AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿರುದ್ಧದ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಅಲಭ್ಯ

Team India: ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಹಾಗೂ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್​ನೆಸ್ ಹೊಂದಿದ್ದು, ಹೀಗಾಗಿ ಭಾರತ ವಿರುದ್ಧದ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯಲಿದ್ದಾರೆ. ಈ ಸರಣಿಯ ವೇಳಾಪಟ್ಟಿ ಸೇರಿದಂತೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

ಭಾರತ ವಿರುದ್ಧದ ಮೊದಲ ಪಂದ್ಯಕ್ಕೆ ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಅಲಭ್ಯ
Australia Team
TV9 Web
| Edited By: |

Updated on:Sep 21, 2023 | 2:59 PM

Share

ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ಸರಣಿ ಶುಕ್ರವಾರದಿಂದ (ಸೆ.22) ಶುರುವಾಗಲಿದೆ. ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಆದರೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ವೇಗಿ ಮಿಚೆಲ್ ಸ್ಟಾರ್ಕ್​ ಕಣಕ್ಕಿಳಿಯುವುದಿಲ್ಲ. ಹಾಗೆಯೇ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ.

ಆ್ಯಶಸ್ ಸರಣಿಯ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಮಿಚೆಲ್ ಸ್ಟಾರ್ಕ್ ಆ ಬಳಿಕ ಯಾವುದೇ ಪಂದ್ಯವಾಡಿಲ್ಲ. ಇದೀಗ ಸಂಪೂರ್ಣ ಫಿಟ್​ ಆಗಿ ಭಾರತದ ವಿರುದ್ಧ ಸರಣಿ ಆಡಲು ಬಂದಿದ್ದಾರೆ. ಆದರೆ ತೊಡೆ ಸಂದು ನೋವಿನ ಸಮಸ್ಯೆ ಹೊಂದಿರುವ ಕಾರಣ ಮುನ್ನಚ್ಚರಿಕೆಯ ಸಲುವಾಗಿ ಮೊದಲ ಪಂದ್ಯದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇನ್ನು ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಇತ್ತೀಚೆಗಷ್ಟೇ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇದಾಗ್ಯೂ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಕಣಕ್ಕಿಳಿಯಲು ಮೊದಲ ಪಂದ್ಯದ ವೇಳೆ ವಿಶ್ರಾಂತಿ ಪಡೆಯಲು ಮ್ಯಾಕ್ಸ್​ವೆಲ್ ನಿರ್ಧರಿಸಿದ್ದಾರೆ. ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಗುಳಿದಿದ್ದ ಸ್ಟೀವ್ ಸ್ಮಿತ್ ಹಾಗೂ ಪ್ಯಾಟ್ ಕಮಿನ್ಸ್ ಸಂಪೂರ್ಣ ಫಿಟ್​ನೆಸ್ ಹೊಂದಿದ್ದು, ಹೀಗಾಗಿ ಭಾರತ ವಿರುದ್ಧದ ಮೂರು ಪಂದ್ಯಗಳಲ್ಲೂ ಕಣಕ್ಕಿಳಿಯಲಿದ್ದಾರೆ.

ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ವೇಳಾಪಟ್ಟಿ:

  1. ಮೊದಲ ಏಕದಿನ ಪಂದ್ಯ (ಮೊಹಾಲಿ – ಸೆಪ್ಟೆಂಬರ್ 22, 2023)
  2. ಎರಡನೇ ಏಕದಿನ ಪಂದ್ಯ (ಇಂದೋರ್ – ಸೆಪ್ಟೆಂಬರ್ 24, 2023)
  3. ಮೂರನೇ ಏಕದಿನ ಪಂದ್ಯ (ರಾಜ್‌ಕೋಟ್ – ಸೆಪ್ಟೆಂಬರ್ 27, 2023).

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್, ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಝಲ್​ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್​ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಝಂಪಾ.

ಇದನ್ನೂ ಓದಿ: ICC ODI Rankings: ಸರ್ವಶ್ರೇಷ್ಠ ಸಾಧನೆ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

Published On - 2:57 pm, Thu, 21 September 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು