AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ20 ವಿಶ್ವಕಪ್​ಗೆ ಪಾಕ್ ತಂಡ ಪ್ರಕಟ; ಕೋಚ್​ ಕುರ್ಚಿಯಿಂದ ಕೆಳಗಿಳಿದ ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್!

ತಂಡದ ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ರಾಜೀನಾಮೆ ನೀಡಿದ್ದಾರೆ ಎಂಬುದದನ್ನು ಪಿಸಿಬಿ ಸ್ವತಃ ದೃಢಪಡಿಸಿದೆ.

ಟಿ20 ವಿಶ್ವಕಪ್​ಗೆ ಪಾಕ್ ತಂಡ ಪ್ರಕಟ; ಕೋಚ್​ ಕುರ್ಚಿಯಿಂದ ಕೆಳಗಿಳಿದ ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್!
ಮಿಸ್ಬಾ ಉಲ್ ಹಕ್, ವಕಾರ್ ಯೂನಿಸ್
TV9 Web
| Edited By: |

Updated on: Sep 06, 2021 | 3:50 PM

Share

ಟಿ20 ವಿಶ್ವಕಪ್ ಅನ್ನು ಹತ್ತಿರದಲ್ಲಿಟ್ಟುಕೊಂಡು ಹೊಸ ಕ್ರಿಕೆಟ್ ತರಬೇತುದಾರನನ್ನು ಹುಡುಕುವ ಸವಾಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಂದೆ ಹುಟ್ಟಿಕೊಂಡಿದೆ. ಹೌದು, ಟಿ 20 ವಿಶ್ವಕಪ್‌ಗಾಗಿ 15 ಜನರ ತಂಡವನ್ನು ಘೋಷಿಸಿದ ಕೆಲವು ಗಂಟೆಗಳ ನಂತರ, ಪಾಕಿಸ್ತಾನ ಕ್ರಿಕೆಟ್‌ಗೆ ಸಂಬಂಧಿಸಿದ ಮತ್ತೊಂದು ದೊಡ್ಡ ಸುದ್ದಿ ಹೊರಬಿದ್ದಿದೆ. ತಂಡದ ಮುಖ್ಯ ಕೋಚ್ ಮಿಸ್ಬಾ ಉಲ್ ಹಕ್ ಮತ್ತು ಬೌಲಿಂಗ್ ತರಬೇತುದಾರ ವಕಾರ್ ಯೂನಿಸ್ ರಾಜೀನಾಮೆ ನೀಡಿದ್ದಾರೆ ಎಂಬುದದನ್ನು ಪಿಸಿಬಿ ಸ್ವತಃ ದೃಢಪಡಿಸಿದೆ.

ಮಿಸ್ಬಾ ಮತ್ತು ವಕಾರ್ 2019 ರಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರ ಮತ್ತು ಬೌಲಿಂಗ್ ತರಬೇತುದಾರರಾಗಿ ನೇಮಕಗೊಂಡರು. ಪಿಸಿಬಿಯ ಒಪ್ಪಂದದ ಪ್ರಕಾರ, ಅವರ ಅಧಿಕಾರಾವಧಿಗೆ ಇನ್ನೂ ಒಂದು ವರ್ಷ ಬಾಕಿಯಿದೆ. ಆದಾಗ್ಯೂ, ಈಗ ಇಬ್ಬರೂ ರಾಜೀನಾಮೆ ನೀಡಿರುವುದರಿಂದ, ಪಿಸಿಬಿ ನ್ಯೂಜಿಲ್ಯಾಂಡ್ ವಿರುದ್ಧದ ತವರು ಸರಣಿಗೆ ತಂಡಕ್ಕೆ ಸಕ್ಲೇನ್ ಮುಷ್ತಾಕ್ ಮತ್ತು ಅಬ್ದುಲ್ ರಜಾಕ್ ಅವರಿಗೆ ತಂಡದ ನಿರ್ವಹಣೆಯ ಜವಬ್ದಾರಿಯನ್ನು ಹಸ್ತಾಂತರಿಸಿದೆ.

ಮಿಸ್ಬಾ ಕುಟುಂಬಕ್ಕಾಗಿ ಕೋಚ್ ಕುರ್ಚಿಯನ್ನು ಬಿಟ್ಟರು ಮಿಸ್ಬಾ ಉಲ್ ಹಕ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರದ ಬಗ್ಗೆ ಮಾತನಾಡಿ, ನಾನು ಈಗ ತಮ್ಮ ಕುಟುಂಬದೊಂದಿಗೆ ಹೆಚ್ಚಿನ ಸಮಯವನ್ನು ಕಳೆಯಲು ಬಯಸುತ್ತೆನೆ. ವೆಸ್ಟ್ ಇಂಡೀಸ್​ನಲ್ಲಿ ಸರಣಿಯ ಅಂತ್ಯದ ನಂತರ, ಕೊರೊನಾದಿಂದಾಗಿ ನಾನು ಜಮೈಕಾದಲ್ಲಿ ಸಂಪರ್ಕತಡೆಯನ್ನು ಹೊಂದಿದ್ದಾಗ, ನನ್ನ ಕಳೆದ 2 ವರ್ಷಗಳ ಗ್ರಾಫ್ ನೋಡಲು ನನಗೆ ಅವಕಾಶ ಸಿಕ್ಕಿತು. ಅದನ್ನು ನೋಡುತ್ತಾ, ನಾನು ಈಗ ನನ್ನ ಕುಟುಂಬಕ್ಕೂ ಸಮಯ ನೀಡಬೇಕು ಎಂದು ನಿರ್ಧರಿಸಿದ್ದೇನೆ. ನಾನು ಪಾಕಿಸ್ತಾನದ ಮುಖ್ಯ ತರಬೇತುದಾರನ ಕುರ್ಚಿಯನ್ನು ತೊರೆಯಲು ಇದು ಒಂದು ದೊಡ್ಡ ಕಾರಣವಾಗಿದೆ.

ಇದು ನನ್ನ ನಿರ್ಧಾರಕ್ಕೆ ಸರಿಯಾದ ಸಮಯ. ಕಳೆದ 2 ವರ್ಷಗಳು ತುಂಬಾ ಖುಷಿಯಾಯಿತು. ಇದಕ್ಕಾಗಿ ನಾನು ಎಲ್ಲಾ ತಂಡ ಮತ್ತು ನಿರ್ವಹಣೆಗೆ ಧನ್ಯವಾದ ಹೇಳಲು ಬಯಸುತ್ತೇನೆ. ಮುಂಬರುವ ಕ್ರಿಕೆಟ್ ಸರಣಿ ಮತ್ತು ಟಿ 20 ಗಾಗಿ ನಾನು ಪಾಕಿಸ್ತಾನ ತಂಡವನ್ನು ಅಭಿನಂದಿಸುತ್ತೇನೆ ಎಂದರು.

Follow Us
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ