AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಎರಡನೇ ಏಕದಿನ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯ..!

India vs Australia: ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ದ್ವಿತೀಯ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆಸ್ಟ್ರೇಲಿಯಾ ತಂಡ.

IND vs AUS: ಎರಡನೇ ಏಕದಿನ ಪಂದ್ಯಕ್ಕೆ ಇಬ್ಬರು ಆಟಗಾರರು ಅಲಭ್ಯ..!
IND vs AUS
TV9 Web
| Edited By: |

Updated on: Sep 23, 2023 | 5:41 PM

Share

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಎರಡನೇ ಏಕದಿನ ಪಂದ್ಯವು ಸೆಪ್ಟೆಂಬರ್ 24 ರಂದು ನಡೆಯಲಿದೆ. ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಆಸ್ಟ್ರೇಲಿಯಾ ತಂಡದ ಸ್ಟಾರ್ ಆಟಗಾರರಾದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮಿಚೆಲ್ ಸ್ಟಾರ್ಕ್ ಅಲಭ್ಯರಾಗಿದ್ದಾರೆ. ಮೊಹಾಲಿಯಲ್ಲಿ ನಡೆದ ಮೊದಲ ಪಂದ್ಯದಲ್ಲೂ ಈ ಇಬ್ಬರು ಆಟಗಾರರು ಕಣಕ್ಕಿಳಿದಿರಲಿಲ್ಲ.

ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಏಕದಿನ ವಿಶ್ವಕಪ್​ ಹಿನ್ನಲೆಯಲ್ಲಿ ಮುನ್ನಚ್ಚರಿಕೆವಹಿಸುವ ಸಲುವಾಗಿ ಮೊದಲೆರಡು ಪಂದ್ಯಗಳಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಇನ್ನು ಗಾಯದಿಂದ ಚೇತರಿಸಿಕೊಂಡು ಇದೀಗ ಆಸ್ಟ್ರೇಲಿಯಾ ತಂಡವನ್ನು ಕೂಡಿಕೊಂಡಿರುವ ಗ್ಲೆನ್ ಮ್ಯಾಕ್ಸ್​ವೆಲ್ ಅವರಿಗೂ ವಿಶ್ರಾಂತಿ ಸೂಚಿಸಲಾಗಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಮ್ಯಾಕ್ಸಿ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗದ ಬೌಲರ್ ಜೋಶ್ ಹ್ಯಾಝಲ್​ವುಡ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ ಪಾಲಿಗೆ ನಿರ್ಣಾಯಕ ಪಂದ್ಯ:

ಇಂದೋರ್​ನಲ್ಲಿ ನಡೆಯಲಿರುವ ಈ ಪಂದ್ಯವು ಆಸ್ಟ್ರೇಲಿಯಾ ತಂಡದ ಪಾಲಿಗೆ ನಿರ್ಣಾಯಕ. ಏಕೆಂದರೆ 3 ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇದೀಗ ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಲು ದ್ವಿತೀಯ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆಯಲ್ಲಿದೆ ಆಸ್ಟ್ರೇಲಿಯಾ ತಂಡ.

ದ್ವಿತೀಯ ಪಂದ್ಯಕ್ಕಾಗಿ ಹೇಗಿರಲಿದೆ ಆಸ್ಟ್ರೇಲಿಯಾ ತಂಡ:

  • ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಆರಂಭಿಕರಾಗಿ ಆಡಲಿದ್ದಾರೆ.
  • ಇನ್-ಫಾರ್ಮ್ ಮಾರ್ನಸ್ ಲಾಬುಶೇನ್ 3ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ.
  • ಮಧ್ಯಮ ಕ್ರಮಾಂಕದಲ್ಲಿ ಸ್ಟೀವ್ ಸ್ಮಿತ್ ಬಲ ತುಂಬಲಿದ್ದಾರೆ.
  • ಮಾರ್ಕಸ್ ಸ್ಟೊಯಿನಿಸ್ ಮತ್ತು ಕ್ಯಾಮರೋನ್ ಗ್ರೀನ್ ಆಲ್ ಆರೌಂಡರ್​ಗಳಾಗಿ ಕಣಕ್ಕಿಳಿಯಲಿದ್ದಾರೆ.
  • ಶಾನ್ ಅಬಾಟ್ ಬದಲಿಗೆ ದ್ವಿತೀಯ ಪಂದ್ಯದಲ್ಲಿ ಜೋಶ್ ಹ್ಯಾಝಲ್​ವುಡ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಆಸ್ಟ್ರೇಲಿಯಾ ಸಂಭಾವ್ಯ ಪ್ಲೇಯಿಂಗ್ 11:

  1. ಡೇವಿಡ್ ವಾರ್ನರ್
  2. ಮಿಚೆಲ್ ಮಾರ್ಷ್
  3. ಮಾರ್ನಸ್ ಲಾಬುಶೇನ್
  4. ಸ್ಟೀವ್ ಸ್ಮಿತ್
  5. ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್)
  6. ಮಾರ್ಕಸ್ ಸ್ಟೊಯಿನಿಸ್
  7. ಕ್ಯಾಮರೋನ್ ಗ್ರೀನ್
  8. ಮ್ಯಾಥ್ಯೂ ಶಾರ್ಟ್
  9. ಪ್ಯಾಟ್ ಕಮ್ಮಿನ್ಸ್ (ನಾಯಕ)
  10. ಜೋಶ್ ಹ್ಯಾಝಲ್​ವುಡ್
  11. ಆ್ಯಡಂ ಝಂಪಾ

ಇದನ್ನೂ ಓದಿ: ನಂಬರ್ 1: ಕ್ರಿಕೆಟ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ 2ನೇ ತಂಡ ಭಾರತ

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ