AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್

Mohammed Siraj: ಸಿರಾಜ್ ಅವರ ಈ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಬಹುಮಾನ ಮೊತ್ತವನ್ನು ಮೈದಾನದ ಸಿಬ್ಬಂದಿಗಳಿಗೆ ನೀಡಿದ ಸಿರಾಜ್
Mohammed Siraj
TV9 Web
| Edited By: |

Updated on:Sep 17, 2023 | 8:10 PM

Share

ಏಷ್ಯಾಕಪ್​ನ ಫೈನಲ್ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಕರಾರುವಾಕ್ ದಾಳಿ ಮೂಲಕ ಮಿಂಚಿದ್ದರು. ಈ ಅದ್ಭುತ ಪ್ರದರ್ಶನಕ್ಕೆ ಲಭಿಸಿದ ಪ್ರಶಸ್ತಿ ಮೊತ್ತವನ್ನು ಇದೀಗ ಮೈದಾನದ ಸಿಬ್ಬಂದಿಗಳಿಗೆ ನೀಡುವ ಮೂಲಕ ಎಲ್ಲರ ಮನಗೆದ್ದಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು.

ಆದರೆ ಟೀಮ್ ಇಂಡಿಯಾ ಬೌಲರ್​ಗಳ ಮಿಂಚಿನ ದಾಳಿ ಮುಂದೆ ಕ್ರೀಸ್ ಕಚ್ಚಿ ನಿಲ್ಲುವಲ್ಲಿ ಶ್ರೀಲಂಕಾ ಬ್ಯಾಟರ್​ಗಳು ಪರದಾಡಿದರು. ಅದರಲ್ಲೂ ಮೊಹಮ್ಮದ್ ಸಿರಾಜ್ 4ನೇ ಓವರ್​ನಲ್ಲಿ 4 ವಿಕೆಟ್ ಕಬಳಿಸುವ ಲಂಕಾ ತಂಡಕ್ಕೆ ಆಘಾತ ನೀಡಿದರು.

ಇದರ ಬೆನ್ನಲ್ಲೇ ದಸುನ್ ಶಾನಕ ರನ್ನು ಕ್ಲೀನ್ ಬೌಲ್ಡ್ ಮಾಡಿದ ಸಿರಾಜ್ 5 ವಿಕೆಟ್​ಗಳ ಸಾಧನೆ ಮಾಡಿದರು. ಆ ಬಳಿಕ ಕುಸಾಲ್ ಮೆಂಡಿಸ್​ಗೂ ಪೆವಿಲಿಯನ್ ಹಾದಿ ತೋರಿಸಿದರು. ಈ ಮೂಲಕ ಕೇವಲ 7 ಓವರ್​ಗಳಲ್ಲಿ 21 ರನ್ ನೀಡಿ 6 ವಿಕೆಟ್ ಉರುಳಿಸಿದರು.

ಸಿರಾಜ್ ಅವರ ಈ ಅದ್ಭುತ ಬೌಲಿಂಗ್ ಪ್ರದರ್ಶನದಿಂದಾಗಿ ಶ್ರೀಲಂಕಾ ತಂಡವು ಕೇವಲ 50 ರನ್​ಗಳಿಗೆ ಆಲೌಟ್ ಆಯಿತು. ಅಲ್ಲದೆ 51 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 6.1 ಓವರ್​ಗಳಲ್ಲಿ ಟಾರ್ಗೆಟ್ ತಲುಪುವ ಮೂಲಕ 10 ವಿಕೆಟ್​ಗಳ ಅಮೋಘ ಗೆಲುವು ದಾಖಲಿಸಿತು.

ಸಿರಾಜ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ:

ಈ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿದ ಸಿರಾಜ್ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು. ಆದರೆ ತನಗೆ ಸಿಕ್ಕಿದ 5 ಸಾವಿರ ಡಾಲರ್ ಪ್ರಶಸ್ತಿ ಮೊತ್ತವನ್ನು ಸಿರಾಜ್ ಕೊಲಂಬೊದ ಮೈದಾನದ ಸಿಬ್ಬಂದಿಗಳಿಗೆ ಅರ್ಪಿಸಿದರು. ಏಕೆಂದರೆ ಏಷ್ಯಾಕಪ್​ನ ಸೂಪರ್-4 ಪಂದ್ಯಗಳ ವೇಳೆ

ಈ ಬಗ್ಗೆ ಮಾತನಾಡಿದ ಸಿರಾಜ್, ಮೈದಾನದ ಸಿಬ್ಬಂದಿಗಳು ಇರದಿದ್ದರೆ ಈ ಟೂರ್ನಿಯನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಈ ನಗದು ಬಹುಮಾನ ಅವರಿಗೆ ಸಲ್ಲಬೇಕು. ಇದನ್ನು ನಾನು ಅವರಿಗೆ ನೀಡುತ್ತೇನೆ ಎಂದು ತಿಳಿಸಿದರು. ಇದೀಗ ಮೊಹಮ್ಮದ್ ಸಿರಾಜ್ ಅವರ ಮಾನವೀಯ ನಡೆಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

50 ಸಾವಿರ ಡಾಲರ್ ನೀಡಿದ ಎಸಿಸಿ:

ಈ ಬಾರಿಯ ಏಷ್ಯಾಕಪ್​ ಸೂಪರ್-4 ಪಂದ್ಯಗಳು ಮಳೆಯ ಕಾರಣ ನಡೆಯುವುದು ಅನುಮಾನ ಎನ್ನಲಾಗಿತ್ತು. ಆದರೆ ಮೈದಾನ ಸಿಬ್ಬಂದಿಗಳ ಸತತ ಪರಿಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ನಿಗದಿಯಂತೆ ನಡೆಸಲು ಸಾಧ್ಯವಾಗಿದೆ. ಈ ಪರಿಶ್ರಮಕ್ಕೆ ಫಲವಾಗಿ ಇದೀಗ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಮತ್ತು ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಮೈದಾನದ ಸಿಬ್ಬಂದಿಗಳಿಗೆ  ಮತ್ತು ಪಿಚ್ ಕ್ಯುರೇಟರ್‌ಗಳಿಗೆ 50000  ಯುಎಸ್​ ಡಾಲರ್​ ನಗದು ಬಹುಮಾನವನ್ನು ನೀಡಿದೆ.

Published On - 7:24 pm, Sun, 17 September 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ