AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸಿರಾಜ್ ಭುಜಬಲದ ಪರಾಕ್ರಮಕ್ಕೆ ಐಸಿಸಿಯಿಂದ ಬಿತ್ತು ದಂಡದ ಬರೆ

Mohammed Siraj Fined by ICC: ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ, ಮೊಹಮ್ಮದ್ ಸಿರಾಜ್ ವಿಕೆಟ್ ಪಡೆದ ನಂತರ ಆಕ್ರಮಣಕಾರಿಯಾಗಿ ಆಚರಿಸಿದ್ದಕ್ಕಾಗಿ ಐಸಿಸಿ ದಂಡ ವಿಧಿಸಿದೆ. ಬೆನ್ ಡಕೆಟ್ ಅವರ ಭುಜಕ್ಕೆ ತನ್ನ ಭುಜವನ್ನು ತಾಗಿಸಿದ್ದಕ್ಕಾಗಿ ಅವರಿಗೆ ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಇದು ಕಳೆದ 24 ತಿಂಗಳಲ್ಲಿ ಸಿರಾಜ್‌ನ ಎರಡನೇ ಅಪರಾಧವಾಗಿದ್ದು, ಮುಂದಿನ ತಪ್ಪು ಪಂದ್ಯ ನಿಷೇಧಕ್ಕೆ ಕಾರಣವಾಗಬಹುದು.

IND vs ENG: ಸಿರಾಜ್ ಭುಜಬಲದ ಪರಾಕ್ರಮಕ್ಕೆ ಐಸಿಸಿಯಿಂದ ಬಿತ್ತು ದಂಡದ ಬರೆ
Mohammed Siraj
ಪೃಥ್ವಿಶಂಕರ
|

Updated on:Jul 14, 2025 | 4:20 PM

Share

ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ರೋಚಕಘಟ್ಟದತ್ತ ಸಾಗಿದೆ. ಲಾರ್ಡ್ಸ್‌ ಮೈದಾನದಲ್ಲಿ (Lords Test) ಗೆಲುವಿಗಾಗಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಹೋರಾಟ ಕಂಡುಬರುತ್ತಿದೆ. ಈ ನಡುವೆ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್​ಗೆ (Mohammed Siraj) ಐಸಿಸಿ ದಂಡದ ಬರೆ ಎಳೆದಿದೆ. ವಾಸ್ತವವಾಗಿ ಈ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಬೌಲಿಂಗ್ ಮಾಡುವ ವೇಳೆ ಮೊಹಮ್ಮದ್ ಸಿರಾಜ್, ಐಸಿಸಿ (ICC) ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದರು. ಇಂಗ್ಲೆಂಡ್‌ ಆರಂಭಿಕ ಆಟಗಾರ ಬೆನ್ ಡಕೆಟ್ ವಿಕೆಟ್ ಉರಳಿಸಿದ್ದ ಸಿರಾಜ್, ಅವರ ಬಳಿ ಹೋಗಿ ಆಕ್ರಮಣಕಾರಿಯಾಗಿ ಸಂಭ್ರಮಾಚರಿಸಿದಲ್ಲದೆ, ಈ ವೇಳೆ ಅವರ ಭುಜಕ್ಕೆ ತಮ್ಮ ಭುಜ ತಾಗಿಸಿದ್ದರು. ಹೀಗಾಗಿ ಸಿರಾಜ್ ಐಸಿಸಿ ನೀತಿ ಸಂಹಿತೆಯ ಸೆಕ್ಷನ್ 2.5 ರ ಅಡಿಯಲ್ಲಿ ತಪ್ಪಿತಸ್ಥರೆಂದು ಪರಿಗಣಿಸಲಾಗಿದ್ದು, ದಂಡ ವಿಧಿಸಲಾಗಿದೆ.

ಭುಜಬಲದ ಪರಾಕ್ರಮ

ಇಂಗ್ಲೆಂಡ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಬೆನ್ ಡಕೆಟ್ ರೂಪದಲ್ಲಿ ಸಿರಾಜ್ ತಮ್ಮ ಮೊದಲ ವಿಕೆಟ್ ಉರುಳಿಸಿದರು. ನಾಲ್ಕನೇ ದಿನದ ಮೊದಲ ಸೆಷನ್​ನಲ್ಲಿ ಸಿರಾಜ್ ಈ ವಿಕೆಟ್ ಪಡೆದರು. ಡಕೆಟ್ ಅವರನ್ನು ಔಟ್ ಮಾಡಿದ ನಂತರ, ಸಿರಾಜ್ ವಿಕೆಟ್ ಪಡೆದ ಸಂಭ್ರಮದಲ್ಲಿ ಸ್ವಲ್ಪ ಆಕ್ರಮಣಕಾರಿಯಾದರು. ಈ ವೇಳೆ ಸಿರಾಜ್, ಬೆನ್ ಡಕೆಟ್‌ ಅವರ ಭುಜಕ್ಕೂ ತಮ್ಮ ಭುಜ ತಾಗಿಸಿದ್ದರು.

ಈ ತಪ್ಪಿಗೆ ಸಿರಾಜ್‌ಗೆ ದಂಡ ವಿಧಿಸಲಾಗಿದ್ದು, ಅವರ ಖಾತೆಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ಸೇರಿದೆ. ಈ ಮೂಲಕ ಸಿರಾಜ್​ ಇದುವರೆಗೆ ಒಟ್ಟು 2 ಡಿಮೆರಿಟ್ ಪಾಯಿಂಟ್‌ಗಳನ್ನು ಪಡೆದಿದ್ದಾರೆ. ಕಳೆದ 24 ತಿಂಗಳಲ್ಲಿ ಇದು ಸಿರಾಜ್ ಮಾಡಿದ ಎರಡನೇ ತಪ್ಪಾಗಿದ್ದು, ಸಿರಾಜ್​ಗೆ ಒಂದು ಪಂದ್ಯದಿಂದ ನಿಷೇಧಕ್ಕೊಳಗಾಗುವ ಭೀತಿ ಎದುರಾಗಿದೆ.

ಐಸಿಸಿಯಿಂದ ಮಾಹಿತಿ

4 ವಿಕೆಟ್ ಕಬಳಿಸಿದ ಸಿರಾಜ್

ಲಾರ್ಡ್ಸ್ ಟೆಸ್ಟ್​ನಲ್ಲಿ ಸಿರಾಜ್ 116 ರನ್​ಗಳಿಗೆ 4 ವಿಕೆಟ್ ಕಬಳಿಸಿದ್ದಾರೆ. ಇದರಲ್ಲಿ ಮೊದಲ ಇನ್ನಿಂಗ್ಸ್​ನಲ್ಲಿ 85 ರನ್ ಗಳಿಗೆ 2 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್​ನಲ್ಲಿ 31 ರನ್​ಗಳಿಗೆ ಉಳಿದ 2 ವಿಕೆಟ್​ಗಳನ್ನು ಕಬಳಿಸಿದ್ದರು. ಲಾರ್ಡ್ಸ್ ಟೆಸ್ಟ್​ಗೆ ಸಂಬಂಧಿಸಿದಂತೆ ಹೇಳುವುದಾದರೆ, ವಿಜಯಲಕ್ಷ್ಮೀ ಯಾರಿಗೆ ಒಲಿಯುತ್ತಾಳೆ ಎಂದು ಹೇಳುವುದು ಕಷ್ಟಕರವಾಗಿದೆ. ಟೀಂ ಇಂಡಿಯಾ ಈಗಾಗಲೇ ತನ್ನ ಪ್ರಮುಖ 6 ವಿಕೆಟ್‌ಗಳನ್ನು ಕಳೆದುಕೊಂಡಿದ್ದು. ಸೋಲಿನ ಭೀತಿಯಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Mon, 14 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ