AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammad Shami: ವಿಶ್ವಕಪ್‌ಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಮೊಹಮ್ಮದ್ ಶಮಿ, ಬಂಧನ ಸಾಧ್ಯತೆ!

Mohammad Shami: ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಇನ್ನು ಮೂರು ತಿಂಗಳು ಬಾಕಿ ಇರುವಾಗಲೇ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ ಮೊಹಮ್ಮದ್ ಶಮಿಗೆ ಸಂಕಷ್ಟ ಎದುರಾಗಿದೆ.

Mohammad Shami: ವಿಶ್ವಕಪ್‌ಗೂ ಮುನ್ನ ಸಂಕಷ್ಟಕ್ಕೆ ಸಿಲುಕಿದ ಮೊಹಮ್ಮದ್ ಶಮಿ, ಬಂಧನ ಸಾಧ್ಯತೆ!
ಮೊಹಮ್ಮದ್ ಶಮಿImage Credit source: barandbench
ಪೃಥ್ವಿಶಂಕರ
|

Updated on: Jul 07, 2023 | 9:56 AM

Share

ತವರಿನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ (ICC World Cup 2023) ಇನ್ನು ಮೂರು ತಿಂಗಳು ಬಾಕಿ ಇರುವಾಗಲೇ ಟೀಂ ಇಂಡಿಯಾದ ಪ್ರಮುಖ ಬೌಲಿಂಗ್ ಅಸ್ತ್ರ ಮೊಹಮ್ಮದ್ ಶಮಿಗೆ (Mohammad Shami) ಸಂಕಷ್ಟ ಎದುರಾಗಿದೆ. ವೆಸ್ಟ್ ಇಂಡೀಸ್ ಸರಣಿಯಿಂದ ಹೊರಗಿರುವ ಶಮಿ, ಪ್ರಸ್ತುತ ವಿಶ್ರಾಂತಿಯಲ್ಲಿದ್ದಾರೆ. ಏಷ್ಯಾಕಪ್ ಮತ್ತು ವಿಶ್ವಕಪ್‌ (Asia cup, World Cup) ದೃಷ್ಟಿಯಿಂದ ಮೊಹಮ್ಮದ್ ಶಮಿಗೆ ಟೀಂ ಇಂಡಿಯಾದಿಂದ ಬ್ರೇಕ್ ನೀಡಲಾಗಿದೆ. ಆದರೆ ಶಮಿಗೆ ಇದೀಗ ಹೊಸ ಸಂಕಷ್ಟ ಎದುರಾಗಿದ್ದು, ಪತ್ನಿ ಹಸಿನ್ ಜಹಾನ್ ನ್ಯಾಯಲಯದಲ್ಲಿ ಹೂಡಿದ್ದ ಕೌಟುಂಬಿಕ ದೌರ್ಜನ್ಯ ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ವಾಸ್ತವವಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಮಿ ಬಂಧನಕ್ಕೆ ಕೊಲ್ಕತ್ತಾದ ಕೆಳ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಆದರೀಗ ಶಮಿ ಮಡದಿ ಹಸಿನ್ ಜಹಾನ್ ಅವರು ಸುಪ್ರೀಂ ಕೋರ್ಟ್ (Supreme Court) ಕದ ಬಡಿದಿದ್ದು, ಸವೋರ್ಚ ನ್ಯಾಯಾಲಯ ಮಹತ್ವದ ನಿರ್ಧಾರ ಕೈಗೊಂಡಿದೆ.

ಒಂದು ತಿಂಗಳೊಳಗೆ ಪ್ರಕರಣ ಇತ್ಯರ್ಥ

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಕೊಲ್ಕತ್ತಾದ ಕೆಳ ನ್ಯಾಯಾಲಯ ತಡೆಯಾಜ್ಞೆ ನೀಡಿದ ಬಳಿಕ ಶಮಿ ಮಡದಿ ಹಸಿನ್ ಜಹಾನ್ ಅವರು ಬಂಧನಕ್ಕೆ ತಡೆ ಮತ್ತು ವಿಚಾರಣೆಯ ಪ್ರಕ್ರಿಯೆಯಲ್ಲಿ ವಿಳಂಬವಾಗುವುದರ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ನಾಲ್ಕು ವರ್ಷಗಳಿಂದ ಪ್ರಕರಣದ ವಿಚಾರಣೆ ನಡೆದಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಒಂದು ತಿಂಗಳೊಳಗೆ ಈ ಪ್ರಕರಣವನ್ನು ಇತ್ಯರ್ಥಗೊಳಿಸುವಂತೆ ಅಲಿಪುರ ಸೆಷನ್ಸ್ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೆ ಒಂದು ತಿಂಗಳೊಳಗೆ ಪ್ರಕರಣ ಇತ್ಯರ್ಥವಾಗದಿದ್ದರೆ ಬಂಧನ ಅಮಾನತುಗೊಳಿಸುವ ಬಗ್ಗೆ ಚಿಂತನೆ ನಡೆಸುವಂತೆ ಆದೇಶಿಸಲಾಗಿದೆ. ಹಾಗೊಂದು ವೇಳೆ ಅಮಾನತು ತೆರವುಗೊಂಡರೆ ವಿಶ್ವಕಪ್​ಗೂ ಮುನ್ನ ಮೊಹಮ್ಮದ್ ಶಮಿ ಬಂಧನಕ್ಕೊಳಗಾಗುವ ಸಾಧ್ಯತೆಗಳಿವೆ.

IPL 2023 Prize Money: ಸಿಎಸ್​ಕೆಗೆ ಸಿಕ್ತು ಬರೋಬ್ಬರಿ 20 ಕೋಟಿ: ರಹಾನೆ, ಗಿಲ್, ಶಮಿಗೂ ಸಿಕ್ತು ಲಕ್ಷ ಲಕ್ಷ ಹಣ: ಇಲ್ಲಿದೆ ಸಂಪೂರ್ಣ ಮಾಹಿತಿ

ಶಮಿ ವಿರುದ್ಧ ಆರೋಪ ಹೊರಿಸಿದ್ದ ಮಡದಿ

2018 ರಲ್ಲಿ, ಹಸಿನ್ ಜಹಾನ್ ಅವರು ಕ್ರಿಕೆಟಿಗ ಶಮಿ ವಿರುದ್ಧ ಕೌಟುಂಬಿಕ ಹಿಂಸೆ ಸೇರಿದಂತೆ ಇನ್ನಿತ್ತರ ವಿಚಾರಗಳನ್ನಿಟ್ಟುಕೊಂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ಅಲಿಪುರ ಸೆಷನ್ಸ್ ನ್ಯಾಯಾಲಯ ಆಗಸ್ಟ್ 29, 2019 ರಂದು, ಶಮಿಯನ್ನು ಬಂಧಿಸುವಂತೆ ಆದೇಶಿಸಿತು. ಬಳಿಕ ಈ ತೀರ್ಪನ್ನು ಪ್ರಶ್ನಿಸಿ ಶಮಿ ಅವರು ಕೆಳ ನ್ಯಾಯಾಲಯದಲ್ಲಿ ಪ್ರತಿ-ಅಪೀಲು ಸಲ್ಲಿಸಿದ್ದರು.

ಬಳಿಕ ಕೆಳ ನ್ಯಾಯಾಲಯ ನವೆಂಬರ್ 2, 2019 ರವರೆಗೆ ಶಮಿಯವರ ಬಂಧನವನ್ನು ತಡೆಹಿಡಿಯಲು ಆದೇಶಿಸಿತ್ತು. ಅಂದಿನಿಂದ ಈ ಪ್ರಕರಣವು ಬಹಳ ದಿನಗಳಿಂದ ವಿಚಾರಣೆಯಲ್ಲಿದೆ. ಈ ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ಹಸಿನ್ ಸುಪ್ರಿಯಾ ನ್ಯಾಯಾಲಯದ ಮೊರೆ ಹೋಗಿದ್ದರು. ಅದರಂತೆ, ಸಿಜೆಐ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿಎ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾರ್ ಅವರ ಪೀಠವು ಗುರುವಾರ ಅಲಿಪುರ ಸೆಷನ್ಸ್ ನ್ಯಾಯಾಲಯಕ್ಕೆ ಒಂದು ತಿಂಗಳೊಳಗೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚಿಸಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ