AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಅಫ್ಘಾನಿಸ್ತಾನ ತಾಲಿಬಾನ್ ವಶ; ಕ್ರಿಕೆಟ್ ಮೇಲಾದ ಪರಿಣಾಮವೇನು? ನಾಯಕ ನಬಿ ಹೇಳಿದಿಷ್ಟು

T20 World Cup: ತಂಡವು ಕಳೆದ ಒಂದೂವರೆ ತಿಂಗಳುಗಳಿಂದ ತಯಾರಿ ನಡೆಸುತ್ತಿದೆ. ವೀಸಾ ಪ್ರಕರಣದಲ್ಲಿ ಕೆಲವು ಸಮಸ್ಯೆಗಳಿದ್ದವು, ಈ ಕಾರಣದಿಂದಾಗಿ ಆಟಗಾರರು ಯುಎಇಗೆ ಮುಂಚಿತವಾಗಿ ಬರಲು ಸಾಧ್ಯವಾಗಲಿಲ್ಲ.

T20 World Cup: ಅಫ್ಘಾನಿಸ್ತಾನ ತಾಲಿಬಾನ್ ವಶ; ಕ್ರಿಕೆಟ್ ಮೇಲಾದ ಪರಿಣಾಮವೇನು? ನಾಯಕ ನಬಿ ಹೇಳಿದಿಷ್ಟು
ಮೊಹಮ್ಮದ್ ನಬಿ
Follow us
TV9 Web
| Updated By: ಪೃಥ್ವಿಶಂಕರ

Updated on: Oct 15, 2021 | 7:08 PM

ನಿರಾಯುಧರ ಮೇಲೆ ಗುಂಡು ಹಾರಿಸಲಾಗುತ್ತಿದೆ, ಬೀದಿಗಳಲ್ಲಿ ಬಾಂಬ್ ಸ್ಫೋಟಿಸಲಾಗುತ್ತಿದೆ, ಮುಗ್ಧ ಜೀವಗಳನ್ನು ಕೊಲ್ಲಲಾಗುತ್ತಿದೆ. ಈ ಎಲ್ಲಾ ನೋವು ಮತ್ತು ದುಃಖದ ನಡುವೆ, ಅಫ್ಘಾನಿಸ್ತಾನ ಕ್ರಿಕೆಟ್ ತಂಡವು ವಿಶ್ವಕಪ್​ನಲ್ಲಿ ತನ್ನ ಪ್ರದರ್ಶನ ನೀಡಲು ಮುಂದಾಗಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಕ್ರಮಣದ ನಂತರ ಮೊದಲ ಬಾರಿಗೆ, ಅಲ್ಲಿನ ಕ್ರಿಕೆಟ್ ತಂಡವು ಮೈದಾನಕ್ಕಿಳಿಯಲಿದೆ. ಟಿ 20 ವಿಶ್ವಕಪ್‌ಗಾಗಿ ತಂಡದ ಆಟಗಾರರು ಯುಎಇ ತಲುಪಿದ್ದಾರೆ. ತಂಡದ ನಾಯಕ ಮೊಹಮ್ಮದ್ ನಬಿ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ಟೋಬರ್ 10 ರಂದು ಅಫ್ಘಾನಿಸ್ತಾನ ತಂಡದ ನಾಯಕನಾಗಿ ನಬಿಯನ್ನು ನೇಮಿಸಲಾಯಿತು. ಸ್ಟಾರ್ ಆಲ್ ರೌಂಡರ್ ರಶೀದ್ ಖಾನ್ ತಂಡವನ್ನು ಆಯ್ಕೆ ಮಾಡುವ ಮೊದಲು ಅವರ ಅಭಿಪ್ರಾಯವನ್ನು ತೆಗೆದುಕೊಳ್ಳಲಿಲ್ಲ ಎಂಬ ಕಾರಣ ನೀಡಿ ಕ್ಯಾಪ್ಟನ್ ಆಗಲು ನಿರಾಕರಿಸಿದರು. 36 ವರ್ಷದ ನಬಿ 2013 ಮತ್ತು 2015 ರ ನಡುವೆ ತಂಡದ ನಾಯಕರಾಗಿದ್ದರು. ಭಾನುವಾರದಿಂದ ಆರಂಭವಾಗಲಿರುವ ಟಿ 20 ವಿಶ್ವಕಪ್ ಮೊದಲು ಮಾಧ್ಯಮಗಳಿಗೆ ನೀಡಿದ ಕಾನ್ಫರೆನ್ಸ್ ಕರೆಯಲ್ಲಿ ಮಾತನಾಡಿದ ಅವರು, ‘ನಾಯಕತ್ವವು ತುಂಬಾ ಕಷ್ಟಕರವಾದ ಜವಾಬ್ದಾರಿ. ಪಂದ್ಯಾವಳಿಯಲ್ಲಿ ತಂಡವು ಉತ್ತಮವಾಗಿ ಆಡಲು ನಾನು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ. ನಾಯಕನಾಗಿ ಆಡಲು ಉತ್ಸುಕನಾಗಿದ್ದೇನೆ. ಅಫಘಾನಿಸ್ತಾನ ತಂಡವು ಮೊದಲ ಸುತ್ತಿನ ಅರ್ಹತಾ ಪಂದ್ಯವನ್ನು ಅಕ್ಟೋಬರ್ 25 ರಂದು ಮೊದಲ ಪಂದ್ಯವನ್ನು ಆಡಬೇಕಿದೆ.

ತಾಲಿಬಾನ್ ಬಗ್ಗೆ ನಬಿ ಹೇಳಿದಿಷ್ಟು ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದರೂ, ತಂಡವು ಟಿ 20 ವಿಶ್ವಕಪ್‌ಗೆ ಪ್ರವೇಶಿಸಿದೆ. ಅಮೆರಿಕದ ಪಡೆಗಳನ್ನು ಹಿಂತೆಗೆದುಕೊಂಡ ನಂತರ, ಅಫ್ಘಾನಿಸ್ತಾನದಲ್ಲಿ ಹೆಚ್ಚು ರಕ್ತಪಾತ ಮತ್ತು ಹಿಂಸಾಚಾರ ನಡೆಯಿತು. ನಬಿ ಈ ವಿಷಯದ ಬಗ್ಗೆ ಮಾತನಾಡಲು ನಿರಾಕರಿಸಿದರು. ಆದರೆ ವೀಸಾ ಸಮಸ್ಯೆಗಳನ್ನು ಮಾತ್ರ ಉಲ್ಲೇಖಿಸಿದರು. ತಂಡವು ಕಳೆದ ಒಂದೂವರೆ ತಿಂಗಳುಗಳಿಂದ ತಯಾರಿ ನಡೆಸುತ್ತಿದೆ. ವೀಸಾ ಪ್ರಕರಣದಲ್ಲಿ ಕೆಲವು ಸಮಸ್ಯೆಗಳಿದ್ದವು, ಈ ಕಾರಣದಿಂದಾಗಿ ಆಟಗಾರರು ಯುಎಇಗೆ ಮುಂಚಿತವಾಗಿ ಬರಲು ಸಾಧ್ಯವಾಗಲಿಲ್ಲ. ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಮತ್ತು ಇಂಗ್ಲೆಂಡ್ ಕೋಚ್ ಆಂಡಿ ಫ್ಲವರ್ ಅಫ್ಘಾನಿಸ್ತಾನದ ಬ್ಯಾಟಿಂಗ್ ಸಲಹೆಗಾರರಾಗಿದ್ದರೆ, ದಕ್ಷಿಣ ಆಫ್ರಿಕಾದ ಲ್ಯಾನ್ಸ್ ಕ್ಲುಸ್ನರ್ ಮತ್ತು ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಶಾನ್ ಟೈಟ್ ಬೌಲಿಂಗ್ ಕೋಚ್ ಆಗಿದ್ದಾರೆ.

ಟಿ 20 ವಿಶ್ವಕಪ್​ಗಾಗಿ ಅಫ್ಘಾನಿಸ್ತಾನ ತಂಡ – ಮೊಹಮ್ಮದ್ ನಬಿ (ಕ್ಯಾಪ್ಟನ್), ಹಜರತುಲ್ಲಾ ಜಜಾಯಿ, ಉಸ್ಮಾನ್ ಘನಿ, ಮೊಹಮ್ಮದ್ ಶಹಜಾದ್, ರಹಮಾನುಲ್ಲಾ ಗುರ್ಬಾಜ್, ಹಷ್ಮತುಲ್ಲಾ ಶಾಹಿದಿ, ಅಸ್ಘರ್ ಅಫಘಾನ್, ಗುಲ್ಬದಿನ್ ನಾಯಬ್, ನಜೀಬುಲ್ಲಾ ಹದ್ರಾನ್, ಕರೀಂ ಜನ್ನತ್, ರಶೀದ್ ಖಾನ್, ಮುಜೀಬ್ ಉರ್ ರೆಹಮಾನ್ , ಫರೀದ್ ಅಹ್ಮದ್ ಮತ್ತು ನವೀನ್-ಉಲ್-ಹಕ್.

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು
VIDEO: ಇದು ನನ್ನ ಗ್ರೌಂಡ್... ಕೆಎಲ್ ರಾಹುಲ್​ಗೆ ವಿರಾಟ್ ಕೊಹ್ಲಿ ತಿರುಗೇಟು