AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾ ಸರಣಿ ಮಧ್ಯೆ ಶಮಿ ಎಂಟ್ರಿ ಸಾಧ್ಯತೆ

Mohammed Shami: ಮೊಹಮ್ಮದ್ ಶಮಿ ಟೀಮ್ ಇಂಡಿಯಾ ಪರ 64 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 229 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದಾಗ್ಯೂ ಶಮಿ ಅವರನ್ನು ಫಿಟ್​ನೆಸ್ ಸಮಸ್ಯೆಯ ಕಾರಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿಲ್ಲ. ಆದರೀಗ ಕಂಬ್ಯಾಕ್ ಮಾಡಲು ಟೀಮ್ ಇಂಡಿಯಾ ವೇಗಿ ಸಜ್ಜಾಗಿದ್ದಾರೆ.

ಆಸ್ಟ್ರೇಲಿಯಾ ಸರಣಿ ಮಧ್ಯೆ ಶಮಿ ಎಂಟ್ರಿ ಸಾಧ್ಯತೆ
Mohammed Shami
ಝಾಹಿರ್ ಯೂಸುಫ್
|

Updated on: Oct 28, 2024 | 9:27 AM

Share

ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್​ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡದಲ್ಲಿ ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ ಕಾಣಿಸಿಕೊಂಡಿಲ್ಲ. ಇದಕ್ಕೆ ಬಹುಮುಖ್ಯ ಕಾರಣ ಅವರ ಫಿಟ್​ನೆಸ್ ಸಮಸ್ಯೆ. ಪಾದದ ನೋವಿನಿಂದ ಚೇತರಿಸಿಕೊಂಡಿರುವ ಶಮಿ ಇದೀಗ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​​ನೆಸ್ ಕಸರತ್ತಿನಲ್ಲಿ ತೊಡಗಿಸಿಕೊಂಡಿದ್ದಾರೆ.

ಅತ್ತ ಫಿಟ್​​ನೆಸ್​ ಪಡೆಯಲು ಕಸರತ್ತು ಶುರು ಮಾಡಿದರೂ ಶಮಿ ಅವರನ್ನು ಆಸ್ಟ್ರೇಲಿಯಾ ಸರಣಿಗೆ ಪರಿಗಣಿಸದಿರಲು ಕಾರಣ, ಅವರು ಒಂದು ವರ್ಷದಿಂದ ಯಾವುದೇ ಪಂದ್ಯವನ್ನಾಡದಿರುವುದು. ಹೀಗಾಗಿಯೇ ಮೊಹಮ್ಮದ್ ಶಮಿ ದೇಶೀಯ ಅಂಗಳದಲ್ಲಿ ಒಂದೆರಡು ಪಂದ್ಯಗಳನ್ನಾಡಿ ತಮ್ಮ ಫಿಟ್​ನೆಸ್ ಅನ್ನು ಸಾಬೀತುಪಡಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇದೀಗ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಮೊಹಮ್ಮದ್ ಶಮಿ ನವೆಂಬರ್ 6 ರಿಂದ ರಣಜಿ ಕ್ರಿಕೆಟ್​ಗೆ ಮರಳಲಿದ್ದಾರೆ ಎಂದು ವರದಿಯಾಗಿದೆ. ಈ ವರದಿಯಂತೆ ಶಮಿ ಡಿಸೆಂಬರ್ ಒಳಗೆ ಎರಡು ಮೂರು ರಣಜಿ ಪಂದ್ಯಗಳನ್ನಾಡಿದರೆ ಅವರನ್ನು ಆಸ್ಟ್ರೇಲಿಯಾ ಸರಣಿಗೆ ಪರಿಗಣಿಸಲಿದ್ದಾರೆ. ಅದರಂತೆ ಮೊಹಮ್ಮದ್ ಶಮಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ಅಂದರೆ ಬ್ರಿಸ್ಬೇನ್​ನಲ್ಲಿ ಡಿಸೆಂಬರ್ 14 ರಿಂದ ಶುರುವಾಗಲಿರುವ ಗಬ್ಬಾ ಟೆಸ್ಟ್​ಗೂ ಮುನ್ನ ಶಮಿ ಭಾರತ ತಂಡದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ನಡುವೆಯೇ ಮೊಹಮ್ಮದ್ ಶಮಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟರೂ ಅಚ್ಚರಿಪಡಬೇಕಿಲ್ಲ.

ಬಾರ್ಡರ್-ಗವಾಸ್ಕರ್​ ಟೆಸ್ಟ್​ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್ , ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಮೀಸಲು ಆಟಗಾರರು: ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ನವದೀಪ್ ಸೈನಿ.

ಇದನ್ನೂ ಓದಿ: 4 ಓವರ್​ಗಳಲ್ಲಿ 93 ರನ್​ಗಳು… 7 ರನ್​ಗಳಿಂದ ಬೌಲರ್​ಗೆ ಶತಕ ಮಿಸ್..!

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳಾಪಟ್ಟಿ:

ತಂಡಗಳು ದಿನಾಂಕ ಸಮಯ ಸ್ಥಳ
1ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 22 ನವೆಂಬರ್ 2024 7:50 AM ಪರ್ತ್
2ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ (D/N) ಶುಕ್ರವಾರ, 6 ಡಿಸೆಂಬರ್ 2024 9:30 AM ಅಡಿಲೇಡ್
3ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶನಿವಾರ, 14 ಡಿಸೆಂಬರ್ 2024 5:50 AM ಬ್ರಿಸ್ಬೇನ್
4ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಗುರುವಾರ, 26 ಡಿಸೆಂಬರ್ 2024 5 AM ಮೆಲ್ಬೋರ್ನ್
5ನೇ ಟೆಸ್ಟ್, ಆಸ್ಟ್ರೇಲಿಯಾ vs ಭಾರತ ಶುಕ್ರವಾರ, 3 ಜನವರಿ 2025 5 AM ಸಿಡ್ನಿ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ