AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಹಮ್ಮದ್ ಶಮಿ ಖೇಲ್ ಖತಂ?

Mohammed Shami: ಭಾರತೀಯ ಕ್ರಿಕೆಟ್‌ನ 'ಸ್ವಿಂಗ್ ಸುಲ್ತಾನ್' ಖ್ಯಾತಿಯ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ವೃತ್ತಿಜೀವನವು ಈಗ ಅತ್ಯಂತ ನಿರ್ಣಾಯಕ ತಿರುವಿನಲ್ಲಿದೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಕೇವಲ 7 ಪಂದ್ಯಗಳಿಂದ 24 ವಿಕೆಟ್ ಪಡೆದು ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದ ಈ ಮಾರಕ ವೇಗಿ, ಈಗ ಟೀಮ್ ಇಂಡಿಯಾದಿಂದ ಸಂಪೂರ್ಣವಾಗಿ ತೆರೆಮರೆಗೆ ಸರಿಯುವ ಲಕ್ಷಣಗಳು ಕಾಣಿಸುತ್ತಿವೆ.

ಮೊಹಮ್ಮದ್ ಶಮಿ ಖೇಲ್ ಖತಂ?
Mohammed ShamiImage Credit source: GettyImages
ಝಾಹಿರ್ ಯೂಸುಫ್
|

Updated on: Jul 30, 2026 | 8:09 AM

Share

ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಯಶಸ್ವಿ ಹಾಗೂ ಅಪಾಯಕಾರಿ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವು ಬಹುತೇಕ ಅಂತ್ಯದ ಹಂತಕ್ಕೆ ಬಂದು ತಲುಪಿದೆಯೇ? ಬಿಸಿಸಿಐ  ಮೂಲಗಳು ಮತ್ತು ಇತ್ತೀಚಿನ ಆಯ್ಕೆ ಸಮಿತಿಯ ನಿರ್ಧಾರಗಳನ್ನು ಗಮನಿಸಿದರೆ ಹೌದು ಎನ್ನುವ ಉತ್ತರ ಸಿಗುತ್ತಿದೆ. ಶಮಿ ಅಧಿಕೃತವಾಗಿ ನಿವೃತ್ತಿ ಘೋಷಿಸದಿದ್ದರೂ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮಾತ್ರ ಅವರ ಹೆಸರನ್ನು ಮುಂದಿನ ಯೋಜನೆಗಳಿಂದ ಕೈಬಿಟ್ಟಿರುವುದು ಸ್ಪಷ್ಟವಾಗಿದೆ.

ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಮತ್ತು ಮುಖ್ಯ ಕೋಚ್ ಗೌತಮ್ ಗಂಭೀರ್ ಸದ್ಯ ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಬದಲಾವಣೆಗೆ ಕೈಹಾಕಿದ್ದಾರೆ. 2027ರ ಏಕದಿನ ವಿಶ್ವಕಪ್ ಮತ್ತು ಮುಂದಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಸರಣಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಸಿಸಿಐ ಸಂಪೂರ್ಣ ಯುವ ತಂಡವನ್ನು ಕಟ್ಟಲು ಮುಂದಾಗಿದೆ.

15 ಯುವ ವೇಗಿಗಳ ಬ್ಲೂಪ್ರಿಂಟ್:

ಟೀಮ್ ಇಂಡಿಯಾ ಭವಿಷ್ಯದ ವೇಗದ ಬೌಲಿಂಗ್ ವಿಭಾಗವನ್ನು ಬಲಪಡಿಸಲು 15 ಯುವ ಬೌಲರ್‌ಗಳ ವಿಶೇಷ ಪಡೆಯನ್ನು ಸಿದ್ಧಪಡಿಸುತ್ತಿದೆ.

ಇದೇ ಕಾರಣದಿಂದಾಗಿ ಅಫ್ಘಾನಿಸ್ತಾನ್ ಸರಣಿ, ಇಂಗ್ಲೆಂಡ್, ಐರ್ಲೆಂಡ್ ಹಾಗೂ ಝಿಂಬಾಬ್ವೆ ವಿರುದ್ಧದ ಸರಣಿಗಳಲ್ಲಿ ಯುವ ವೇಗಿಗಳನ್ನು ಕಣಕ್ಕಿಳಿಸಿ ಪ್ರಯೋಗ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿಯೇ ಈ ನಾಲ್ಕು ಸರಣಿಗಳಿಗೆ ಮೊಹಮ್ಮದ್ ಶಮಿ ಅವರನ್ನು ಆಯ್ಕೆ ಮಾಡಲಾಗಿಲ್ಲ.

ಸ್ಥಿರ ಪ್ರದರ್ಶನ ನೀಡಿದರೂ ನಿರ್ಲಕ್ಷ್ಯ:

ಮೊಹಮ್ಮದ್ ಶಮಿ ಇತ್ತೀಚೆಗೆ ದೇಶೀಯ ಕ್ರಿಕೆಟ್‌ನ ರಣಜಿ ಟ್ರೋಫಿ ಹಾಗೂ ವಿಜಯ್ ಹಜಾರೆ ಟ್ರೋಫಿಗಳಲ್ಲಿ ಬೆಂಗಾಲ್ ತಂಡದ ಪರ ಆಡಿ, ತಮ್ಮ ಮ್ಯಾಚ್ ಫಿಟ್‌ನೆಸ್ ಹಾಗೂ ವಿಕೆಟ್ ಪಡೆಯುವ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದರು. ಆದಾಗ್ಯೂ, ಇತ್ತೀಚಿನ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಸೇರಿದಂತೆ ಯಾವುದೇ ಅಂತರರಾಷ್ಟ್ರೀಯ ಸರಣಿಗೆ ಅವರನ್ನು ಪರಿಗಣಿಸಲಾಗಿಲ್ಲ.

ಅಂದರೆ ಇನ್ಮುಂದೆ ಟೆಸ್ಟ್​ಗೆ ಮೊಹಮ್ಮದ್ ಶಮಿ ಆಯ್ಕೆಯಾಗುವ ಸಾಧ್ಯತೆ ಇಲ್ಲ. ಏಕೆಂದರೆ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಯುವ ವೇಗಿ ಗುರ್ನೂರ್​ ಬ್ರಾರ್​ಗೆ ಅವಕಾಶ ನೀಡಲಾಗಿದೆ. ಇಲ್ಲಿ ಶಮಿ ಅವರ ಸ್ಥಾನಕ್ಕೆ ಬ್ರಾರ್​ ಅವರನ್ನು ಪರಿಗಣಿಸುತ್ತಿರುವುದು ಸ್ಪಷ್ಟ.

ನಿವೃತ್ತಿ ಬಗ್ಗೆ ಶಮಿ ಮಾತು!

ತಮ್ಮನ್ನು ತಂಡದಿಂದ ದೂರ ಇಟ್ಟಿರುವುದರ ಬಗ್ಗೆ ಮೊಹಮ್ಮದ್ ಶಮಿ ಎಲ್ಲೂ ಬೇಸರ ವ್ಯಕ್ತಪಡಿಸಿಲ್ಲ. ಹಾಗೆಯೇ ನಿವೃತ್ತಿ ಘೋಷಿಸುವ ಯಾವುದೇ ಆತುರದಲ್ಲೂ ಅವರಿದ್ದಂತೆ ಕಾಣುತ್ತಿಲ್ಲ.

ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವರು, “ನನಗೆ ಕ್ರಿಕೆಟ್ ಆಡುವುದು ಬೋರ್ ಎನಿಸಿದ ದಿನ ನಾನೇ ಆಟ ಬಿಡುತ್ತೇನೆ. ಆದರೆ, ವಯಸ್ಸು, ಗಾಯ ಅಥವಾ ತಂಡದಿಂದ ಕೈಬಿಟ್ಟರು ಎಂಬ ಕಾರಣಕ್ಕಾಗಿ ನಾನು ಖಂಡಿತಾ ನಿವೃತ್ತಿ ಪಡೆಯುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಕೊನೆಯ ಬಾರಿ ಕಣಕ್ಕಿಳಿದದ್ದು ಯಾವಾಗ?

ಒಂದು ವೇಳೆ ಬಿಸಿಸಿಐ ಶಮಿ ಅವರನ್ನು ಮತ್ತೆ ಅಂತರರಾಷ್ಟ್ರೀಯ ಪಂದ್ಯಗಳಿಗೆ ಆಯ್ಕೆ ಮಾಡದಿದ್ದರೆ, 2025ರ ಮಾರ್ಚ್ 9 ರಂದು ನ್ಯೂಝಿಲೆಂಡ್ ವಿರುದ್ಧ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವೇ ಭಾರತೀಯ ಜೆರ್ಸಿಯಲ್ಲಿ ಮೊಹಮ್ಮದ್ ಶಮಿ ಅವರ ಕೊನೆಯ ಪಂದ್ಯವಾಗಲಿದೆ.

ಇದನ್ನೂ ಓದಿ: CWG 2026: ಒಂದೇ ಸ್ಪರ್ಧೆಯಲ್ಲಿ ಭಾರತಕ್ಕೆ 2 ಪದಕ!

ಒಟ್ಟಾರೆಯಾಗಿ ಹೇಳುವುದಾದರೆ, ಮೊಹಮ್ಮದ್ ಶಮಿ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವು ಮುಕ್ತಾಯದ ಹಂತ ತಲುಪಿದ್ದರೂ, ಭಾರತೀಯ ಕ್ರಿಕೆಟ್‌ಗೆ ಅವರು ನೀಡಿದ ಕೊಡುಗೆ ಎಂದಿಗೂ ಮರೆಯಲಾಗದ್ದು. ತಂಡದಿಂದ ದೂರ ಉಳಿದರೂ ತಮ್ಮ ನಿವೃತ್ತಿಯ ನಿರ್ಧಾರವನ್ನು ತಾವೇ ತೆಗೆದುಕೊಳ್ಳುವ ಅವರ ಖಡಕ್ ನಿಲುವು, ಅವರ ಆಟದ ಮೇಲಿರುವ ಗೌರವ ಮತ್ತು ಆತ್ಮವಿಶ್ವಾಸವನ್ನು ತೋರಿಸುತ್ತದೆ. ಇದಾಗ್ಯೂ ಅವರಿಗೆ ಕಂಬ್ಯಾಕ್​ಗೆ ಮತ್ತೆ ಅವಕಾಶ ಸಿಗಲಿದೆಯಾ ಎಂಬ ಪ್ರಶ್ನೆಗೆ  ಕಾಲವೇ ಉತ್ತರಿಸಲಿದೆ.

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು