AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KCL 2024: 9 ಭರ್ಜರಿ ಸಿಕ್ಸ್​ಗಳೊಂದಿಗೆ ಅಬ್ಬರಿಸಿದ ಅಝರ್

Mohammed Azharuddeen: ಮೊಹಮ್ಮದ್ ಅಝರುದ್ದೀನ್ ಆರ್​ಸಿಬಿ ತಂಡದ ಮಾಜಿ ಆಟಗಾರ. 2021 ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದ ಯುವ ವಿಕೆಟ್ ಕೀಪರ್​ಗೆ ಒಂದೇ ಒಂದು ಪಂದ್ಯದಲ್ಲೂ ಚಾನ್ಸ್ ನೀಡಿರಲಿಲ್ಲ. ಇದೀಗ ಕೇರಳ ಕ್ರಿಕೆಟ್ ಲೀಗ್ ಮೂಲಕ ಮೊಹಮ್ಮದ್ ಅಝರುದ್ದೀನ್ ಅಬ್ಬರಿಸಲಾರಂಭಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ಗೆ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ.

KCL 2024: 9 ಭರ್ಜರಿ ಸಿಕ್ಸ್​ಗಳೊಂದಿಗೆ ಅಬ್ಬರಿಸಿದ ಅಝರ್
Mohammed Azharuddeen- MSD
ಝಾಹಿರ್ ಯೂಸುಫ್
|

Updated on: Sep 03, 2024 | 1:36 PM

Share

ಕೇರಳ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಯುವ ದಾಂಡಿಗ ಮೊಹಮ್ಮದ್ ಅಝರುದ್ದೀನ್ ಅಬ್ಬರಿಸಿದ್ದಾರೆ. ಅದು ಸಹ 9 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಎಂಬುದು ವಿಶೇಷ. ತಿರುವನಂತಪುರದ ಗ್ರೀನ್​ಫೀಲ್ಡ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಅಲೆಪ್ಪಿ ರಿಪ್ಪಲ್ಸ್ ಹಾಗೂ ತ್ರಿಶೂರ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಅಲೆಪ್ಪಿ ರಿಪ್ಪಲ್ಸ್ ತಂಡದ ನಾಯಕ ಮೊಹಮ್ಮದ್ ಅಝರುದ್ದೀನ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ತ್ರಿಶೂರ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಭಿಷೇಕ್ (0) ಶೂನ್ಯಕ್ಕೆ ಔಟಾದರೆ, ವರುಣ್ ನಾಯನಾರ್ 1 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಅಕ್ಷಯ್ ಮನೋಹರ್ 44 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 1 ಫೋರ್​​ನೊಂದಿಗೆ 57 ರನ್​ ಬಾರಿಸಿದರು. ಇನ್ನು ಅರ್ಜುನ್ ವೇಣುಗೋಪಾಲ್ 20 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ತ್ರಿಶೂರ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 161 ರನ್ ಕಲೆಹಾಕಿತು.

ಅಝರ್ ಅಬ್ಬರ- ಸಿಡಿಲಬ್ಬರ:

162 ರನ್​ಗಳ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಅಲೆಪ್ಪಿ ರಿಪ್ಪಲ್ಸ್ ಪರ ಮೊಹಮ್ಮದ್ ಅಝರುದ್ದೀನ್ ಹಾಗೂ ಕೃಷ್ಣ ಪ್ರಸಾದ್ ಆರಂಭಿಕರಾಗಿ ಕಣಕ್ಕಿಳಿದರು. ಆದರೆ 1 ರನ್​ಗಳಿಸಿ ಕೃಷ್ಣ ಪ್ರಸಾದ್ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಅಕ್ಷಯ್ ಶಿವ್ (3) ಕೂಡ ವಿಕೆಟ್ ಕೈಚೆಲ್ಲಿದರು.

ಆದರೆ ಮತ್ತೊಂದೆಡೆ ಕ್ರೀಸ್ ಕಚ್ಚಿ ನಿಂತ ಅಝರುದ್ದೀನ್ ನಾಯಕನಾಟ ಪ್ರದರ್ಶಿಸಿದರು. ತನ್ನ ಸ್ಪೋಟಕ ಬ್ಯಾಟಿಂಗ್​ನಿಂದಲೇ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ ಅಝರ್ ಸಿಕ್ಸ್-ಫೋರ್​ಗಳ ಸುರಿಮಳೆಗೈದರು.

ಅಲ್ಲದೆ ಕೇವಲ 47 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 92 ರನ್​ ಚಚ್ಚಿದರು. ಆದರೆ ಶತಕದಂಚಿನಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚಿತ್ತರು. ಅಷ್ಟರಲ್ಲಾಗಲೇ ಅಲೆಪ್ಪಿ ರಿಪ್ಪಲ್ಸ್ ತಂಡವು 15 ಓವರ್​ಗಳಲ್ಲಿ 139 ರನ್​ ಕಲೆಹಾಕಿತು. ಅಂತಿಮವಾಗಿ 18.3 ಓವರ್​ಗಳಲ್ಲಿ 163 ರನ್​ಗಳ ಗುರಿ ಮುಟ್ಟುವ ಮೂಲಕ ಅಲೆಪ್ಪಿ ರಿಪ್ಪಲ್ಸ್ ತಂಡವು 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಆರ್​ಸಿಬಿ ತಂಡದ ಮಾಜಿ ಆಟಗಾರ:

ವಿಶೇಷ ಎಂದರೆ ಮೊಹಮ್ಮದ್ ಅಝರುದ್ದೀನ್ ಈ ಹಿಂದೆ ಐಪಿಎಲ್​ನಲ್ಲಿ ಕಾಣಿಸಿಕೊಂಡಿದ್ದರು. 2021 ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದ ಯುವ ವಿಕೆಟ್ ಕೀಪರ್​ಗೆ ಒಂದೇ ಒಂದು ಪಂದ್ಯದಲ್ಲೂ ಚಾನ್ಸ್ ನೀಡಿರಲಿಲ್ಲ. ಇದೀಗ ಕೇರಳ ಕ್ರಿಕೆಟ್ ಲೀಗ್ ಮೂಲಕ ಮೊಹಮ್ಮದ್ ಅಝರುದ್ದೀನ್ ಅಬ್ಬರಿಸಲಾರಂಭಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ಗೆ ಕಂಬ್ಯಾಕ್ ಮಾಡುವ ಇರಾದೆಯಲ್ಲಿದ್ದಾರೆ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ