AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸಿರಾಜ್ ಭುಜಬಲದ ಪರಾಕ್ರಮಕ್ಕೆ ಐಸಿಸಿಯಿಂದ ಬಿತ್ತು ದಂಡದ ಬರೆ

Mohammed Siraj Fined by ICC: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ, ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದ ನಂತರ ಆಕ್ರಮಣಕಾರಿಯಾಗಿ ಆಚರಿಸಿದ್ದಕ್ಕಾಗಿ ಐಸಿಸಿ ದಂಡ ವಿಧಿಸಿದೆ. ಬೆನ್ ಡಕೆಟ್ ಅವರ ಭುಜಕ್ಕೆ ತನ್ನ ಭುಜವನ್ನು ತಾಗಿಸಿದ್ದಕ್ಕಾಗಿ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಇದು ಕಳೆದ 24 ತಿಂಗಳಲ್ಲಿ ಸಿರಾಜ್‌ನ ಎರಡನೇ ಅಪರಾಧವಾಗಿದ್ದು, ಮುಂದಿನ ತಪ್ಪು ಪಂದ್ಯ ನಿಷೇಧಕ್ಕೆ ಕಾರಣವಾಗಬಹುದು.

IND vs ENG: ಸಿರಾಜ್ ಭುಜಬಲದ ಪರಾಕ್ರಮಕ್ಕೆ ಐಸಿಸಿಯಿಂದ ಬಿತ್ತು ದಂಡದ ಬರೆ
Mohammed Siraj
ಪೃಥ್ವಿಶಂಕರ
|

Updated on:Jul 14, 2025 | 4:20 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ರೋಚಕಘಟ್ಟದತ್ತ ಸಾಗಿದೆ. ಲಾರ್ಡ್ಸ್‌ ಮೈದಾನದಲ್ಲಿ (Lords Test) ಗೆಲುವಿಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬರುತ್ತಿದೆ. ಈ ನಡುವೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ (Mohammed Siraj) ಐಸಿಸಿ ದಂಡದ ಬರೆ ಎಳೆದಿದೆ. ವಾಸ್ತವವಾಗಿ ಈ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಬೌಲಿಂಗ್ ಮಾಡುವ ವೇಳೆ ಮೊಹಮ್ಮದ್ ಸಿರಾಜ್, ಐಸಿಸಿ (ICC) ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇಂಗ್ಲೆಂಡ್‌ ಆರಂಭಿಕ ಆಟಗಾರ ಬೆನ್ ಡಕೆಟ್ ವಿಕೆಟ್ ಉರಳಿಸಿದ್ದ ಸಿರಾಜ್, ಅವರ ಬಳಿ ಹೋಗಿ ಆಕ್ರಮಣಕಾರಿಯಾಗಿ ಸಂಭ್ರಮಾಚರಿಸಿದಲ್ಲದೆ, ಈ ವೇಳೆ ಅವರ ಭುಜಕ್ಕೆ ತಮ್ಮ ಭುಜ ತಾಗಿಸಿದ್ದರು. ಹೀಗಾಗಿ ಸಿರಾಜ್ ಐಸಿಸಿ ನೀತಿ ಸಂಹಿತೆಯ ಸೆಕ್ಷನ್ 2.5 ರ ಅಡಿಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಲಾಗಿದ್ದು, ದಂಡ ವಿಧಿಸಲಾಗಿದೆ.

ಭುಜಬಲದ ಪರಾಕ್ರಮ

ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್ ಡಕೆಟ್ ರೂಪದಲ್ಲಿ ಸಿರಾಜ್ ತಮ್ಮ ಮೊದಲ ವಿಕೆಟ್ ಉರುಳಿಸಿದರು. ನಾಲ್ಕನೇ ದಿನದ ಮೊದಲ ಸೆಷನ್​ನಲ್ಲಿ ಸಿರಾಜ್ ಈ ವಿಕೆಟ್ ಪಡೆದರು. ಡಕೆಟ್ ಅವರನ್ನು ಔಟ್ ಮಾಡಿದ ನಂತರ, ಸಿರಾಜ್ ವಿಕೆಟ್ ಪಡೆದ ಸಂಭ್ರಮದಲ್ಲಿ ಸ್ವಲ್ಪ ಆಕ್ರಮಣಕಾರಿಯಾದರು. ಈ ವೇಳೆ ಸಿರಾಜ್, ಬೆನ್ ಡಕೆಟ್‌ ಅವರ ಭುಜಕ್ಕೂ ತಮ್ಮ ಭುಜ ತಾಗಿಸಿದ್ದರು.

ಈ ತಪ್ಪಿಗೆ ಸಿರಾಜ್‌ಗೆ ದಂಡ ವಿಧಿಸಲಾಗಿದ್ದು, ಅವರ ಖಾತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ಸೇರಿದೆ. ಈ ಮೂಲಕ ಸಿರಾಜ್​ ಇದುವರೆಗೆ ಒಟ್ಟು 2 ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದಿದ್ದಾರೆ. ಕಳೆದ 24 ತಿಂಗಳಲ್ಲಿ ಇದು ಸಿರಾಜ್ ಮಾಡಿದ ಎರಡನೇ ತಪ್ಪಾಗಿದ್ದು, ಸಿರಾಜ್​ಗೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗುವ ಭೀತಿ ಎದುರಾಗಿದೆ.

ಐಸಿಸಿಯಿಂದ ಮಾಹಿತಿ

4 ವಿಕೆಟ್ ಕಬಳಿಸಿದ ಸಿರಾಜ್

ಲಾರ್ಡ್ಸ್ ಟೆಸ್ಟ್​ನಲ್ಲಿ ಸಿರಾಜ್ 116 ರನ್​ಗಳಿಗೆ 4 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಮೊದಲ ಇನ್ನಿಂಗ್ಸ್​ನಲ್ಲಿ 85 ರನ್ ಗಳಿಗೆ 2 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲಿ 31 ರನ್​ಗಳಿಗೆ ಉಳಿದ 2 ವಿಕೆಟ್​ಗಳನ್ನು ಕಬಳಿಸಿದ್ದರು. ಲಾರ್ಡ್ಸ್ ಟೆಸ್ಟ್​ಗೆ ಸಂಬಂಧಿಸಿದಂತೆ ಹೇಳುವುದಾದರೆ, ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂದು ಹೇಳುವುದು ಕಷ್ಟಕರವಾಗಿದೆ. ಟೀಂ ಇಂಡಿಯಾ ಈಗಾಗಲೇ ತನ್ನ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿದ್ದು. ಸೋಲಿನ ಭೀತಿಯಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Mon, 14 July 25

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌