AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ರೇಸ್​ನಲ್ಲಿ ಮೊಹಮ್ಮದ್ ಶಮಿ: ವರದಿ

Mohammed Shami: ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 26 ರಿಂದ ಆರಂಭವಾಗಲಿರುವ 2 ಪಂದ್ಯಗಳ ಈ ಸರಣಿಯಲ್ಲಿ ಶಮಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಪ್ರತಿಷ್ಠಿತ ಅರ್ಜುನ ಪ್ರಶಸ್ತಿ ರೇಸ್​ನಲ್ಲಿ ಮೊಹಮ್ಮದ್ ಶಮಿ: ವರದಿ
Mohammed Shami
TV9 Web
| Edited By: |

Updated on: Dec 13, 2023 | 6:30 PM

Share

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ (Mohammed Shami) ಅವರ ಹೆಸರನ್ನು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ಮುಗಿದ ಏಕದಿನ ವಿಶ್ವಕಪ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶಮಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಫೈನಲ್​ಗೆ ಪ್ರವೇಶಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಇದೇ ಕಾರಣದಿಂದಾಗಿ ಇದೀಗ ಬಿಸಿಸಿಐ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗೆ ಶಮಿಯ ಹೆಸರನ್ನು ಶಿಫಾರಸ್ಸು ಮಾಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ಮಾಡಿದ ವರದಿಯ ಪ್ರಕಾರ, ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವಕ್ಕೆ ನಾಮನಿರ್ದೇಶನಗೊಂಡವರ ಪಟ್ಟಿಯಲ್ಲಿ ಶಮಿ ಹೆಸರು ಇರಲಿಲ್ಲ. ಇದೀಗ ಮೊದಲ ಪಟ್ಟಿಯಲ್ಲಿ ಕಾಣಿಸಿಕೊಳ್ಳದ ಟೀಮ್ ಇಂಡಿಯಾ ವೇಗಿಯ ಹೆಸರನ್ನು ಪರಿಗಣಿಸಲು ಬಿಸಿಸಿಐ ಕ್ರೀಡಾ ಸಚಿವಾಲಯಕ್ಕೆ ವಿಶೇಷ ವಿನಂತಿಯನ್ನು ಮಾಡಿದೆ. ಹೀಗಾಗಿ ಅರ್ಜುನ ಪ್ರಶಸ್ತಿ ರೇಸ್​ನಲ್ಲಿ ಮೊಹಮ್ಮದ್ ಶಮಿ ಹೆಸರು ಸೇರ್ಪಡೆಯಾಗಲಿದೆ ಎಂದು ವರದಿಯಾಗಿದೆ.

ಈ ಬಾರಿಯ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಶಮಿ ಕೇವಲ 7 ಪಂದ್ಯಗಳನ್ನಾಡಿದ್ದರು. ಈ ವೇಳೆ 10.70 ರ ಸರಾಸರಿಲ್ಲಿ ಒಟ್ಟು 24 ವಿಕೆಟ್ ಕಬಳಿಸಿದ್ದರು. ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿದ್ದರು. ಈ ಅಮೋಘ ಪ್ರದರ್ಶನದ ಫಲವಾಗಿ ಇದೀಗ ದೇಶದ ಪ್ರತಿಷ್ಠಿತ ಕ್ರೀಡಾ ಗೌರವ ಅರ್ಜುನ ಪ್ರಶಸ್ತಿಗೆ ಶಮಿಯ ಹೆಸರನ್ನು ಶಿಫಾರಸ್ಸು ಮಾಡಲಾಗಿದೆ.

ಇದನ್ನೂ ಓದಿ: 5 ವಿಕೆಟ್​ಗೆ 5 ದಾಖಲೆಗಳು: ಇದು ಮೊಹಮ್ಮದ್ ಶಮಿ ಮ್ಯಾಜಿಕ್

ಸದ್ಯ ಟೀಮ್ ಇಂಡಿಯಾದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದ್ದಾರೆ. ಡಿಸೆಂಬರ್ 26 ರಿಂದ ಆರಂಭವಾಗಲಿರುವ 2 ಪಂದ್ಯಗಳ ಈ ಸರಣಿಯಲ್ಲಿ ಶಮಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಅಂದರೆ ಏಕದಿನ ವಿಶ್ವಕಪ್​ ಬಳಿಕ ಮೊಹಮ್ಮದ್ ಶಮಿ, ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯೊಂದಿಗೆ ಕಂಬ್ಯಾಕ್ ಮಾಡಲಿದ್ದಾರೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ