AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೀ ಸುಳ್ಳು… ಫೇಕ್ ನ್ಯೂಸ್ ವಿರುದ್ಧ ಕಿಡಿಕಾರಿದ ಮೊಹಮ್ಮದ್ ಶಮಿ

Mohammed Shami: 2023ರ ಏಕದಿನ ವಿಶ್ವಕಪ್​ನಲ್ಲಿ ಕರಾರುವಾಕ್ ದಾಳಿ ಮೂಲಕ ಮೊಹಮ್ಮದ್ ಶಮಿ ಸಂಚಲನ ಸೃಷ್ಟಿಸಿದ್ದರು. 7 ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿದಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸುವ ಮೂಲಕ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದರು. ಇದಾದ ಬಳಿಕ ಅವರು ಟೀಮ್ ಇಂಡಿಯಾ ಪರ ಕಣಕ್ಕಿಳಿದಿಲ್ಲ.

ಬರೀ ಸುಳ್ಳು... ಫೇಕ್ ನ್ಯೂಸ್ ವಿರುದ್ಧ ಕಿಡಿಕಾರಿದ ಮೊಹಮ್ಮದ್ ಶಮಿ
Mohammed Shami
ಝಾಹಿರ್ ಯೂಸುಫ್
|

Updated on: Oct 03, 2024 | 1:03 PM

Share

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಸುಳ್ಳು ಸುದ್ದಿಗಳ ವಿರುದ್ಧ ಕಿಡಿಕಾರಿದ್ದಾರೆ. ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಶಮಿ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯ ಬೌಲರ್, ಇವೆಲ್ಲವೂ ಕೇವಲ ಫೇಕ್ ನ್ಯೂಸ್​ಗಳು. ಇಂತಹ ವದಂತಿಗಳನ್ನು ಹರಡುವುದನ್ನು ದಯವಿಟ್ಟು ನಿಲ್ಲಿಸಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ.

2023ರ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಮೊಹಮ್ಮದ್ ಶಮಿ ಕಳೆದ ಕೆಲ ತಿಂಗಳಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದಾರೆ. ಅಲ್ಲದೆ ಪಾದದ ಶಸ್ತ್ರಚಿಕಿತ್ಸೆಯ ಬಳಿಕ ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸವನ್ನು ಸಹ ಆರಂಭಿಸಿದ್ದಾರೆ. ಇದಾಗ್ಯೂ ಅವರು ಸಂಪೂರ್ಣ ಫಿಟ್​ನೆಸ್ ಸಾಧಿಸದೇ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವುದಿಲ್ಲ ಎಂದು ತಿಳಿಸಿದ್ದರು. ಹೀಗಾಗಿ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಅವರು ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ.

ಇದರ ನಡುವೆ ಮೊಹಮ್ಮದ್ ಶಮಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಗೂ ಅಲಭ್ಯರಾಗಲಿದ್ದಾರೆ. ಮೊಣಕಾಲಿನ ಗಾಯದ ಕಾರಣ ಅವರು ನವೆಂಬರ್​ನಲ್ಲಿ ಆರಂಭವಾಗಲಿರುವ ಸರಣಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದವು. ಈ ಸುದ್ದಿಗಳನ್ನು ಅಲ್ಲಗಳೆದಿರುವ ಮೊಹಮ್ಮದ್ ಶಮಿ, ಇಂತಹ ಸುದ್ದಿಗಳಿಗೆ ಗಮನ ಕೊಡಬೇಡಿ ಎಂದು ಅಭಿಮಾನಿಗಳಿಗೆ ಕೇಳಿಕೊಂಡಿದ್ದಾರೆ.

ಇದೆಂತಹ ಆಧಾರರಹಿತ ವದಂತಿ? ನಾನು ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ. ಚೇತರಿಸಿಕೊಳ್ಳಲು ನನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದೇನೆ. ನಾನು ಬಾರ್ಡರ್ ಗವಾಸ್ಕರ್ ಸರಣಿಯಿಂದ ಹೊರಗುಳಿದಿರುವ ಬಗ್ಗೆ ಬಿಸಿಸಿಐ ಆಗಲಿ ಅಥವಾ ನಾನಾಗಲಿ ಹೇಳಿಲ್ಲ. ಅನಧಿಕೃತ ಮೂಲಗಳಿಂದ ಬರುವ ಇಂತಹ ಸುದ್ದಿಗಳ ಬಗ್ಗೆ ಗಮನ ಹರಿಸುವುದನ್ನು ನಿಲ್ಲಿಸಬೇಕೆಂದು ನಾನು ಸಾರ್ವಜನಿಕರಲ್ಲಿ ವಿನಂತಿಸುತ್ತೇನೆ. ದಯವಿಟ್ಟು ಇಂತಹ ವದಂತಿಗಳನ್ನು ನಿಲ್ಲಿಸಿ…ಇಂತಹ ಸುಳ್ಳು ಸುದ್ದಿಗಳನ್ನು ಹರಡಬೇಡಿ ಎಂದು ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಮೊಹಮ್ಮದ್ ಶಮಿ ಗಾಯಗೊಂಡಿದ್ದೇಗೆ?

ಏಕದಿನ ವಿಶ್ವಕಪ್ 2023 ರ ಪಂದ್ಯದ ವೇಳೆ​ ಮೊಹಮ್ಮದ್ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿದೆ. ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು.

ಇದನ್ನೂ ಓದಿ: 11 ಎಸೆತ​ಗಳಲ್ಲಿ 63 ರನ್​: ಸಿಡಿಲಬ್ಬರದ ಶತಕ ಸಿಡಿಸಿದ ಮಾರ್ಟಿನ್ ಗಪ್ಟಿಲ್

ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಮೊಹಮ್ಮದ್ ಶಮಿ ಫಿಟ್​ ಆಗಿದ್ದು, ಬೌಲಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ