AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುಮ್ರಾ vs ಶಮಿ.. ಯಾರು ಬೆಸ್ಟ್? ಈ ಪ್ರಶ್ನೆಗೆ ಇಲ್ಲಿದೆ ಉತ್ತರ

Andy Roberts: ಆ್ಯಂಡಿ ರಾಬರ್ಟ್ಸ್ ವೆಸ್ಟ್ ಇಂಡೀಸ್​ನ ಮಾಜಿ ವೇಗಿ. ವಿಂಡೀಸ್ ಪರ 47 ಟೆಸ್ಟ್ ಪಂದ್ಯಗಳನ್ನಾಡಿದ್ದ ರಾಬರ್ಟ್ಸ್​ 202 ವಿಕೆಟ್​ ಕಬಳಿಸಿದ್ದಾರೆ. ಹಾಗೆಯೇ 56 ಏಕದಿನ ಪಂದ್ಯಗಳಿಂದ ಒಟ್ಟು 87 ವಿಕೆಟ್ ಕಬಳಿಸಿದ್ದಾರೆ. Andy Roberts: ಆ್ಯಂಡಿ ರಾಬರ್ಟ್ಸ್ ವೆಸ್ಟ್ ಇಂಡೀಸ್​ನ ಮಾಜಿ ವೇಗಿ. ವಿಂಡೀಸ್ ಪರ 47 ಟೆಸ್ಟ್ ಪಂದ್ಯಗಳನ್ನಾಡಿದ್ದ ರಾಬರ್ಟ್ಸ್​ 202 ವಿಕೆಟ್​ ಕಬಳಿಸಿದ್ದಾರೆ. ಹಾಗೆಯೇ 56 ಏಕದಿನ ಪಂದ್ಯಗಳಿಂದ ಒಟ್ಟು 87 ವಿಕೆಟ್ ಕಬಳಿಸಿದ್ದಾರೆ.

ಬುಮ್ರಾ vs ಶಮಿ.. ಯಾರು ಬೆಸ್ಟ್? ಈ ಪ್ರಶ್ನೆಗೆ ಇಲ್ಲಿದೆ ಉತ್ತರ
Bumrah - Shami
ಝಾಹಿರ್ ಯೂಸುಫ್
|

Updated on: Dec 10, 2024 | 2:14 PM

Share

ಟೀಮ್ ಇಂಡಿಯಾದ ಅತ್ಯುತ್ತಮ ವೇಗಿಗಳಲ್ಲಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ ಮುಂಚೂಣಿಯಲ್ಲಿದ್ದಾರೆ. ಈ ಇಬ್ಬರು ಜೊತೆಗೂಡಿದರೆ ಬ್ಯಾಟರ್​​ಗಳಿಗೆ ನಡುಕವಂತು ಶುರುವಾಗುತ್ತದೆ. ಇದಕ್ಕೆ ಸಾಕ್ಷಿ 2023ರ ಏಕದಿನ ವಿಶ್ವಕಪ್. ಈ ವಿಶ್ವಕಪ್​​ನಲ್ಲಿ ಇಬ್ಬರು ಜೊತೆಗೂಡಿ ಅತ್ಯುತ್ತಮ ದಾಳಿ ಸಂಘಟಿಸಿದ್ದರು. ಈ ಜುಗಲ್​ಬಂಧಿಯ ಬೆನ್ನಲ್ಲೇ ಮೂಡಿದ ಪ್ರಶ್ನೆಯೆಂದರೆ ಇವರಿಬ್ಬರಲ್ಲಿ ಯಾರು ಬೆಸ್ಟ್ ಎಂಬುದು. ಈ ಪ್ರಶ್ನೆಗೆ ವೆಸ್ಟ್ ಇಂಡೀಸ್​ನ ಮಾಜಿ ವೇಗದ ಬೌಲರ್​ ಆ್ಯಂಡಿ ರಾಬರ್ಟ್ಸ್ ಉತ್ತರ ನೀಡಿದ್ದಾರೆ.

70 ಮತ್ತು 80 ರ ದಶಕದಲ್ಲಿ ಬ್ಯಾಟರ್​​ಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದ ಆ್ಯಂಡಿ ರಾಬರ್ಟ್ಸ್,​ ಮೊಹಮ್ಮದ್ ಶಮಿ ಅವರನ್ನು ಭಾರತದ ಅತ್ಯುತ್ತಮ ಬೌಲರ್ ಎಂದು ಬಣ್ಣಿಸಿದ್ದಾರೆ. ಬುಮ್ರಾ ವಿಕೆಟ್ ಕಬಳಿಸಿದರೂ, ಶಮಿಯೇ ಬೆಸ್ಟ್ ಎಂದಿದ್ದಾರೆ.

ಮಿಡ್​ ಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಆ್ಯಂಡಿ ರಾಬರ್ಟ್ಸ್, ಪ್ರಸ್ತುತ ಟೀಮ್ ಇಂಡಿಯಾದ ಅತ್ಯುತ್ತಮ ವೇಗಿಗಳಲ್ಲಿ ಮೊಹಮ್ಮದ್ ಶಮಿ ಹಾಗೂ ಜಸ್​ಪ್ರೀತ್ ಬುಮ್ರಾ ಮುಂಚೂಣಿಯಲ್ಲಿದ್ದಾರೆ ಎಂದು ತಿಳಿಸಿದರು. ಇವರಿಬ್ಬರಲ್ಲಿ ಯಾರು ಉತ್ತಮ ವೇಗಿ ಎಂಬ ಪ್ರಶ್ನೆಗೆ, ಶಮಿ ಎಂದು ಉತ್ತರಿಸಿದ್ದಾರೆ. ಇದಕ್ಕೆ ಕಾರಣವನ್ನೂ ಸಹ ನೀಡಿದ್ದಾರೆ.

ಮೊಹಮ್ಮದ್ ಶಮಿ ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ ಅವರಷ್ಟು ವಿಕೆಟ್‌ಗಳನ್ನು ಕಬಳಿಸದಿದ್ದರೂ, ಅವರು ಸಂಪೂರ್ಣ ಪ್ಯಾಕೇಜ್ ಬೌಲರ್. ಏಕೆಂದರೆ ಅವರ ಶೈಲಿಯಲ್ಲಿ ಸ್ಥಿರತೆ ಇದೆ. ಶಮಿ ಚೆಂಡನ್ನು ಸೀಮಿಂಗ್ ಮತ್ತು ಸ್ವಿಂಗ್ ಮಾಡುವುದರಲ್ಲಿ ಸಮರ್ಥರು.

ಇದಲ್ಲದೇ ಶಮಿ ಬೌಲಿಂಗ್‌ನಲ್ಲಿ ಬುಮ್ರಾ ಅವರಂತೆ ನಿಯಂತ್ರಣವೂ ಇದೆ. ಹೀಗಾಗಿಯೇ ನಾನು ಮೊಹಮ್ಮದ್ ಶಮಿ ಅತ್ಯುತ್ತಮ ಬೌಲರ್ ಎಂದು ಹೇಳಬಲ್ಲೆ ಎಂದು ಆ್ಯಂಡಿ ರಾಬರ್ಟ್ಸ್​ ತಿಳಿಸಿದ್ದಾರೆ.

ಇನ್ನು ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಆಡುತ್ತಿರುವ ಟೀಮ್ ಇಂಡಿಯಾ ಮೊಹಮ್ಮದ್ ಶಮಿ ಅವರನ್ನು ಕರೆಸಿಕೊಳ್ಳುವುದು ಉತ್ತಮ.  ಏಕೆಂದರೆ ಅಲ್ಲಿನ ಪರಿಸ್ಥಿತಿಯಲ್ಲಿ ಶಮಿ ಅತ್ಯುತ್ತಮ ದಾಳಿ ಸಂಘಟಿಸಬಲ್ಲರು. ಹೀಗಾಗಿ ಉಳಿದ ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿಯಬೇಕೆಂದು ಬಯಸುವುದಾಗಿ ರಾರ್ಬಟ್ಸ್ ಹೇಳಿದ್ದಾರೆ.

ಸದ್ಯ ಮೊಹಮ್ಮದ್ ಶಮಿ ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ ಪರ ಆಡುತ್ತಿದ್ದಾರೆ. ಗಾಯದ ಕಾರಣ ಕಳೆದ ಒಂದು ವರ್ಷದಿಂದ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಹೀಗಾಗಿ ಅವರ ಕಾರ್ಯಕ್ಷಮತೆಯ ಪರೀಕ್ಷೆಗಾಗಿ ದೇಶೀಯ ಟೂರ್ನಿ ಆಡುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ಕೋಟಿ ಕೋಟಿ ಎಣಿಸಿದ್ದ ವಿನೋದ್ ಕಾಂಬ್ಳಿಯ ಇಂದಿನ ಆದಾಯ ಎಷ್ಟು ಗೊತ್ತೇ?

ಅದರಂತೆ ಇದೀಗ ಬಂಗಾಳ ಪರ ಭರ್ಜರಿ ಪ್ರದರ್ಶನ ನೀಡುತ್ತಿರುವ ಮೊಹಮ್ಮದ್ ಶಮಿ ಅವರ ಫಿಟ್​ನೆಸ್ ಮೇಲೆ ಎನ್​ಸಿಎ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಅಲ್ಲದೆ ಅವರ ಫಿಟ್​ನೆಸ್​ನಲ್ಲಿ ಯಾವುದೇ ಸಮಸ್ಯೆ ಕಂಡು ಬರದಿದ್ದರೆ ಆಸ್ಟ್ರೇಲಿಯಾಗೆ ಹೋಗಲು ಗ್ರೀನ್ ಸಿಗ್ನಲ್ ನೀಡಲಿದ್ದಾರೆ. ಅದರಂತೆ ಆಸ್ಟ್ರೇಲಿಯಾ ವಿರುದ್ಧದ ಕೊನೆಯ 2 ಟೆಸ್ಟ್ ಪಂದ್ಯಗಳಲ್ಲಿ ಮೊಹಮ್ಮದ್ ಶಮಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!