AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಬೆಲೆಯ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

Mohammed Siraj: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಸದ್ಯ ಹೈದರಾಬಾದ್​ನಲ್ಲಿದ್ದಾರೆ. ಲಂಕಾ ವಿರುದ್ಧದ ಸರಣಿಯ ಬಳಿಕ ತವರಿಗೆ ಬಂದಿರುವ ಸಿರಾಜ್ ಮುಂದಿನ ತಿಂಗಳು ಬಾಂಗ್ಲಾದೇಶ್ ವಿರುದ್ದ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಕೋಟಿ ಬೆಲೆಯ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್
Mohammed Siraj
ಝಾಹಿರ್ ಯೂಸುಫ್
|

Updated on: Aug 12, 2024 | 8:32 AM

Share

ಶ್ರೀಲಂಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿ ಬಳಿಕ ಭಾರತಕ್ಕೆ ಹಿಂತಿರುಗಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಸಖತ್ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸುದ್ದಿಯಾಗಿರುವುದು ಆಟದಿಂದಲ್ಲ. ಬದಲಾಗಿ ಕೋಟಿ ಬೆಲೆಯ ಹೊಸ ಕಾರು ಖರೀದಿಸುವ ಮೂಲಕ ಎಂಬುದು ವಿಶೇಷ. ಹೌದು, ಮೊಹಮ್ಮದ್ ಸಿರಾಜ್ ತಮ್ಮ ಕುಟುಂಬಕ್ಕಾಗಿ ಅದ್ಭುತವಾದ ಐಷಾರಾಮಿ ಲ್ಯಾಂಡ್ ರೋವರ್ ಕಾರು ಖರೀದಿಸಿದ್ದಾರೆ. ಈ ಸಂತಸವನ್ನು ಟೀಮ್ ಇಂಡಿಯಾ ವೇಗಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಲ್ಯಾಂಡ್ ರೋವರ್‌ನೊಂದಿಗೆ ನಿಂತಿರುವ ಫೋಟೋವನ್ನು ಸಿರಾಜ್ ಸಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಈ ಫೋಟೋ ವೈರಲ್ ಆಗುತ್ತಿದ್ದು, ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಅವರ ಕಾರಿನ ಬೆಲೆ ಕೂಡ ಚರ್ಚೆಗೀಡಾಗಿದೆ.

ಸಿರಾಜ್ ಖರೀದಿಸಿದ ಕಾರಿನ ಬೆಲೆ ಎಷ್ಟು?

ಮೊಹಮ್ಮದ್ ಸಿರಾಜ್ ನೂತನವಾಗಿ ಖರೀದಿಸಿರುವ ಐಷರಾಮಿ ಕಾರಿನ ಬೆಲೆ ಸುಮಾರು 2.39 ಕೋಟಿ ರೂ. ಎಂದು ತಿಳಿದು ಬಂದಿದೆ. ತಮ್ಮ ಬಹುದಿನದ ಕನಸನ್ನು ಈಡೇರಿಸಿಕೊಂಡಿರುವ ಖುಷಿಯನ್ನು ಸಿರಾಜ್ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಅಂದಹಾಗೆ ಮೊಹಮ್ಮದ್ ಸಿರಾಜ್ ಐಪಿಎಲ್​ ಸೀಸನ್​ನಲ್ಲಿ 7 ಕೋಟಿ ರೂ. ಪಡೆಯುತ್ತಿದ್ದಾರೆ. ಆರ್​ಸಿಬಿ ಫ್ರಾಂಚೈಸಿಯು ಸಿರಾಜ್ ಅವರಿಗೆ ಏಳು ಕೋಟಿ ರೂ. ಸಂಭಾವನೆ ನೀಡುತ್ತಿದ್ದು, ಈ ಬಾರಿ ಕೂಡ ಅವರನ್ನು ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಸಿರಾಜ್ ವೃತ್ತಿ ಜೀವನ:

ಮೊಹಮ್ಮದ್ ಸಿರಾಜ್ 27 ಟೆಸ್ಟ್, 44 ಏಕದಿನ ಮತ್ತು 16 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಟೆಸ್ಟ್ ಪಂದ್ಯಗಳಲ್ಲಿ 29.69 ಸರಾಸರಿಯಲ್ಲಿ 74 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದಾರೆ. ಏಕದಿನ ಸ್ವರೂಪದಲ್ಲಿ 24.06 ರ ಸರಾಸರಿಯೊಂದಿಗೆ 71 ವಿಕೆಟ್ ಕಬಳಿಸಿದ್ದಾರೆ. ಇದಲ್ಲದೇ ಮೊಹಮ್ಮದ್ ಸಿರಾಜ್ ಟಿ20 ಪಂದ್ಯಗಳಲ್ಲಿ 32.29 ಸರಾಸರಿಯಲ್ಲಿ 14 ವಿಕೆಟ್ ಪಡೆದಿದ್ದಾರೆ.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ