AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ

Mitchell Santner IPL Injury: ಮುಂಬೈ ಇಂಡಿಯನ್ಸ್ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ ಐಪಿಎಲ್ ಪಂದ್ಯದ ವೇಳೆ ಭುಜದ ಗಾಯಕ್ಕೆ ಒಳಗಾಗಿ ಒಂದು ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ. ಗ್ರೇಡ್ 3 ಎಸಿಎಲ್ ಗಾಯದಿಂದ ಬಳಲುತ್ತಿರುವ ಸ್ಯಾಂಟ್ನರ್, ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಪ್ರಮುಖ ಟೆಸ್ಟ್ ಪಂದ್ಯಗಳನ್ನು ತಪ್ಪಿಸಿಕೊಳ್ಳಲಿದ್ದಾರೆ. ವೈಟ್-ಬಾಲ್ ನಾಯಕನ ಅನುಪಸ್ಥಿತಿಯು ನ್ಯೂಜಿಲೆಂಡ್ ಕ್ರಿಕೆಟ್‌ಗೆ ದೊಡ್ಡ ಆಘಾತ ನೀಡಿದ್ದು, ತಂಡವು ಯೋಜನೆಗಳನ್ನು ಬದಲಾಯಿಸಬೇಕಿದೆ.

IPL 2026: ಮುಂಬೈ ತಂಡದ ಸ್ಟಾರ್ ಆಟಗಾರ ತಿಂಗಳ ಕಾಲ ಕ್ರಿಕೆಟ್​ನಿಂದ ದೂರ
Mitchell Santner
ಪೃಥ್ವಿಶಂಕರ
|

Updated on: May 01, 2026 | 5:07 PM

Share

ಐಪಿಎಲ್ (IPL) ಪಂದ್ಯದ ವೇಳೆ ಫಿಲ್ಡಿಂಗ್ ಮಾಡುವಾಗ ನೆಲಕ್ಕೆ ಬಿದ್ದು ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ಸ್ಟಾರ್ ಸ್ಪಿನ್ನರ್ ಮಿಚೆಲ್ ಸ್ಯಾಂಟ್ನರ್ (Mitchell Santner) ಐಪಿಎಲ್​ನಿಂದಲೇ ಹೊರಬಿದ್ದಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ತವರಿನ ಪಂದ್ಯದಲ್ಲಿ ಬೌಂಡರಿಯ ಬಳಿ ಕ್ಯಾಚ್ ಹಿಡಿಯಲು ಪ್ರಯತ್ನಿಸುವಾಗ ಸ್ಯಾಂಟ್ನರ್ ಅವರ ಭುಜಕ್ಕೆ ಗಾಯವಾಗಿತ್ತು. ಇದೀಗ ಅವರ ಗಾಯದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯಲ್ಲಿ ಕಳವಳವನ್ನು ಹುಟ್ಟುಹಾಕಿದೆ. ವಾಸ್ತವವಾಗಿ ಸ್ಯಾಂಟ್ನರ್ ಅವರ ಗಾಯವು ತುಂಬಾ ಗಂಭೀರವಾಗಿದ್ದು, ಅವರನ್ನು ಕ್ರಿಕೆಟ್​ನಿಂದ ತಿಂಗಳ ಕಾಲ ದೂರವಿಡಲಿದೆ.

ಮಿಚೆಲ್ ಸ್ಯಾಂಟ್ನರ್​ಗೆ ಗಂಭೀರ ಗಾಯ

ಗಾಯದಿಂದ ಬಳಲುತ್ತಿರುವ ನ್ಯೂಜಿಲೆಂಡ್ ವೈಟ್-ಬಾಲ್ ನಾಯಕ ಮಿಚೆಲ್ ಸ್ಯಾಂಟ್ನರ್ ಕನಿಷ್ಠ ಒಂದು ತಿಂಗಳ ಕಾಲ ಆಟದಿಂದ ಹೊರಗುಳಿಯಲಿದ್ದಾರೆ. ಗ್ರೇಡ್ 3 ಎಸಿಎಲ್ ಭುಜದ ಗಾಯದಿಂದ ಬಳಲುತ್ತಿರುವ ಸ್ಯಾಂಟ್ನರ್, ಈಗಾಗಲೇ ನ್ಯೂಜಿಲೆಂಡ್‌ಗೆ ಮರಳಿದ್ದು, ಸ್ಕ್ಯಾನ್ನಿಂಗ್​ ಒಳಗಾಗಿದ್ದಾರೆ. ಸ್ಕ್ಯಾನ್ನಿಂಗ್ ವರದಿಯ ಪ್ರಕಾರ ಸ್ಯಾಂಟ್ನರ್​ಗೆ ವೈದ್ಯರು ಕನಿಷ್ಠ ಒಂದು ತಿಂಗಳ ವಿಶ್ರಾಂತಿ ಮತ್ತು ರಿಹ್ಯಾಬ್​ಗೆ ಒಳಗಾಗುವಂತೆ ಸೂಚಿಸಿದ್ದಾರೆ, ಇದರಿಂದಾಗಿ ಅವರು ಮುಂಬರುವ ದಿನಗಳಲ್ಲಿ ಹಲವಾರು ಪ್ರಮುಖ ಪಂದ್ಯಗಳಿಂದ ಹೊರಗುಳಿಯಬೇಕಾಗಬಹುದು.

ಸ್ಯಾಂಟ್ನರ್ ಎಷ್ಟು ಪಂದ್ಯಗಳಿಗೆ ಅಲಭ್ಯ?

ಈ ಗಾಯದಿಂದಾಗಿ ಸ್ಯಾಂಟ್ನರ್ ಮೇ ತಿಂಗಳ ಅಂತ್ಯದಲ್ಲಿ ನಡೆಯಲಿರುವ ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಮತ್ತು ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೊದಲ ಟೆಸ್ಟ್ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯಗಳಿಗೆ ಅವರ ಲಭ್ಯತೆಯನ್ನು ನಂತರ ನಿರ್ಧರಿಸಲಾಗುತ್ತದೆ. ಸಮಯಕ್ಕೆ ಸರಿಯಾಗಿ ಸ್ಯಾಂಟ್ನರ್ ಫಿಟ್ ಆಗದಿದ್ದರೆ, ಅವರು ಇಂಗ್ಲೆಂಡ್ ಸರಣಿಯನ್ನು ಸಹ ತಪ್ಪಿಸಿಕೊಳ್ಳಬಹುದು. ಟಿ20 ವಿಶ್ವಕಪ್ ನಂತರ ವೈಯಕ್ತಿಕ ಕಾರಣಗಳಿಗಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ34 ವರ್ಷದ ಸ್ಯಾಂಟ್ನರ್ ಸಾಕಷ್ಟು ತಡವಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡಿದ್ದರು. ಮುಂಬೈ ಪರ ನಾಲ್ಕು ಪಂದ್ಯಗಳನ್ನು ಆಡಿದ್ದ ಸ್ಯಾಂಟ್ನರ್ ಐದು ವಿಕೆಟ್‌ಗಳನ್ನು ಪಡೆದು 26 ರನ್‌ ಕೂಡ ಕಲೆಹಾಕಿದ್ದರು.

18 ಎಸೆತಗಳಲ್ಲಿ 10 ಬೌಂಡರಿ, ಸಿಕ್ಸರ್‌..! ವಿಂಡೀಸ್ ವಿರುದ್ಧ ಸ್ಯಾಂಟ್ನರ್ ಏಕಾಂಗಿ ಹೋರಾಟ ವ್ಯರ್ಥ

ಸ್ಯಾಂಟ್ನರ್ ಗಾಯವು ನ್ಯೂಜಿಲೆಂಡ್ ಕ್ರಿಕೆಟ್‌ಗೆ ದೊಡ್ಡ ಆಘಾತ ನೀಡಿದೆ. ಏಕೆಂದರೆ ಅವರು ವೈಟ್-ಬಾಲ್ ಸ್ವರೂಪದಲ್ಲಿ ಪ್ರಮುಖ ಆಲ್‌ರೌಂಡರ್ ಮತ್ತು ನಾಯಕರಾಗಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ತಂಡವು ಈಗ ತನ್ನ ಯೋಜನೆಯನ್ನು ಬದಲಾಯಿಸಬೇಕಾಗುತ್ತದೆ. ಇತ್ತೀಚೆಗೆ, ಸ್ಯಾಂಟ್ನರ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ಟಿ20 ವಿಶ್ವಕಪ್‌ನ ಫೈನಲ್ ತಲುಪಿತ್ತು. ಇದೀಗ ಗಾಯದಿಂದ ಬಳಲುತ್ತಿರುವ ಸ್ಯಾಂಟ್ನರ್ ಜುಲೈನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಏಕದಿನ ಮತ್ತು ಟಿ20 ಸರಣಿಗೆ ಲಭ್ಯವಾಗುವ ನಿರೀಕ್ಷೆಯಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!