AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ ಪೇಪರ್​ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್

India vs Pakistan: ದುಬೈ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ಇಂದು (ಫೆ.23) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಅತ್ತ ಪಾಕ್ ತಂಡ ಸೋತರೆ ಟೂರ್ನಿಯಿಂದ ಹೊರಬೀಳುವುದು ಸಹ ಬಹುತೇಕ ಖಚಿತವಾಗಲಿದೆ.

IND vs PAK: ಭಾರತ ಪೇಪರ್​ನಲ್ಲಷ್ಟೇ ಬಲಿಷ್ಠ, ಪಾಕಿಸ್ತಾನ್ ಗೆದ್ದೇ ಗೆಲ್ಲುತ್ತೆ: ಅಮೀರ್
Ind Vs Pak
ಝಾಹಿರ್ ಯೂಸುಫ್
|

Updated on: Feb 23, 2025 | 8:32 AM

Share

ಭಾರತ ಹಾಗೂ ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ದುಬೈನ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಇಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 5ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಮುಖಾಮುಖಿಯಾಗಲಿದ್ದಾರೆ. ಈ ಕುತೂಹಲಕಾರಿ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬ ಚರ್ಚೆಗಳು ಜೋರಾಗಿದ್ದು, ಇದರ ನಡುವೆ ಪಾಕಿಸ್ತಾನ್ ತಂಡದ ಮಾಜಿ ವೇಗಿ ಮೊಹಮ್ಮದ್ ಅಮೀರ್ ನೀಡಿರುವ ಹೇಳಿಕೆ ಭಾರೀ ವೈರಲ್ ಆಗಿದೆ.

ಚಾನೆಲ್​ ಚರ್ಚೆಯೊಂದರಲ್ಲಿ ಕಾಣಿಸಿಕೊಂಡ ಮೊಹಮ್ಮದ್ ಅಮೀರ್, ಈ ಬಾರಿ ಪಾಕಿಸ್ತಾನ್ ತಂಡ ಗೆದ್ದೇ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಭಾರತ ತಂಡವು ಬಲಿಷ್ಠವಾಗಿರುವುದು ಪೇಪರ್​ನಲ್ಲಿ ಅಷ್ಟೇ. ಟೀಮ್ ಇಂಡಿಯಾವನ್ನು ಸೋಲಿಸುವ ಸಾಮರ್ಥ್ಯ ಪಾಕಿಸ್ತಾನ್ ತಂಡಕ್ಕಿದೆ ಎಂದು ಅವರು ಹೇಳಿದ್ದಾರೆ.

ಭಾರತ ತಂಡವು ಕಾಗದದ ಮೇಲೆ ಬಲಿಷ್ಠವಾಗಿ ಕಾಣುತ್ತದೆ. ದ್ವಿಪಕ್ಷೀಯ ಸರಣಿಯಲ್ಲಿ ಅವರ ಪ್ರದರ್ಶನವನ್ನು ನೋಡಿದರೆ, ಅವರು ಕೂಡ ಉತ್ತಮವಾಗಿ ಆಡಿದ್ದಾರೆ. ಆದರೆ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಬಹಳಷ್ಟು ತಪ್ಪುಗಳನ್ನು ಮಾಡಿದೆ. ಈಗ ಪಾಕಿಸ್ತಾನದೊಂದಿಗೆ ಒತ್ತಡದ ಪಂದ್ಯ ಆಡಬೇಕಿದೆ.

ಈ ಒತ್ತಡದ ನಡುವೆ ಟೀಮ್ ಇಂಡಿಯಾ ಅದೇ ತಪ್ಪುಗಳನ್ನು ಪುನರಾವರ್ತಿಸಬಹುದು. ಹೀಗಾಗಿ ಭಾರತ ವಿರುದ್ಧ ಪಾಕಿಸ್ತಾನ್ ತಂಡ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಮೊಹಮ್ಮದ್ ಅಮೀರ್ ಹೇಳಿದ್ದಾರೆ.

ಪಾಕಿಸ್ತಾನ್ ತಂಡವು ತನ್ನ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ್ದರೂ, ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಪ್ರದರ್ಶನ ನೀಡಲಿದೆ. ಈ ಮೂಲಕ ಭಾರತ ತಂಡವನ್ನು ಹಿಂದಿಕ್ಕಿ ಸೆಮಿಫೈನಲ್​ಗೇರುವ ವಿಶ್ವಾಸವನ್ನು ಮೊಹಮ್ಮದ್ ಅಮೀರ್ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಮೊಹಮ್ಮದ್ ಅಮೀರ್ 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಟೀಮ್ ಇಂಡಿಯಾ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ ಫಖರ್ ಝಮಾನ್ (114) ಶತಕ ಬಾರಿಸಿದರೆ, ಮೊಹಮ್ಮದ್ ಅಮೀರ್ 6 ಓವರ್​ಗಳಲ್ಲಿ ಕೇವಲ 16 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದರು.

ಇದನ್ನೂ ಓದಿ: 5126 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಮೊಹಮ್ಮದ್ ಶಮಿ

ಇದೀಗ ಉಭಯ ತಂಡಗಳು 8 ವರ್ಷಗಳ ಬಳಿಕ ಮತ್ತೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗುತ್ತಿದೆ. ಈ ಬಾರಿ ಕೂಡ ಭಾರತ ತಂಡವನ್ನು ಪಾಕಿಸ್ತಾನ್ ಸೋಲಿಸಲಿದೆ ಎಂದು ಮೊಹಮ್ಮದ್ ಅಮೀರ್ ಭವಿಷ್ಯ ನುಡಿದಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ