AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Shami: ಆಸೀಸ್ ವಿರುದ್ಧದ ಸರಣಿಗೆ ಎರಡು ದಿನವಿರುವಾಗ ಭಾರತಕ್ಕೆ ದೊಡ್ಡ ಶಾಕ್

India vs Australia: ಬಹುಕಾಲದ ಬಳಿಕ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿದ್ದ ಮೊಹಮ್ಮದ್ ಶಮಿ (Mohammed Shami) ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ.

Mohammed Shami: ಆಸೀಸ್ ವಿರುದ್ಧದ ಸರಣಿಗೆ ಎರಡು ದಿನವಿರುವಾಗ ಭಾರತಕ್ಕೆ ದೊಡ್ಡ ಶಾಕ್
IND vs AUS
TV9 Web
| Edited By: |

Updated on:Sep 18, 2022 | 8:22 AM

Share

ಏಷ್ಯಾಕಪ್​​ನ (Asia Cup) ಸೂಪರ್ 4 ಹಂತದಲ್ಲಿ ಮುಗ್ಗರಿಸಿ ತವರಿಗೆ ಬಂದ ಭಾರತ ಇದೀಗ ಆಸ್ಟ್ರೇಲಿಯಾ (India vs Australia) ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ. ಇದೇ ಸೆಪ್ಟಂಬರ್ 20 ರಂದು ಮೂರು ಪಂದ್ಯಗಳ ಟಿ20 ಸರಣಿ ಪೈಕಿ ಮೊದಲ ಪಂದ್ಯ ನಡೆಯಲಿದೆ. ಈಗಾಗಲೇ ಈ ಸರಣಿಗೆ ಟೀಮ್ ಇಂಡಿಯಾ ಕೂಡ ಪ್ರಕಟವಾಗಿದ್ದು ಆಟಗಾರರು ಮೊದಲ ಹಣಾಹಣಿಗಾಗಿ ಮೊಹಾಲಿ ತಲುಪಿದ್ದಾರೆ. ಹೀಗಿರುವಾಗ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಬಹುಕಾಲದ ಬಳಿಕ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿದ್ದ ಮೊಹಮ್ಮದ್ ಶಮಿ (Mohammed Shami) ಅವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದಿದ್ದಾರೆ. ಈ ಮೂಲಕ ಶಮಿ ಟಿ20 ವಿಶ್ವಕಪ್​ನಲ್ಲಿ ಆಡುವ ಕನಸು ಬಹುತೇಕ ನುಚ್ಚುನೂರುಗೊಂಡಿದೆ.

ಮೊಹಮ್ಮದ್ ಶಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದಿರುವ ವಿಚಾರವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಚಿತಪಡಿಸಿದೆ. ಶಮಿಗೆ ಕೋವಿಡ್-19 ದೃಢಪಟ್ಟಿದೆ. ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ವಿಶ್ರಾಂತಿಯಲ್ಲಿದ್ದಾರೆ. ಚಿಂತಿಸುವ ಅಗತ್ಯವೇನಿಲ್ಲ. ಅವರೀಗ ಪ್ರತ್ಯೇಕವಾಸದಲ್ಲಿ ಉಳಿಯಬೇಕಿದೆ ಮತ್ತು ಗುಣಮುಖರಾದ ನಂತರವಷ್ಟೇ ತಂಡ ಸೇರಿಕೊಳ್ಳಬಹುದಾಗಿದೆ ಎಂದು ಬಿಸಿಸಿಐ ತಿಳಿಸಿವೆ.

ಇನ್ನು ಮೊಹಮ್ಮದ್ ಶಮಿ ಅವರ ಬದಲು ವೇಗಿ ಉಮೇಶ್‌ ಯಾದವ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇದುವರೆಗೆ 7 ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ ಪರ ಆಡಿರುವ ಉಮೇಶ್, 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧವೇ ಕೊನೆಯ ಸಲ ಟೀಮ್ ಇಂಡಿಯಾ ಚುಟುಕು ಕ್ರಿಕೆಟ್​ನಲ್ಲಿ ಕಣಕ್ಕಿಳಿದ್ದರು.

ಇದನ್ನೂ ಓದಿ
Image
T20 World Cup : ಈ ಬಾರಿಯ ಟಿ20 ವಿಶ್ವಕಪ್ ಮಿಸ್ ಮಾಡಿಕೊಳ್ಳುತ್ತಿರುವ ವಿಶ್ವದ ಸ್ಟಾರ್ ಕ್ರಿಕೆಟಿಗರಿವರು
Image
IND vs AUS: ಆಸೀಸ್ ವಿರುದ್ಧ ಕೊಹ್ಲಿಯೇ ಕಿಂಗ್..! 2020 ರ ದಾಖಲೆ ಮುರಿಯುವ ತವಕದಲ್ಲಿ ವಿರಾಟ್
Image
Duleep Trophy: ಪೃಥ್ವಿ ಶಾ ಅಬ್ಬರದ ಶತಕ; ಕೊನೆಯ ದಿನದಲ್ಲಿ 468 ರನ್ ಟಾರ್ಗೆಟ್ ಹೊತ್ತ ಕೇಂದ್ರ ವಲಯ
Image
ತಲೆಯಿಂದ ರಕ್ತ ಸುರಿಯುತ್ತಿದ್ದರೂ ಆಟ ಮುಂದುವರೆಸಿ ಗೆದ್ದ ಕುಸ್ತಿಪಟು ಬಜರಂಗ್ ಪುನಿಯಾ..! ವಿಡಿಯೋ ನೋಡಿ

ಭಾರತ ತಂಡ ಮೊದಲಿಗೆ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಆಡಲಿದ್ದು ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡದ ವಿರುದ್ಧವೂ ಟಿ20 ಮತ್ತು ಏಕದಿನ ಸರಣಿಯನ್ನು ಆಡಬೇಕಿದೆ. ಮುಂದಿನ ತಿಂಗಳು ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಸಜ್ಜಾಗಲು ಈ ಎರಡು ಸರಣಿಗಳು ಮಾತ್ರ ಉಳಿದಿವೆ. ಟೀಮ್ ಇಂಡಿಯಾ ಮೊದಲಿಗೆ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದೆ. ಮೊದಲ ಪಂದ್ಯ ಸೆಪ್ಟಂಬರ್ 20 ರಂದು ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್​ನಲ್ಲಿ ಆಯೋಜಿಸಲಾಗದೆ. ದ್ವಿತೀಯ ಟಿ20 ಸೆ. 23 ಹಾಗೂ ಅಂತಿಮ ಪಂದ್ಯ ಸೆ. 25 ರಂದು ಕ್ರಮವಾಗಿ ನಾಗ್ಪುರ ಮತ್ತು ಹೈದರಾಬಾದ್​ನಲ್ಲಿ ನಡೆಯಲಿದೆ.

ಇದಾದ ಬಳಿಕ ಹರಿಣಗಳ ವಿರುದ್ಧ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿ ಆಡಲಿದೆ. ಸೆ. 28ಕ್ಕೆ ತಿರುವನಂತಪುರಂನಲ್ಲಿ ಮೊದಲ ಟಿ20, ಅಕ್ಟೋಬರ್ 2 ಮತ್ತು ಅ. 4 ರಂದು ಕ್ರಮವಾಗಿ ಗುವಾಹಟಿ ಮತ್ತು ಇಂಧೋರ್​ನಲ್ಲಿ ದ್ವಿತೀಯ ಮತ್ತು ತೃತೀಯ ಟಿ20 ಆಯೋಜಿಸಲಾಗಿದೆ. ಇನ್ನು ಮೊದಲ ಏಕದಿನ ಅ. 6, . 9 ಮತ್ತು ಅ. 11 ರಂದು ಲಖನೌ, ರಾಂಚಿ ಮತ್ತು ಡೆಲ್ಲಿಯಲ್ಲಿ ನಡೆಯಲಿದೆ. ಟಿ20 ಪಂದ್ಯ ಸಂಜೆ 7:30ಕ್ಕೆ ಶುರುವಾದರೆ, ಏಕದಿನ ಪಂದ್ಯ ಮಧ್ಯಾಹ್ನ 1:30ಕ್ಕೆ ಪ್ರಾರಂಭಗೊಳ್ಳಲಿದೆ.

ಆಸೀಸ್ ವಿರುದ್ಧದ ಟಿ20 ಸರಣಿಗೆ ಭಾರತ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಜಸ್‌ಪ್ರೀತ್ ಬುಮ್ರಾ, ಉಮೇಶ್ ಯಾದವ್.

Published On - 8:22 am, Sun, 18 September 22

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ