AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ರಾಂತಿಯ ಇಲ್ಲಾ ಗೇಟ್ ಪಾಸಾ? ದೇಶೀಯ ಅಂಗಳದಲ್ಲಿ ಸಿರಾಜ್..!

Mohammed Siraj: ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾ ಪರ ಈವರೆಗೆ 46 ಏಕದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ ಅವರು 73 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಇದಾಗ್ಯೂ ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಸಿರಾಜ್ ಅವರನ್ನು ಆಯ್ಕೆ ಮಾಡಿರಲಿಲ್ಲ.  

ವಿಶ್ರಾಂತಿಯ ಇಲ್ಲಾ ಗೇಟ್ ಪಾಸಾ? ದೇಶೀಯ ಅಂಗಳದಲ್ಲಿ ಸಿರಾಜ್..!
Mohammed Siraj
ಝಾಹಿರ್ ಯೂಸುಫ್
|

Updated on: Dec 03, 2025 | 10:54 AM

Share

ಸೌತ್ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಆಯ್ಕೆ ಮಾಡಲಾದ 15 ಸದಸ್ಯರುಗಳ ಭಾರತ ತಂಡದಲ್ಲಿ ಮೊಹಮ್ಮದ್ ಸಿರಾಜ್ ಹೆಸರು ಕಾಣಿಸಿಕೊಂಡಿರಲಿಲ್ಲ. ವಿಶ್ರಾಂತಿಯ ಕಾರಣ ಸಿರಾಜ್ ಅವರನ್ನು ಏಕದಿನ ತಂಡದಿಂದ ಹೊರಗಿಡಲಾಗಿದೆ ಎನ್ನಲಾಗಿತ್ತು. ಆದರೀಗ ಅದೇ ಮೊಹಮ್ಮದ್ ಸಿರಾಜ್ ದೇಶೀಯ ಟೂರ್ನಿ ಆಡುತ್ತಿದ್ದಾರೆ. ಇದರ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಸಿರಾಜ್​ಗೆ ಗೇಟ್ ಪಾಸ್ ನೀಡಲಾಗಿದೆಯಾ? ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಟೀಮ್ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಹಿರಿಯ ಆಟಗಾರರಿಗೆ ಭಿನ್ನಾಭಿಪ್ರಾಯಗಳಿವೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಇದರ ನಡುವೆ ಮೊಹಮ್ಮದ್ ಸಿರಾಜ್ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಕಾಣಿಸಿಕೊಂಡಿದ್ದಾರೆ.

ಇದರ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಅವರನ್ನು ಬೇಕಂತಲೇ ತಂಡದಿಂದ ಹೊರಗಿಡಲಾಗಿದೆಯಾ? ಎಂಬ ಅನುಮಾನಗಳು ಹುಟ್ಟಿಕೊಂಡಿದೆ. ಏಕೆಂದರೆ ವಿಶ್ರಾಂತಿ ನೀಡಿದ್ದರೆ ಸಿರಾಜ್ ದೇಶೀಯ ಟಿ20 ಟೂರ್ನಿ ಆಡುವ ಅಗತ್ಯವಿರಲಿಲ್ಲ. ಅಲ್ಲದೆ ಸಿರಾಜ್ ಅವರನ್ನು ಕಳೆದ ಕೆಲ ತಿಂಗಳಿಂದ ಭಾರತ ಟಿ20 ತಂಡದ ಆಯ್ಕೆಗೆ ಪರಿಗಣಿಸಲಾಗುತ್ತಿಲ್ಲ.

ಇದಾಗ್ಯೂ ಏಕದಿನ ಸರಣಿ ವೇಳೆ ಸಿರಾಜ್ ಟಿ20 ಪಂದ್ಯವಾಡುತ್ತಿರುವುದು ಏಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಸಿರಾಜ್ ಅವರನ್ನು ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದ ಕೈ ಬಿಟ್ಟಿರುವುದರಿಂದಲೇ ಅವರು ದೇಶೀಯ ಟೂರ್ನಿ ಆಡುತ್ತಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ.

ಇತ್ತ ಮೊಹಮ್ಮದ್ ಸಿರಾಜ್ ಅವರನ್ನು ಹೊರಗಿಟ್ಟು ಸೌತ್ ಆಫ್ರಿಕಾ ಸರಣಿಗೆ ಆಯ್ಕೆ ಮಾಡಿರುವುದು ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ ಅವರನ್ನು ಇಲ್ಲಿ ಉಲ್ಲೇಖಾರ್ಹ.

ಒಟ್ಟಿನಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಪ್ರಶ್ನೆಗಳೆದ್ದಿವೆ. ಇದರ ನಡುವೆ ಮೊಹಮ್ಮದ್ ಸಿರಾಜ್ ಅವರನ್ನು ಏಕದಿನ ಸರಣಿಯಿಂದ ಕೈ ಬಿಡಲಾಗಿರುವುದು ಕೂಡ ಬಹಿರಂಗವಾಗಿದೆ. ಹೀಗಾಗಿಯೇ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಸಿರಾಜ್ ಮಿಂಚಿನ ದಾಳಿ:

ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಹೈದರಾಬಾದ್ ಪರ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಮಿಂಚಿನ ದಾಳಿ ಮೂಲಕ ಗಮನ ಸೆಳೆದಿದ್ದಾರೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಉತ್ತರ ಪ್ರದೇಶ್ ತಂಡವು 19.2 ಓವರ್​ಗಳಲ್ಲಿ 127 ರನ್​ಗಳಿಸಿ ಆಲೌಟ್ ಆಗಿತ್ತು.

ಹೈದರಾಬಾದ್ ಪರ ಕರಾರುವಾಕ್ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 4 ಓವರ್​ಗಳಲ್ಲಿ ನೀಡಿದ್ದು ಕೇವಲ 16 ರನ್​ಗಳು ಮಾತ್ರ. ಅಲ್ಲದೆ ಒಂದು ವಿಕೆಟ್ ಕೂಡ ಕಬಳಿಸಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ರಿಎಂಟ್ರಿ

ಇನ್ನು ಉತ್ತರ ಪ್ರದೇಶ್ ನೀಡಿದ 128 ರನ್​ಗಳ ಗುರಿಯನ್ನು ಹೈದರಾಬಾದ್ ತಂಡವು 17.1 ಓವರ್​ಗಳಲ್ಲಿ ಚೇಸ್ ಮಾಡಿ 3 ವಿಕೆಟ್​ಗಳ ಜಯ ಸಾಧಿಸಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ