AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಅಫ್ಘಾನಿಸ್ತಾನ ತಾಲಿಬಾನ್ ವಶ; ಕ್ರಿಕೆಟ್ ಮೇಲಾದ ಪರಿಣಾಮವೇನು? ನಾಯಕ ನಬಿ ಹೇಳಿದಿಷ್ಟು

T20 World Cup: ತಂಡವು ಕಳೆದ ಒಂದೂವರೆ ತಿಂಗಳುಗಳಿಂದ ತಯಾರಿ ನಡೆಸುತ್ತಿದೆ. ವೀಸಾ ಪ್ರಕರಣದಲ್ಲಿ ಕೆಲವು ಸಮಸ್ಯೆಗಳಿದ್ದವು, ಈ ಕಾರಣದಿಂದಾಗಿ ಆಟಗಾರರು ಯುಎಇಗೆ ಮುಂಚಿತವಾಗಿ ಬರಲು ಸಾಧ್ಯವಾಗಲಿಲ್ಲ.

T20 World Cup: ಅಫ್ಘಾನಿಸ್ತಾನ ತಾಲಿಬಾನ್ ವಶ; ಕ್ರಿಕೆಟ್ ಮೇಲಾದ ಪರಿಣಾಮವೇನು? ನಾಯಕ ನಬಿ ಹೇಳಿದಿಷ್ಟು
ಮೊಹಮ್ಮದ್ ನಬಿ
TV9 Web
| Edited By: |

Updated on: Oct 15, 2021 | 7:08 PM

Share

ನಿರಾಯುಧರ ಮೇಲೆ ಗುಂಡು ಹಾರಿಸಲಾಗುತ್ತಿದೆ, ಬೀದಿಗಳಲ್ಲಿ ಬಾಂಬ್ ಸ್ಫೋಟಿಸಲಾಗುತ್ತಿದೆ, ಮುಗ್ಧ ಜೀವಗಳನ್ನು ಕೊಲ್ಲಲಾಗುತ್ತಿದೆ. ಈ ಎಲ್ಲಾ ನೋವು ಮತ್ತು ದುಃಖದ ನಡುವೆ, ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ವಿಶ್ವಕಪ್​ನಲ್ಲಿ ತನ್ನ ಪ್ರದರ್ಶನ ನೀಡಲು ಮುಂದಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಕ್ರಮಣದ ನಂತರ ಮೊದಲ ಬಾರಿಗೆ, ಅಲ್ಲಿನ ಕ್ರಿಕೆಟ್ ತಂಡವು ಮೈದಾನಕ್ಕಿಳಿಯಲಿದೆ. ಟಿ 20 ವಿಶ್ವಕಪ್‌ಗಾಗಿ ತಂಡದ ಆಟಗಾರರು ಯುಎಇ ತಲುಪಿದ್ದಾರೆ. ತಂಡದ ನಾಯಕ ಮೊಹಮ್ಮದ್ ನಬಿ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 10 ರಂದು ಅಫ್ಘಾನಿಸ್ತಾನ ತಂಡದ ನಾಯಕನಾಗಿ ನಬಿಯನ್ನು ನೇಮಿಸಲಾಯಿತು. ಸ್ಟಾರ್ ಆಲ್ ರೌಂಡರ್ ರಶೀದ್ ಖಾನ್ ತಂಡವನ್ನು ಆಯ್ಕೆ ಮಾಡುವ ಮೊದಲು ಅವರ ಅಭಿಪ್ರಾಯವನ್ನು ತೆಗೆದುಕೊಳ್ಳಲಿಲ್ಲ ಎಂಬ ಕಾರಣ ನೀಡಿ ಕ್ಯಾಪ್ಟನ್ ಆಗಲು ನಿರಾಕರಿಸಿದರು. 36 ವರ್ಷದ ನಬಿ 2013 ಮತ್ತು 2015 ರ ನಡುವೆ ತಂಡದ ನಾಯಕರಾಗಿದ್ದರು. ಭಾನುವಾರದಿಂದ ಆರಂಭವಾಗಲಿರುವ ಟಿ 20 ವಿಶ್ವಕಪ್ ಮೊದಲು ಮಾಧ್ಯಮಗಳಿಗೆ ನೀಡಿದ ಕಾನ್ಫರೆನ್ಸ್ ಕರೆಯಲ್ಲಿ ಮಾತನಾಡಿದ ಅವರು, ‘ನಾಯಕತ್ವವು ತುಂಬಾ ಕಷ್ಟಕರವಾದ ಜವಾಬ್ದಾರಿ. ಪಂದ್ಯಾವಳಿಯಲ್ಲಿ ತಂಡವು ಉತ್ತಮವಾಗಿ ಆಡಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ. ನಾಯಕನಾಗಿ ಆಡಲು ಉತ್ಸುಕನಾಗಿದ್ದೇನೆ. ಅಫಘಾನಿಸ್ತಾನ ತಂಡವು ಮೊದಲ ಸುತ್ತಿನ ಅರ್ಹತಾ ಪಂದ್ಯವನ್ನು ಅಕ್ಟೋಬರ್ 25 ರಂದು ಮೊದಲ ಪಂದ್ಯವನ್ನು ಆಡಬೇಕಿದೆ.

ತಾಲಿಬಾನ್ ಬಗ್ಗೆ ನಬಿ ಹೇಳಿದಿಷ್ಟು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದರೂ, ತಂಡವು ಟಿ 20 ವಿಶ್ವಕಪ್‌ಗೆ ಪ್ರವೇಶಿಸಿದೆ. ಅಮೆರಿಕದ ಪಡೆಗಳನ್ನು ಹಿಂತೆಗೆದುಕೊಂಡ ನಂತರ, ಅಫ್ಘಾನಿಸ್ತಾನದಲ್ಲಿ ಹೆಚ್ಚು ರಕ್ತಪಾತ ಮತ್ತು ಹಿಂಸಾಚಾರ ನಡೆಯಿತು. ನಬಿ ಈ ವಿಷಯದ ಬಗ್ಗೆ ಮಾತನಾಡಲು ನಿರಾಕರಿಸಿದರು. ಆದರೆ ವೀಸಾ ಸಮಸ್ಯೆಗಳನ್ನು ಮಾತ್ರ ಉಲ್ಲೇಖಿಸಿದರು. ತಂಡವು ಕಳೆದ ಒಂದೂವರೆ ತಿಂಗಳುಗಳಿಂದ ತಯಾರಿ ನಡೆಸುತ್ತಿದೆ. ವೀಸಾ ಪ್ರಕರಣದಲ್ಲಿ ಕೆಲವು ಸಮಸ್ಯೆಗಳಿದ್ದವು, ಈ ಕಾರಣದಿಂದಾಗಿ ಆಟಗಾರರು ಯುಎಇಗೆ ಮುಂಚಿತವಾಗಿ ಬರಲು ಸಾಧ್ಯವಾಗಲಿಲ್ಲ. ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಮತ್ತು ಇಂಗ್ಲೆಂಡ್ ಕೋಚ್ ಆಂಡಿ ಫ್ಲವರ್ ಅಫ್ಘಾನಿಸ್ತಾನದ ಬ್ಯಾಟಿಂಗ್ ಸಲಹೆಗಾರರಾಗಿದ್ದರೆ, ದಕ್ಷಿಣ ಆಫ್ರಿಕಾದ ಲ್ಯಾನ್ಸ್ ಕ್ಲುಸ್ನರ್ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಶಾನ್ ಟೈಟ್ ಬೌಲಿಂಗ್ ಕೋಚ್ ಆಗಿದ್ದಾರೆ.

ಟಿ 20 ವಿಶ್ವಕಪ್​ಗಾಗಿ ಅಫ್ಘಾನಿಸ್ತಾನ ತಂಡ – ಮೊಹಮ್ಮದ್ ನಬಿ (ಕ್ಯಾಪ್ಟನ್), ಹಜರತುಲ್ಲಾ ಜಜಾಯಿ, ಉಸ್ಮಾನ್ ಘನಿ, ಮೊಹಮ್ಮದ್ ಶಹಜಾದ್, ರಹಮಾನುಲ್ಲಾ ಗುರ್ಬಾಜ್, ಹಷ್ಮತುಲ್ಲಾ ಶಾಹಿದಿ, ಅಸ್ಘರ್ ಅಫಘಾನ್, ಗುಲ್ಬದಿನ್ ನಾಯಬ್, ನಜೀಬುಲ್ಲಾ ಹದ್ರಾನ್, ಕರೀಂ ಜನ್ನತ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್ , ಫರೀದ್ ಅಹ್ಮದ್ ಮತ್ತು ನವೀನ್-ಉಲ್-ಹಕ್.

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ