AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MLC 2024: TSK ಗೆ ಸೂಪರ್ ಜಯ: ಹೊರಬಿದ್ದ MI ನ್ಯೂಯಾರ್ಕ್​

MLC 2024: ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಲೀಕತ್ವದ ಎಂಐ ನ್ಯೂಯಾರ್ಕ್ ತಂಡವು ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯಿಂದ ಹೊರಬಿದ್ದಿದೆ. ಕಳೆದ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಕೀರನ್ ಪೊಲಾರ್ಡ್ ನೇತೃತ್ವದ ಎಂಐ ನ್ಯೂಯಾರ್ಕ್​ ತಂಡವು ಈ ಬಾರಿ ಎಲಿಮಿನೇಟರ್ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ಅಭಿಯಾನ ಅಂತ್ಯಗೊಳಿಸಿದೆ.

MLC 2024: TSK ಗೆ ಸೂಪರ್ ಜಯ: ಹೊರಬಿದ್ದ MI ನ್ಯೂಯಾರ್ಕ್​
TSK
ಝಾಹಿರ್ ಯೂಸುಫ್
|

Updated on:Jul 25, 2024 | 11:05 AM

Share

ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ ಎಲಿಮಿನೇಟರ್ ಪಂದ್ಯದಲ್ಲಿ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟಿಎಸ್​ಕೆ ತಂಡ ಚಾಲೆಂಜರ್ ಸುತ್ತಿಗೆ ಅರ್ಹತೆ ಪಡೆದರೆ, ಎಂಐ ನ್ಯೂಯಾರ್ಕ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಎಂಐ ನ್ಯೂಯಾರ್ಕ್ ಉತ್ತಮ ಆರಂಭ ಪಡೆದಿರಲಿಲ್ಲ. ಜಿಯಾ ಉಲ್ ಹಕ್ ಎಸೆದ ಮೊದಲ ಓವರ್​ನ ನಾಲ್ಕನೇ ಎಸೆತದಲ್ಲೇ ಡೆವಾಲ್ಡ್ ಬ್ರೆವಿಸ್ (0) ಔಟಾಗಿ ನಿರ್ಗಮಿಸಿದ್ದರು. ಆ ಬಳಿಕ ಬಂದ ನಿಕೋಲಸ್ ಪೂರನ್ ಕೇವಲ 8 ರನ್​ಗಳಿಸಿ ಔಟಾದರು.

ಇನ್ನು ನಾಲ್ಕನೇ ವಿಕೆಟ್​ಗೆ ಜೊತೆಗೂಡಿದ ಮೊನಾಂಕ್ ಪಟೇಲ್ ಹಾಗೂ ರಶೀದ್ ಖಾನ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಈ ಜೋಡಿಯು 10 ಓವರ್​ಗಳಲ್ಲಿ ತಂಡದ ಮೊತ್ತವನ್ನು 100 ರ ಗಡಿದಾಟಿಸಿದ್ದರು. ಈ ಹಂತದಲ್ಲಿ 48 ರನ್ ಬಾರಿಸಿದ ಮೊನಾಂಕ್ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಸಿಡಿಲಬ್ಬರ ಮುಂದುವರೆಸಿದ ರಶೀದ್ ಖಾನ್ 30 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಎಂಐ ನ್ಯೂಯಾರ್ಕ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 163 ರನ್​ ಕಲೆಹಾಕಿತು.

ಫಾಫ್ ಆರ್ಭಟ:

164 ರನ್​ಗಳ ಸ್ಪರ್ಧಾತ್ಮಕ ಗುರಿ ಪಡೆದ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡಕ್ಕೆ ಫಾಫ್ ಡುಪ್ಲೆಸಿಸ್ ಹಾಗೂ ಡೆವೊನ್ ಕಾನ್ವೆ ಸ್ಪೋಟಕ ಆರಂಭ ಒದಗಿಸಿದರು. ಒಂದೆಡೆ ಕಾನ್ವೆ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರೆ, ಮತ್ತೊಂದೆಡೆ ಡುಪ್ಲೆಸಿಸ್ ಸಿಡಿಲಬ್ಬರ ಶುರು ಮಾಡಿದರು. ಪರಿಣಾಮ ಮೊದಲ ವಿಕೆಟ್​ಗೆ 101 ರನ್​ಗಳ ಜೊತೆಯಾಟ ಮೂಡಿಬಂತು.

47 ಎಸೆತಗಳಲ್ಲಿ 6 ಫೋರ್ ಹಾಗೂ 3 ಭರ್ಜರಿ ಸಿಕ್ಸ್​ಗಳೊಂದಿಗೆ 72 ರನ್ ಬಾರಿಸಿದ್ದ ಫಾಫ್ ಡುಪ್ಲೆಸಿಸ್ ಈ ಹಂತದಲ್ಲಿ ವಿಕೆಟ್ ಒಪ್ಪಿಸಿದರು. ಇದಾಗ್ಯೂ ಉತ್ತಮ ಬ್ಯಾಟಿಂಗ್ ಮುಂದುವರೆಸಿದ ಕಾನ್ವೆ ಅಜೇಯ 51 ರನ್ ಬಾರಿಸಿದರೆ, ಯುವ ದಾಂಡಿಗ ಆರೋನ್ ಹಾರ್ಡಿ 40 ರನ್ ಸಿಡಿಸಿದರು. ಈ ಮೂಲಕ ಟೆಕ್ಸಾಸ್ ಸೂಪರ್ ಕಿಂಗ್ಸ್​ ತಂಡವು 18.3 ಓವರ್​ಗಳಲ್ಲಿ ಗುರಿ ತಲುಪಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈ ಗೆಲುವಿನೊಂದಿಗೆ ಟೆಕ್ಸಾಸ್ ಸೂಪರ್ ಕಿಂಗ್ಸ್ ತಂಡವು ಚಾಲೆಂಜರ್ ಪಂದ್ಯಕ್ಕೆ ಅರ್ಹತೆ ಪಡೆದುಕೊಂಡಿದೆ. ಅತ್ತ ಈ ಸೋಲಿನೊಂದಿಗೆ ಹಾಲಿ ಚಾಂಪಿಯನ್ ಎಂಐ ನ್ಯೂಯಾರ್ಕ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ.

ಟೆಕ್ಸಾಸ್ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ಡೆವೊನ್ ಕಾನ್ವೇ (ವಿಕೆಟ್ ಕೀಪರ್) , ಫಾಫ್ ಡು ಪ್ಲೆಸಿಸ್ (ನಾಯಕ) , ಆರೋನ್ ಹಾರ್ಡಿ , ಜೋಶುವಾ ಟ್ರಾಂಪ್ , ಮಾರ್ಕಸ್ ಸ್ಟೊಯಿನಿಸ್ , ಮಿಲಿಂದ್ ಕುಮಾರ್ , ಡ್ವೇನ್ ಬ್ರಾವೋ , ಕ್ಯಾಲ್ವಿನ್ ಸಾವೇಜ್ , ಮೊಹಮ್ಮದ್ ಮೊಹ್ಸಿನ್ , ನೂರ್ ಅಹ್ಮದ್ , ಜಿಯಾ-ಉಲ್-ಹಕ್.

ಇದನ್ನೂ ಓದಿ: IPL 2025: ಮುಂಬೈ ಇಂಡಿಯನ್ಸ್ ತಂಡಕ್ಕೆ ಸೂರ್ಯಕುಮಾರ್ ಯಾದವ್ ಗುಡ್ ಬೈ?

ಎಂಐ ನ್ಯೂಯಾರ್ಕ್​ ಪ್ಲೇಯಿಂಗ್ 11: ಡೆವಾಲ್ಡ್ ಬ್ರೆವಿಸ್ , ಶಯಾನ್ ಜಹಾಂಗೀರ್ , ನಿಕೋಲಸ್ ಪೂರನ್ (ವಿಕೆಟ್ ಕೀಪರ್) , ಮೊನಾಂಕ್ ಪಟೇಲ್ , ಹೀತ್ ರಿಚರ್ಡ್ಸ್ , ಕೀರನ್ ಪೊಲಾರ್ಡ್ (ನಾಯಕ) , ರೊಮಾರಿಯೋ ಶೆಫರ್ಡ್ , ರಶೀದ್ ಖಾನ್ , ಟ್ರೆಂಟ್ ಬೌಲ್ಟ್ , ನೊಸ್ತುಶ್ ಕೆಂಜಿಗೆ , ರುಶಿಲ್ ಉಗರ್ಕರ್.

Published On - 9:51 am, Thu, 25 July 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?