AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡಿದ ಸಿರಾಜ್

Mumbai vs Hyderabad: ಮುಂಬೈ ವಿರುದ್ಧದ ಸೂಪರ್ ಲೀಗ್​ ಪಂದ್ಯದಲ್ಲಿ ಹೈದರಾಬಾದ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡವು 18.5 ಓವರ್​​ಗಳಲ್ಲಿ 131 ರನ್​​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು 11.5 ಓವರ್​​ಗಳಲ್ಲಿ ಚೇಸ್ ಮಾಡುವ ಮೂಲಕ ಹೈದರಾಬಾದ್ ತಂಡ 9 ವಿಕೆಟ್​​ಗಳ ಗೆಲುವು ದಾಖಲಿಸಿದೆ.

ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ಆಟಗಾರನಿಗೆ ನೀಡಿದ ಸಿರಾಜ್
Mohammed Siraj
ಝಾಹಿರ್ ಯೂಸುಫ್
|

Updated on: Dec 13, 2025 | 7:40 AM

Share

ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಸೂಪರ್ ಲೀಗ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ತಂಡಕ್ಕೆ ಹೈದರಾಬಾದ್ ತಂಡ ಸೋಲುಣಿಸಿದೆ. ಹೈದರಾಬಾದ್ ತಂಡದ ಈ ಗೆಲುವಿನ ರೂವಾರಿ ಮೊಹಮ್ಮದ್ ಸಿರಾಜ್ (Mohammed Siraj). ಈ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ತಂಡದ ನಾಯಕ ಮಿಲಿಂದ್ ಬೌಲಿಂಗ್ ಆಯ್ದುಕೊಂಡಿದ್ದರು.

ನಾಯಕನ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಕರಾರುವಾಕ್ಕಾಗಿ ದಾಳಿ ಸಂಘಟಿಸಿದ ಸಿರಾಜ್ 3.5 ಓವರ್‌ಗಳಲ್ಲಿ ಕೇವಲ 17 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಪರಿಣಾಮ ಅಜಿಂಕ್ಯ ರಹಾನೆ, ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ಅಂಗ್ ಕ್ರಿಶ್ ರಘುವಂಶಿ, ಸೂರ್ಯಾಂಶ್ ಶೆಡ್ಗೆ ಯನ್ನು ಒಳಗೊಂಡ ಮುಂಬೈ ತಂಡವು 18.5 ಓವರ್‌ಗಳಲ್ಲಿ 131 ರನ್ ಗಳಿಸಿ ಆಲೌಟ್ ಆಯಿತು.

132 ರನ್ ಗಳ ಸುಲಭ ಗುರಿ ಬೆನ್ನತ್ತಿದ ಹೈದರಾಬಾದ್ ತಂಡಕ್ಕೆ ಅಮನ್ ರಾವ್ ಹಾಗೂ ತನ್ಮಯ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದ್ದರು. ಮೊದಲ ವಿಕೆಟ್‌ಗೆ 127 ರನ್ ಪೇರಿಸಿದ ಬಳಿಕ ತನ್ಮಯ್ (75) ಔಟಾದರು. ಇನ್ನು ಅಮನ್ ರಾವ್ ಅಜೇಯ 52 ರನ್ ಬಾರಿಸಿ 11.5 ಓವರ್‌ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಹೈದರಾಬಾದ್ ತಂಡ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

ಹೃದಯ ಗೆದ್ದ ಸಿರಾಜ್:

ಈ ಪಂದ್ಯದಲ್ಲಿ 23 ಎಸೆತಗಳನ್ನು ಎಸೆದಿದ್ದ ಮೊಹಮ್ಮದ್ ಸಿರಾಜ್ ಕೇವಲ 17 ರನ್ ನೀಡಿ 3 ಕಬಳಿಸಿ ಮಿಂಚಿದ್ದರು. ನಿರೀಕ್ಷೆಯಂತೆ ಸಿರಾಜ್ ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಒಲಿಯಿತು. ಆದರೆ ಈ ಪ್ರಶಸ್ತಿಯನ್ನು ಸಿರಾಜ್ ಹೈದರಾಬಾದ್ ತಂಡದ ಆರಂಭಿಕ ದಾಂಡಿಗ ತನ್ಮಯ್ ಅಗರ್ವಾಲ್ ಗೆ ನೀಡುವ ಮೂಲಕ ಎಲ್ಲರ ಮನಗೆದ್ದರು.

ಇದನ್ನೂ ಓದಿ: IPL 2026: ಐಪಿಎಲ್​ನಿಂದ ಸ್ಟಾರ್ ಆಟಗಾರ ಬ್ಯಾನ್..!

ಏಕೆಂದರೆ ಸುಲಭ ಗುರಿ ಬೆನ್ನತ್ತಿದ ಹೈದರಾಬಾದ್ ಪರ ತನ್ಮಯ್ ಅಗರ್ವಾಲ್ 40 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 7 ಫೋರ್ ಗಳೊಂದಿಗೆ 75 ರನ್ ಬಾರಿಸಿದ್ದರು. ತನ್ಮಯ್ ಅವರ ಈ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಬೇಕೆಂದು ಸಿರಾಜ್ ತನಗೆ ಸಿಕ್ಕ 50 ಸಾವಿರ ರೂ. ಬಹುಮಾನ ಮೊತ್ತವನ್ನು ಆರಂಭಿಕ ದಾಂಡಿಗನಿಗೆ ಹಸ್ತಾಂತರಿಸಿದರು. ಇದೀಗ ಮೊಹಮ್ಮದ್ ಸಿರಾಜ್ ಅವರ ಈ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ