AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಬೆಲೆಯ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್

Mohammed Siraj: ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಸದ್ಯ ಹೈದರಾಬಾದ್​ನಲ್ಲಿದ್ದಾರೆ. ಲಂಕಾ ವಿರುದ್ಧದ ಸರಣಿಯ ಬಳಿಕ ತವರಿಗೆ ಬಂದಿರುವ ಸಿರಾಜ್ ಮುಂದಿನ ತಿಂಗಳು ಬಾಂಗ್ಲಾದೇಶ್ ವಿರುದ್ದ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್ ಪಂದ್ಯಗಳನ್ನಾಡಲಿದೆ.

ಕೋಟಿ ಬೆಲೆಯ ಕಾರು ಖರೀದಿಸಿದ ಮೊಹಮ್ಮದ್ ಸಿರಾಜ್
Mohammed Siraj
ಝಾಹಿರ್ ಯೂಸುಫ್
|

Updated on: Aug 12, 2024 | 8:32 AM

Share

ಶ್ರೀಲಂಕಾ ವಿರುದ್ಧದ ಸೀಮಿತ ಓವರ್​ಗಳ ಸರಣಿ ಬಳಿಕ ಭಾರತಕ್ಕೆ ಹಿಂತಿರುಗಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಇದೀಗ ಸಖತ್ ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಸುದ್ದಿಯಾಗಿರುವುದು ಆಟದಿಂದಲ್ಲ. ಬದಲಾಗಿ ಕೋಟಿ ಬೆಲೆಯ ಹೊಸ ಕಾರು ಖರೀದಿಸುವ ಮೂಲಕ ಎಂಬುದು ವಿಶೇಷ. ಹೌದು, ಮೊಹಮ್ಮದ್ ಸಿರಾಜ್ ತಮ್ಮ ಕುಟುಂಬಕ್ಕಾಗಿ ಅದ್ಭುತವಾದ ಐಷಾರಾಮಿ ಲ್ಯಾಂಡ್ ರೋವರ್ ಕಾರು ಖರೀದಿಸಿದ್ದಾರೆ. ಈ ಸಂತಸವನ್ನು ಟೀಮ್ ಇಂಡಿಯಾ ವೇಗಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ಲ್ಯಾಂಡ್ ರೋವರ್‌ನೊಂದಿಗೆ ನಿಂತಿರುವ ಫೋಟೋವನ್ನು ಸಿರಾಜ್ ಸಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಇದೀಗ ಈ ಫೋಟೋ ವೈರಲ್ ಆಗುತ್ತಿದ್ದು, ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಅವರ ಕಾರಿನ ಬೆಲೆ ಕೂಡ ಚರ್ಚೆಗೀಡಾಗಿದೆ.

ಸಿರಾಜ್ ಖರೀದಿಸಿದ ಕಾರಿನ ಬೆಲೆ ಎಷ್ಟು?

ಮೊಹಮ್ಮದ್ ಸಿರಾಜ್ ನೂತನವಾಗಿ ಖರೀದಿಸಿರುವ ಐಷರಾಮಿ ಕಾರಿನ ಬೆಲೆ ಸುಮಾರು 2.39 ಕೋಟಿ ರೂ. ಎಂದು ತಿಳಿದು ಬಂದಿದೆ. ತಮ್ಮ ಬಹುದಿನದ ಕನಸನ್ನು ಈಡೇರಿಸಿಕೊಂಡಿರುವ ಖುಷಿಯನ್ನು ಸಿರಾಜ್ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಅಂದಹಾಗೆ ಮೊಹಮ್ಮದ್ ಸಿರಾಜ್ ಐಪಿಎಲ್​ ಸೀಸನ್​ನಲ್ಲಿ 7 ಕೋಟಿ ರೂ. ಪಡೆಯುತ್ತಿದ್ದಾರೆ. ಆರ್​ಸಿಬಿ ಫ್ರಾಂಚೈಸಿಯು ಸಿರಾಜ್ ಅವರಿಗೆ ಏಳು ಕೋಟಿ ರೂ. ಸಂಭಾವನೆ ನೀಡುತ್ತಿದ್ದು, ಈ ಬಾರಿ ಕೂಡ ಅವರನ್ನು ಬೃಹತ್ ಮೊತ್ತ ನೀಡಿ ತಂಡದಲ್ಲೇ ಉಳಿಸಿಕೊಳ್ಳುವ ನಿರೀಕ್ಷೆಯಿದೆ.

ಸಿರಾಜ್ ವೃತ್ತಿ ಜೀವನ:

ಮೊಹಮ್ಮದ್ ಸಿರಾಜ್ 27 ಟೆಸ್ಟ್, 44 ಏಕದಿನ ಮತ್ತು 16 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ. ಈ ವೇಳೆ ಟೆಸ್ಟ್ ಪಂದ್ಯಗಳಲ್ಲಿ 29.69 ಸರಾಸರಿಯಲ್ಲಿ 74 ಬ್ಯಾಟ್ಸ್‌ಮನ್‌ಗಳನ್ನು ಔಟ್ ಮಾಡಿದ್ದಾರೆ. ಏಕದಿನ ಸ್ವರೂಪದಲ್ಲಿ 24.06 ರ ಸರಾಸರಿಯೊಂದಿಗೆ 71 ವಿಕೆಟ್ ಕಬಳಿಸಿದ್ದಾರೆ. ಇದಲ್ಲದೇ ಮೊಹಮ್ಮದ್ ಸಿರಾಜ್ ಟಿ20 ಪಂದ್ಯಗಳಲ್ಲಿ 32.29 ಸರಾಸರಿಯಲ್ಲಿ 14 ವಿಕೆಟ್ ಪಡೆದಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್