AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ಮೊಹಮ್ಮದ್ ಸಿರಾಜ್ ರೋಚಕ ಕ್ಯಾಚ್ ಕಂಡು ದಂಗಾದ ಭಾರತೀಯ ಫೀಲ್ಡಿರ್​ಗಳು: ವಿಡಿಯೋ ನೋಡಿ

India vs South Africa, 2nd ODI: ಹರಿಣಗಳ ಪರ ಹೆನ್ರಿಚ್ ಕ್ಲಾಸೆನ್ ಕೂಡ ಅಪಾಯಕಾರಿ ಆಗಿ ಗೋಚರಿಸಿದರು. ಆದರೆ, ಇವರನ್ನು ಪೆವಿಲಿಯನ್​ಗೆ ಅಟ್ಟಿದ್ದು ಕುಲ್ದೀಪ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ (Mohammad Siraj).

Mohammed Siraj: ಮೊಹಮ್ಮದ್ ಸಿರಾಜ್ ರೋಚಕ ಕ್ಯಾಚ್ ಕಂಡು ದಂಗಾದ ಭಾರತೀಯ ಫೀಲ್ಡಿರ್​ಗಳು: ವಿಡಿಯೋ ನೋಡಿ
Mohammed Siraj catch
TV9 Web
| Edited By: |

Updated on: Oct 10, 2022 | 9:09 AM

Share

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿದ್ದ ಭಾರತದ (India vs South Africa) ಇದೀಗ ದ್ವಿತೀಯ ಪಂದ್ಯದಲ್ಲಿ ಗೆಲುವಿನ ಲಯಕ್ಕೆ ಮರಳಿದೆ. ಸವಾಲಿನ ಟಾರ್ಗೆಟ್ ಇದ್ದರೂ ಟೀಮ್ ಇಂಡಿಯಾ ಬ್ಯಾಟರ್​ಗಳು ಭರ್ಜರಿ ಪ್ರದರ್ಶನ ತೋರಿ 7 ವಿಕೆಟ್​ಗಳ ಜಯ ಸಾಧಿಸಿದರು. ಈ ಮೂಲಕ 1-1 ಅಂತರದಿಂದ ಸರಣಿ ಸಮಬಲ ಸಾಧಿಸಿದೆ. ಶ್ರೇಯಸ್ ಅಯ್ಯರ್ (Shreyas Iyer) ಆಕರ್ಷಕ ಶತಕ ಸಿಡಿಸಿ ಮಿಂಚಿದರೆ, ಇಶಾನ್ ಕಿಶನ್ 93 ರನ್​ಗಳ ಕೊಡುಗೆ ನೀಡಿದರು. ಆಫ್ರಿಕಾ ಪರ ಆ್ಯಡನ್ ಮರ್ಕ್ರಮ್ ಹಾಗೂ ರೀಜಾ ಹೆನ್ರಿಕ್ಸ್ ಅರ್ಧಶತಕ ಸಿಡಿಸಿದರು. ಹರಿಣಗಳ ಪರ ಹೆನ್ರಿಚ್ ಕ್ಲಾಸೆನ್ ಕೂಡ ಅಪಾಯಕಾರಿ ಆಗಿ ಗೋಚರಿಸಿದರು. ಆದರೆ, ಇವರನ್ನು ಪೆವಿಲಿಯನ್​ಗೆ ಅಟ್ಟಿದ್ದು ಕುಲ್ದೀಪ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ (Mohammed Siraj).

ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಬಂದ ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್​ಗೆ ಮುಂದಾದರು. ಹೀಗಾಗಿ ಇವರ ವಿಕೆಟ್ ಭಾರತಕ್ಕೆ ಮುಖ್ಯವಾಯಿತು. ಇದಕ್ಕಾಗಿ ಕುಲ್ದೀಪ್ ಯಾದವ್ 38ನೇ ಓವರ್​ನಲ್ಲಿ ಗೂಗ್ಲಿ ಎಸೆದರು. ಇದನ್ನು ಅರಿಯದ ಕ್ಲಾಸೆನ್ ಸಿಕ್ಸ್ ಸಿಡಿಸಲು ಮುಂದಾದರು. ಚೆಂಡು ಸರಿಯಾದ ಸಮಯಕ್ಕೆ ಬ್ಯಾಟ್​ಗೆ ತಾಗದ ಕಾರಣ ಸಾಕಷ್ಟು ಮೇಲೋಯಿತು. ಈ ಸಂದರ್ಭ ಫೀಲ್ಡ್​ನಲ್ಲಿದ್ದ ಮೊಹಮ್ಮದ್ ಸಿರಾಜ್ ಓಡಿ ಬಂದು ಕಷ್ಟಕರವಾದ ಕ್ಯಾಚ್ ಅನ್ನು ಡೈವ್ ಬಿದ್ದು ಹಿಡಿದರು. ಇವರ ರೋಚಕ ಕ್ಯಾಚ್ ಕಂಡು ಸ್ವತಃ ಭಾರತೀಯ ಇತರೆ ಆಟಗಾರರು ಒಂದು ಕ್ಷಣ ದಂಗಾದರು. 26 ಎಸೆತಗಳಲ್ಲಿ 2 ಫೋರ್, 2 ಸಿಕ್ಸರ್ ಸಿಡಿಸಿದ್ದ ಕ್ಲಾಸೆನ್ 30 ರನ್​ಗೆ ಪೆವಿಲಿಯನ್ ಸೇರಿಕೊಂಡರು.

ಇದನ್ನೂ ಓದಿ
Image
Shreyas Iyer: ರಾಂಚಿಯಲ್ಲಿ ಅಯ್ಯರ್ ಅಬ್ಬರ: ಕೊಹ್ಲಿ ಬಳಿಕ ವಿಶೇಷ ದಾಖಲೆ ಬರೆದ ಶ್ರೇಯಸ್
Image
IND vs SA: 15 ಫೋರ್, ಅಜೇಯ 113 ರನ್; ಏಕದಿನ ಕ್ರಿಕೆಟ್​ನಲ್ಲಿ 2ನೇ ಶತಕ ಸಿಡಿಸಿದ ಶ್ರೇಯಸ್​ ಅಯ್ಯರ್!
Image
IND vs SA: 4 ಬೌಂಡರಿ, 7 ಸಿಕ್ಸರ್.. 93 ರನ್..! ಆಫ್ರಿಕನ್ ಬೌಲರ್​ಗಳ ಚಳಿ ಬಿಡಿಸಿದ ಕಿಶನ್
Image
IND vs SA: ಶ್ರೇಯಸ್ ಶತಕ.. ಕಿಶನ್ ಸಿಡಿಲಬ್ಬರದ ಬ್ಯಾಟಿಂಗ್; 2ನೇ ಏಕದಿನ ಪಂದ್ಯ ಗೆದ್ದ ಟೀಂ ಇಂಡಿಯಾ

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ ತಂಡವು ನಿಗದಿತ 50 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿತು. ಆ್ಯಡನ್ ಮರ್ಕ್ರಮ್ ಹಾಗೂ ರೀಜಾ ಹೆನ್ರಿಕ್ಸ್ ಮೂರನೇ ವಿಕೆಟ್‌ಗೆ 129 ರನ್‌ಗಳ ಜೊತೆಯಾಟ ಆಡಿದರು. 76 ಎಸೆತಗಳನ್ನು ಎದುರಿಸಿದ ರೀಜಾ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರು. ಇನ್ನೊಂದೆಡೆ ಮರ್ಕ್ರಮ್ 89 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 79 ರನ್ ಚಚ್ಚಿದರು. ಭಾರತದ ಪರ ಮೊಹಮ್ಮದ್ ಸಿರಾಜ್ 3 ವಿಕೆಟ್ ಕಿತ್ತರು.

279 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 45.5 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ ಗುರಿ ತಲುಪುವ ಮೂಲಕ ಗೆಲುವಿನ ನಗೆ ಬೀರಿತು. ಶ್ರೇಯಸ್​ ಅಯ್ಯರ್ ಹಾಗೂ ಇಶಾನ್​ ಕಿಶನ್​ ಜೋಡಿ ಮೂರನೇ ವಿಕೆಟ್​ಗೆ 161 ರನ್​ ಜೊತೆಯಾಟವಾಡಿದರು. ಹರಿಣಗಳ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಇಬ್ಬರೂ ಬ್ಯಾಟರ್​ಗಳು ತಂಡಕ್ಕೆ ಆಸರೆಯಾಗಿ ನಿಂತರು. 84 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್​ ನೆರವಿನಿಂದ 93 ರನ್​ ಬಾರಿಸಿದ ಕಿಶನ್​ 7 ರನ್​ ಅಂತರದಲ್ಲಿ ಶತಕವನ್ನು ಮಿಸ್ ಮಾಡಿಕೊಂಡರು. ಇನ್ನೊಂದೆಡೆ ಅಜೇಯ ಆಟವಾಡಿದ ಶ್ರೇಯಸ್​ ಅಯ್ಯರ್ (113) ಭರ್ಜರಿ ಶತಕ ದಾಖಲಿಸಿ ಸಂಭ್ರಮಿಸಿದರು. ಜೊತೆಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ತಮ್ಮದಾಗಿಸಿದರು.

VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು