AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್

Mohammed Siraj: ಸಿರಾಜ್ ಅವರ ಈ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್
Mohammed Siraj
TV9 Web
| Edited By: |

Updated on:Sep 17, 2023 | 8:10 PM

Share

ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕರಾರುವಾಕ್ ದಾಳಿ ಮೂಲಕ ಮಿಂಚಿದ್ದರು. ಈ ಅದ್ಭುತ ಪ್ರದರ್ಶನಕ್ಕೆ ಲಭಿಸಿದ ಪ್ರಶಸ್ತಿ ಮೊತ್ತವನ್ನು ಇದೀಗ ಮೈದಾನದ ಸಿಬ್ಬಂದಿಗಳಿಗೆ ನೀಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.

ಆದರೆ ಟೀಮ್ ಇಂಡಿಯಾ ಬೌಲರ್​ಗಳ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲುವಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಪರದಾಡಿದರು. ಅದರಲ್ಲೂ ಮೊಹಮ್ಮದ್ ಸಿರಾಜ್ 4ನೇ ಓವರ್​ನಲ್ಲಿ 4 ವಿಕೆಟ್ ಕಬಳಿಸುವ ಲಂಕಾ ತಂಡಕ್ಕೆ ಆಘಾತ ನೀಡಿದರು.

ಇದರ ಬೆನ್ನಲ್ಲೇ ದಸುನ್ ಶಾನಕ ರನ್ನು ಕ್ಲೀನ್ ಬೌಲ್ಡ್ ಮಾಡಿದ ಸಿರಾಜ್ 5 ವಿಕೆಟ್​ಗಳ ಸಾಧನೆ ಮಾಡಿದರು. ಆ ಬಳಿಕ ಕುಸಾಲ್ ಮೆಂಡಿಸ್​ಗೂ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಕೇವಲ 7 ಓವರ್​ಗಳಲ್ಲಿ 21 ರನ್ ನೀಡಿ 6 ವಿಕೆಟ್ ಉರುಳಿಸಿದರು.

ಸಿರಾಜ್ ಅವರ ಈ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಸಿರಾಜ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ:

ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಸಿರಾಜ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಆದರೆ ತನಗೆ ಸಿಕ್ಕಿದ 5 ಸಾವಿರ ಡಾಲರ್ ಪ್ರಶಸ್ತಿ ಮೊತ್ತವನ್ನು ಸಿರಾಜ್ ಕೊಲಂಬೊದ ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದರು. ಏಕೆಂದರೆ ಏಷ್ಯಾಕಪ್​ನ ಸೂಪರ್-4 ಪಂದ್ಯಗಳ ವೇಳೆ

ಈ ಬಗ್ಗೆ ಮಾತನಾಡಿದ ಸಿರಾಜ್, ಮೈದಾನದ ಸಿಬ್ಬಂದಿಗಳು ಇರದಿದ್ದರೆ ಈ ಟೂರ್ನಿಯನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ನಗದು ಬಹುಮಾನ ಅವರಿಗೆ ಸಲ್ಲಬೇಕು. ಇದನ್ನು ನಾನು ಅವರಿಗೆ ನೀಡುತ್ತೇನೆ ಎಂದು ತಿಳಿಸಿದರು. ಇದೀಗ ಮೊಹಮ್ಮದ್ ಸಿರಾಜ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

50 ಸಾವಿರ ಡಾಲರ್ ನೀಡಿದ ಎಸಿಸಿ:

ಈ ಬಾರಿಯ ಏಷ್ಯಾಕಪ್​ ಸೂಪರ್-4 ಪಂದ್ಯಗಳು ಮಳೆಯ ಕಾರಣ ನಡೆಯುವುದು ಅನುಮಾನ ಎನ್ನಲಾಗಿತ್ತು. ಆದರೆ ಮೈದಾನ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ನಿಗದಿಯಂತೆ ನಡೆಸಲು ಸಾಧ್ಯವಾಗಿದೆ. ಈ ಪರಿಶ್ರಮಕ್ಕೆ ಫಲವಾಗಿ ಇದೀಗ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಮೈದಾನದ ಸಿಬ್ಬಂದಿಗಳಿಗೆ  ಮತ್ತು ಪಿಚ್ ಕ್ಯುರೇಟರ್‌ಗಳಿಗೆ 50000  ಯುಎಸ್​ ಡಾಲರ್​ ನಗದು ಬಹುಮಾನವನ್ನು ನೀಡಿದೆ.

Published On - 7:24 pm, Sun, 17 September 23

Follow Us
Web contact
Web contact

TV9 Kannada

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ