Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್​ಗೆ ಡೇಟ್ ಫಿಕ್ಸ್

Mohammed Shami: ಟೀಮ್ ಇಂಡಿಯಾ ಪರ 64 ಟೆಸ್ಟ್ ಪಂದ್ಯಗಳನ್ನಾಡಿರುವ ಮೊಹಮ್ಮದ್ ಶಮಿ ಒಟ್ಟು 229 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಮುಂಬರುವ ಟೆಸ್ಟ್ ಸರಣಿಗಳ ವೇಳೆ ಟೀಮ್ ಇಂಡಿಯಾ ಪಾಲಿಗೆ ಅವರ ಲಭ್ಯತೆಯು ಅನಿವಾರ್ಯ. ಹೀಗಾಗಿಯೇ ಸಂಪೂರ್ಣ ಫಿಟ್​ನೆಸ್​ನೊಂದಿಗೆ ಮರಳಲು ಮೊಹಮ್ಮದ್ ಶಮಿಗೆ ಕಾಲಾವಕಾಶ ನೀಡಲಾಗಿದೆ. 

Mohammed Shami: ಮೊಹಮ್ಮದ್ ಶಮಿ ಕಂಬ್ಯಾಕ್​ಗೆ ಡೇಟ್ ಫಿಕ್ಸ್
Mohammed Shami
Follow us
|

Updated on: Aug 22, 2024 | 2:45 PM

ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಕಂಬ್ಯಾಕ್​ಗೆ ದಿನಾಂಕ ನಿಗದಿಯಾಗಿದೆ. ಕಳೆದ 7 ತಿಂಗಳುಗಳಿಂದ ಭಾರತ ತಂಡದಿಂದ ಹೊರಗುಳಿದಿರುವ ಶಮಿ ಅಕ್ಟೋಬರ್ 11 ರಂದು ನಡೆಯಲಿರುವ ರಣಜಿ ಟ್ರೋಫಿ ಪಂದ್ಯದ ಮೂಲಕ ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮರಳುವುದು ಖಚಿತವಾಗಿದೆ. ರಣಜಿ ಟ್ರೋಫಿಯಲ್ಲಿ ಮೊಹಮ್ಮದ್ ಶಮಿ ಬಂಗಾಳ ಪರ ಆಡಲಿದ್ದು, ಅದರಂತೆ ಅಕ್ಟೋಬರ್ 11 ರಂದು ಜರುಗಲಿರುವ ಉತ್ತರ ಪ್ರದೇಶ ವಿರುದ್ಧದ ಪಂದ್ಯದ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ. ವಿಶೇಷ ಎಂದರೆ ಈ ಪಂದ್ಯದ ಬೆನ್ನಲ್ಲೇ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸಹ ಆರಂಭವಾಗುತ್ತಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ. ಹೀಗಾಗಿ ರಣಜಿ ಟೂರ್ನಿಯಲ್ಲಿ ಬಂಗಾಳ ಪರ ಶಮಿ ಕಣಕ್ಕಿಳಿದರೆ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗುವುದು ಬಹುತೇಕ ಖಚಿತ. ಹೀಗಾಗಿ ಕಿವೀಸ್ ವಿರುದ್ಧದ ಸರಣಿಯಲ್ಲಿ ಶಮಿ ಟೀಮ್ ಇಂಡಿಯಾ ಪರ ಮತ್ತೆ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

NCAನಲ್ಲಿ ಕಠಿಣ ಅಭ್ಯಾಸ:

ಸದ್ಯ ಮೊಹಮ್ಮದ್ ಶಮಿ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಕಠಿಣ ತಾಲೀಮಿನಲ್ಲಿ ತೊಡಗಿಸಿಕೊಂಡಿರುವ ಅವರು ಸಂಪೂರ್ಣ ಫಿಟ್​ನೆಸ್​ನೊಂದಿಗೆ ರಣಜಿ ಟೂರ್ನಿಯಲ್ಲಿ ಕಣಕ್ಕಿಳಿಯಲು ಸಜ್ಜಾಗುತ್ತಿದ್ದಾರೆ.

ಟೀಮ್ ಇಂಡಿಯಾದಿಂದ ಹೊರಗುಳಿಯಲು ಕಾರಣವೇನು?

2023ರ ಏಕದಿನ ವಿಶ್ವಕಪ್​ನಲ್ಲಿ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದ ಶಮಿ, ವರ್ಲ್ಡ್ ಕಪ್ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಕ್ಕೆ ಮುಖ್ಯ ಕಾರಣ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು. ಏಕದಿನ ವಿಶ್ವಕಪ್​ ವೇಳೆ ಶಮಿ ಅವರ ಪಾದದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ನೋವಿನ ನಡುವೆಯೂ ಅವರು ನೋವು ನಿವಾರಕ ಮಾತ್ರೆಗಳನ್ನು ತೆಗೆದುಕೊಂಡು ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದರು. ಇದರಿಂದ ಅವರ ಪಾದದ ಸಮಸ್ಯೆಯು ಬಿಗಡಾಯಿಸಿತ್ತು.

ಹೀಗಾಗಿ ಅವರು ಏಕದಿನ ವಿಶ್ವಕಪ್ ಬಳಿಕ ಯಾವುದೇ ಪಂದ್ಯವಾಡಿರಲಿಲ್ಲ. ಅಲ್ಲದೆ ವೈದ್ಯಕೀಯ ಪರಿಶೀಲನೆ ವೇಳೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅನಿವಾರ್ಯತೆ ಕಂಡು ಬಂದಿತ್ತು. ಅದರಂತೆ ಕಳೆದ ಫೆಬ್ರವರಿ ತಿಂಗಳಲ್ಲಿ ಮೊಹಮ್ಮದ್ ಶಮಿ ಸರ್ಜರಿಗೆ ಒಳಗಾಗಿದ್ದರು. ಇದೇ ಕಾರಣದಿಂದಾಗಿ ಐಪಿಎಲ್​ನಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶಮಿ ಅಭ್ಯಾಸವನ್ನು ಶುರು ಮಾಡಿದ್ದಾರೆ.

ಇದನ್ನೂ ಓದಿ: IPL 2025: ಧೋನಿ RCB ತಂಡದ ನಾಯಕರಾಗಿದ್ದರೆ 3 ಟ್ರೋಫಿ ಗೆದ್ದಿರುತ್ತಿತ್ತು..!

ಇನ್ನು ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ತಿಳಿಸಿದ್ದಾರೆ. ಹೀಗಾಗಿ ಅದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧದ ಸರಣಿಯ ಮೂಲಕ ಅವರು ಭಾರತದ ಪರ ಮತ್ತೆ ಕಣಕ್ಕಿಳಿಯುವುದನ್ನು ನಿರೀಕ್ಷಿಸಬಹುದು.

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ