AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ranji Trophy 2024: ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮೊಹಮ್ಮದ್ ಶಮಿ ಸಹೋದರ ಎಂಟ್ರಿ..!

Ranji Trophy 2024: ಈ ಬಾರಿಯ ರಣಜಿ ಟೂರ್ನಿಗೆ ಕರ್ನಾಟಕ ತಂಡವನ್ನು ಕೂಡ ಘೋಷಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಯುವ ಬ್ಯಾಟರ್ ನಿಕಿನ್ ಜೋಸ್ ಕಾಣಿಸಿಕೊಳ್ಳಲಿದ್ದಾರೆ.

Ranji Trophy 2024: ಸ್ಪರ್ಧಾತ್ಮಕ ಕ್ರಿಕೆಟ್​ಗೆ ಮೊಹಮ್ಮದ್ ಶಮಿ ಸಹೋದರ ಎಂಟ್ರಿ..!
Kaif - Shami
TV9 Web
| Edited By: |

Updated on: Dec 30, 2023 | 11:53 AM

Share

ಜನವರಿ 5 ರಿಂದ ಶುರುವಾಗಲಿರುವ ರಣಜಿ ಟೂರ್ನಿಗಾಗಿ (Ranji Trophy 2024) ಬಂಗಾಳ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡವನ್ನು ಪಶ್ಚಿಮ ಬಂಗಾಳದ ಕ್ರೀಡಾ ಸಚಿವ / ಆಟಗಾರ ಮನೋಜ್ ತಿವಾರಿ ಮುನ್ನಡೆಸಲಿದ್ದಾರೆ. ವಿಶೇಷ ಎಂದರೆ ಇದು ದೇಶೀಯ ಅಂಗಳದಲ್ಲಿ ತಿವಾರಿ ಅವರ ಕೊನೆಯ ಟೂರ್ನಿ. ಈ ಬಾರಿಯ ರಣಜಿ ಟ್ರೋಫಿಯೊಂದಿಗೆ ಕ್ರಿಕೆಟ್​ ಬದುಕಿಗೆ ವಿದಾಯ ಹೇಳಲು ಮನೋಜ್ ತಿವಾರಿ ನಿರ್ಧರಿಸಿದ್ದಾರೆ.

ಇನ್ನು ಈ ಬಾರಿಯ ಹದಿನೆಂಟು ಸದಸ್ಯರ ಬಳಗದಲ್ಲಿ ಮೊಹಮ್ಮದ್ ಶಮಿ ಅವರ ಸಹೋದರ ಮೊಹಮ್ಮದ್ ಕೈಫ್​ಗೆ ಸ್ಥಾನ ಲಭಿಸಿದೆ. 2021 ರಲ್ಲೇ ಮುಷ್ತಾಕ್ ಅಲಿ ಟೂರ್ನಿಯ ಮೂಲಕ ದೇಶೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ಕೈಫ್​ ಇದೇ ಮೊದಲ ಬಾರಿ ರಣಜಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ವಿಶೇಷ ಎಂದರೆ ಮೊಹಮ್ಮದ್ ಶಮಿಯಂತೆ ಮೊಹಮ್ಮದ್ ಕೈಫ್ ಕೂಡ ವೇಗದ ಬೌಲರ್​. ಈಗಾಗಲೇ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7 ಪಂದ್ಯಗಳಿಂದ 12 ವಿಕೆಟ್ ಕಬಳಿಸಿದ್ದಾರೆ. ಇದೀಗ ರಣಜಿ ಟೂರ್ನಿಯ ಮೂಲಕ ಎಲ್ಲರ ಗಮನ ಸೆಳೆಯುವ ವಿಶ್ವಾಸದಲ್ಲಿದ್ದಾರೆ ಕೈಫ್.

ರಣಜಿ ಟ್ರೋಫಿಗೆ ಬಂಗಾಳ ತಂಡ: ಮನೋಜ್ ತಿವಾರಿ (ನಾಯಕ), ಅನುಸ್ತುಪ್ ಮಜುಂದಾರ್, ಸುದೀಪ್ ಘರಾಮಿ, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೌರವ್ ಪಾಲ್ (ವಿಕೆಟ್ ಕೀಪರ್), ಶ್ರೇಯಾಂಶ್ ಘೋಷ್, ರಂಜೋತ್ ಸಿಂಗ್ ಖೈರಾ, ಸುಭಮ್ ಚಟರ್ಜಿ, ಆಕಾಶ್ ದೀಪ್, ಇಶಾನ್ ಪೊರೆಲ್, ಪ್ರದೀಪ್ತ ಪ್ರಮಾಣಿಕ್, ಕರಣ್ ಲಾಲ್, ಕೌಶಿಕ್ ಮೈತಿ, ಮೊಹಮ್ಮದ್ ಕೈಫ್, ಅಂಕಿತ್ ಮಿಶ್ರಾ, ಪ್ರಯಾಸ್ ರೇ ಬರ್ಮನ್, ಸೂರಜ್ ಸಿಂಧು ಜೈಸ್ವಾಲ್, ಸುಮನ್ ದಾಸ್.

ಇದನ್ನೂ ಓದಿ: IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?

ರಣಜಿ ಟೂರ್ನಿಗೆ ಕರ್ನಾಟಕ ತಂಡದ ಘೋಷಣೆ:

ಈ ಬಾರಿಯ ರಣಜಿ ಟೂರ್ನಿಗೆ ಕರ್ನಾಟಕ ತಂಡವನ್ನು ಕೂಡ ಘೋಷಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ಯುವ ಬ್ಯಾಟರ್ ನಿಕಿನ್ ಜೋಸ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ  ಯುವ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಸುಜಯ್​ಗೆ ಈ ಬಾರಿ ತಂಡದಲ್ಲಿ ಅವಕಾಶ ಲಭಿಸಿದೆ.

ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್ (ನಾಯಕ), ಆರ್. ಸಮರ್ಥ್, ದೇವದತ್ ಪಡಿಕ್ಕಲ್, ನಿಕಿನ್ ಜೋಸ್ (ಉಪನಾಯಕ), ಮನೀಶ್ ಪಾಂಡೆ, ಶುಭಾಂಗ್ ಹೆಗ್ಡೆ, ಶರತ್ ಶ್ರೀನಿವಾಸ್, ವಿಯಕುಮಾರ್ ವೈಶಾಕ್, ವಿ. ಕೌಶಿಕ್, ವಿದ್ವತ್ ಕಾವೇರಪ್ಪ, ಕೆ.ಶಶಿಕುಮಾರ್, ಸುಜಯ್ ಸಾತೇರಿ, ಡಿ.ನಿಶ್ಚಲ್ , ಎಂ.ವೆಂಕಟೇಶ್, ಕಿಶನ್ ಬೇಡರೆ, ರೋಹಿತ್ ಕುಮಾರ್.

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ