್ತೊಂದು ದೊಡ್ಡ ಸುದ್ದಿ ಹೊರಬಿದ್ದಿದೆ. ತಂಡದ ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ರಾಜೀನಾಮೆ ನೀಡಿದ್ದಾರೆ ಎಂಬುದದನ್ನು ಪಿಸಿಬಿ ಸ್ವತಃ ದೃಢಪಡಿಸಿದೆ.

ಮಿಸ್ಬಾ ಮತ್ತು ವಕಾರ್ 2019 ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಮತ್ತು ಬೌಲಿಂಗ್ ತರಬೇತುದಾರರಾಗಿ ನೇಮಕಗೊಂಡರು. ಪಿಸಿಬಿಯ ಒಪ್ಪಂದದ ಪ್ರಕಾರ, ಅವರ ಅಧಿಕಾರಾವಧಿಗೆ ಇನ್ನೂ ಒಂದು ವರ್ಷ ಬಾಕಿಯಿದೆ. ಆದಾಗ್ಯೂ, ಈಗ ಇಬ್ಬರೂ ರಾಜೀನಾಮೆ ನೀಡಿರುವುದರಿಂದ, ಪಿಸಿಬಿ ನ್ಯೂಜಿಲ್ಯಾಂಡ್ ವಿರುದ್ಧದ ತವರು ಸರಣಿಗೆ ತಂಡಕ್ಕೆ ಸಕ್ಲೇನ್ ಮುಷ್ತಾಕ್ ಮತ್ತು ಅಬ್ದುಲ್ ರಜಾಕ್ ಅವರಿಗೆ ತಂಡದ ನಿರ್ವಹಣೆಯ ಜವಬ್ದಾರಿಯನ್ನು ಹಸ್ತಾಂತರಿಸಿದೆ.

ಮಿಸ್ಬಾ ಕುಟುಂಬಕ್ಕಾಗಿ ಕೋಚ್ ಕುರ್ಚಿಯನ್ನು ಬಿಟ್ಟರು ಮಿಸ್ಬಾ ಉಲ್ ಹಕ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರದ ಬಗ್ಗೆ ಮಾತನಾಡಿ, ನಾನು ಈಗ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ಬಯಸುತ್ತೆನೆ. ವೆಸ್ಟ್ ಇಂಡೀಸ್​ನಲ್ಲಿ ಸರಣಿಯ ಅಂತ್ಯದ ನಂತರ, ಕೊರೊನಾದಿಂದಾಗಿ ನಾನು ಜಮೈಕಾದಲ್ಲಿ ಸಂಪರ್ಕತಡೆಯನ್ನು ಹೊಂದಿದ್ದಾಗ, ನನ್ನ ಕಳೆದ 2 ವರ್ಷಗಳ ಗ್ರಾಫ್ ನೋಡಲು ನನಗೆ ಅವಕಾಶ ಸಿಕ್ಕಿತು. ಅದನ್ನು ನೋಡುತ್ತಾ, ನಾನು ಈಗ ನನ್ನ ಕುಟುಂಬಕ್ಕೂ ಸಮಯ ನೀಡಬೇಕು ಎಂದು ನಿರ್ಧರಿಸಿದ್ದೇನೆ. ನಾನು ಪಾಕಿಸ್ತಾನದ ಮುಖ್ಯ ತರಬೇತುದಾರನ ಕುರ್ಚಿಯನ್ನು ತೊರೆಯಲು ಇದು ಒಂದು ದೊಡ್ಡ ಕಾರಣವಾಗಿದೆ.

ಇದು ನನ್ನ ನಿರ್ಧಾರಕ್ಕೆ ಸರಿಯಾದ ಸಮಯ. ಕಳೆದ 2 ವರ್ಷಗಳು ತುಂಬಾ ಖುಷಿಯಾಯಿತು. ಇದಕ್ಕಾಗಿ ನಾನು ಎಲ್ಲಾ ತಂಡ ಮತ್ತು ನಿರ್ವಹಣೆಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಂಬರುವ ಕ್ರಿಕೆಟ್ ಸರಣಿ ಮತ್ತು ಟಿ 20 ಗಾಗಿ ನಾನು ಪಾಕಿಸ್ತಾನ ತಂಡವನ್ನು ಅಭಿನಂದಿಸುತ್ತೇನೆ ಎಂದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ