AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mohammed Siraj: ವಿಕೆಟ್ ಕಿತ್ತಾಗ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ: ಇದರ ಹಿಂದಿದೆ ಖಡಕ್ ಕಾರಣ

India vs England: ಮೂರನೇ ದಿನದಾಟ ಮುಗಿದ ಬಳಿಕ ಹೊಸ ಸಂಭ್ರಮಾಚರಣೆ ಬಗ್ಗೆ ಮಾತನಾಡಿದ ಮೊಹಮ್ಮದ್ ಸಿರಾಜ್, ನನ್ನ ಈ ಶೈಲಿಯ ಸಂಭ್ರಮಾಚರಣೆ ಹೇಟರ್ಸ್​ಗಳಿಗಾಗಿ ಎಂದಿದ್ದಾರೆ.

Mohammed Siraj: ವಿಕೆಟ್ ಕಿತ್ತಾಗ ತುಟಿಗಳ ಮೇಲೆ ಬೆರಳಿಟ್ಟು ಸಂಭ್ರಮಾಚರಣೆ: ಇದರ ಹಿಂದಿದೆ ಖಡಕ್ ಕಾರಣ
Mohammed Siraj
TV9 Web
| Updated By: Vinay Bhat|

Updated on: Aug 15, 2021 | 11:11 AM

Share

ಆಂಗ್ಲರ ನಾಡಿನಲ್ಲಿ ಸಾಗುತ್ತಿರುವ ಇಂಗ್ಲೆಂಡ್ (England) ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ (Team India) ಯುವ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ಭರವಸೆ ಮೂಡಿಸಿದ್ದಾರೆ. ತನ್ನ ಆಕ್ರಮಣಕಾರಿ ಬೌಲಿಂಗ್​ನಿಂದ ಎದುರಾಳಿಗೆ ಅಪಾಯಕಾರಿಯಾಗಿ ಗೋಚರಿಸಿರುವ ಸಿರಾಜ್ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​​ನಲ್ಲಿ ಪ್ರಮುಖ ವಿಕೆಟ್ ಕಿತ್ತು ಮಿಂಚಿದರು. ಈ ಸಂದರ್ಭ ಅವರ ಸಂಭ್ರಮಾಚರಣೆ ವಿಭಿನ್ನವಾಗಿತ್ತು. ತುಟಿಗಳ ಮೇಲೆ ಬೆರಳಿಟ್ಟಿ ಸಿರಾಜ್ ವಿಕೆಟ್ ಪಡೆದ ಸಂಭ್ರಮವನ್ನು ಆನಂದಿಸುತ್ತಿದ್ದರು. ಈರೀತಿಯ ಸಂಭ್ರಮಾಚರಣೆಗೆ ಕಾರಣವೇನು ಎಂಬುದನ್ನು ಅವರೀಗ ಬಹಿರಂಗ ಪಡಿಸಿದ್ದಾರೆ.

ಟೆಸ್ಟ್​ ಕ್ರಿಕೆಟ್​ಗೆ ಕಾಲಿಟ್ಟು 7 ಪಂದ್ಯಗಳನ್ನು ಆಡಿರುವ ಸಿರಾಜ್ ಅದಾಗಲೇ 23 ವಿಕೆಟ್ ಕಿತ್ತು ತನ್ನ ಸಾಮರ್ಥ್ಯವನ್ನು ತೋರಿಸಿಕೊಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನ ಮೊದಲ ಇನ್ನಿಂಗ್ಸ್​ನಲ್ಲಿ ಆಂಗ್ಲರ ಪ್ರಮುಖ 4 ವಿಕೆಟ್ ಕಿತ್ತು ಮಿಂಚಿದ್ದಾರೆ. ಈ ಸಂದರ್ಭ ಅವರು ತುಟಿಗೆ ಬೆರಳಿಟ್ಟು ವಿಶೇಷವಾಗಿ ಸಂಭ್ರಮಿಸಿದರು. ಈ ಬಗ್ಗೆ ಮಾತನಾಡಿರುವ ಅವರು, ನನ್ನ ಈ ಶೈಲಿಯ ಸಂಭ್ರಮಾಚರಣೆ ಹೇಟರ್ಸ್​ಗಳಿಗಾಗಿ ಎಂದಿದ್ದಾರೆ.

ಮೂರನೇ ದಿನದಾಟ ಮುಗಿದ ಬಳಿಕ ಹೊಸ ಸಂಭ್ರಮಾಚರಣೆ ಬಗ್ಗೆ ಮಾತನಾಡಿದ ಸಿರಾಜ್, “ಈ ಹೊಸ ರೀತಿಯ ಸಂಭ್ರಮಾಚರಣೆ ಹೇಟರ್ಸ್​ಗಳಿಗಾಗಿ. ಯಾಕಂದ್ರೆ ಅವರು ನನ್ನ ಬಗ್ಗೆ ಹಿಂದಿನಿಂದ ಸಾಕಷ್ಟು ಮಾತುಗಳನ್ನಾಡಿದ್ದಾರೆ. ಅವರು ನನಗೆ ಮಾಡಿದಂತೆ ನಾನು ಮಾಡುವುದಿಲ್ಲ, ಬದಲಾಗಿ ನನ್ನ ಆಟದ ಮೂಲಕ ಅಂತವರಿಗೆ ತಕ್ಕ ಉತ್ತರ ಕೊಡುತ್ತೇನೆ” ಎಂದು ಹೇಳಿದ್ದಾರೆ.

ಕ್ರಿಕೆಟ್ ಕಾಶಿ ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ರೋಚಕ ಘಟ್ಟಕ್ಕೆ ತಲುಪಿದೆ. ಆಂಗ್ಲರು ಎರಡನೇ ಇನ್ನಿಂಗ್ಸ್​ನಲ್ಲಿ ಜೋ ರೂಟ್ (Joe Root) ಅವರ ಅಜೇಯ 180 ರನ್​ಗಳ ನೆರವಿನಿಂದ 391 ರನ್ ಗಳಿಸಿದ್ದು 27 ರನ್​ಗಳ ಅಲ್ಪ ಮುನ್ನಡೆ ಸಾಧಿಸಿದೆ. ಇಂದು ನಾಲ್ಕನೇ ದಿನ ಭಾರತ ತನ್ನ ಎರಡನೇ ಇನ್ನಿಂಗ್ಸ್ ಆರಂಭಿಸಲಿದೆ. ಹೀಗಾಗಿ ಉಭಯ ತಂಡಗಳಿಗೆ ಇಂದು ಮಹತ್ವದ ದಿನವಾಗಿದೆ.

ಭಾರತ ಇಂದು ತನ್ನ ಎರಡನೇ ಇನ್ನಿಂಗ್ಸ್​ ಆರಂಭಿಸಬೇಕಿದೆ. ಗೆಲುವಿಗಾಗಿ ಎಚ್ಚರಿಕೆಯಿಂದ ಬ್ಯಾಟ್ ಬೀಸಬೇಕಿದೆ. ಪ್ರಮುಖವಾಗಿ ಓಪನರ್​ಗಳಾದ ರೋಹಿತ್ ಶರ್ಮಾ ಹಾಗೂ ಕೆ. ಎಲ್ ರಾಹುಲ್ ತಂಡಕ್ಕೆ ಆಸರೆಯಾಗಬೇಕಿದೆ. ಯಾಕಂದ್ರೆ ಭಾರತದ ಮಧ್ಯಮ ಕ್ರಮಾಂಕ ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ ಮತ್ತು ಚೇತೇಶ್ವರ್ ಪೂಜಾರ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದಾರೆ. ಹೀಗಾಗಿ ಓಪನರ್​ಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ.

ನಾಲ್ಕನೇ ದಿನ ಪಿಚ್ ಕೂಡ ಉತ್ತಮವಾಗಿ ವರ್ತಿಸುತ್ತದೆ. ಹವಾಮಾನ ಕೂಡ ಸ್ಥಿರವಾಗಿದ್ದು ವರುಣನ ಕಾಟ ಇಲ್ಲವೆಂದು ಹೇಳಲಾಗಿದೆ. ಹೀಗಾಗಿ ಭಾರತ ಎರಡನೇ ಇನ್ನಿಂಗ್ಸ್​ನಲ್ಲಿ ಬೇಗನೇ ಆಲೌಟ್ ಆಗುವ ಸಾಧ್ಯತೆ ಕಡಿಮೆ. ಆದ್ದರಿಂದ ಉಳಿದಿರುವ ಎರಡು ದಿನ ಟೀಮ್ ಇಂಡಿಯಾಕ್ಕೆ ಮುಖ್ಯವಾಗಿದ್ದು, ಮಾಸ್ಟರ್ ಪ್ಲಾನ್​ನೊಂದಿಗೆ ಕಣಕ್ಕಿಳಿಯಬೇಕಿದೆ.

India vs England: ರೋಚಕ ಘಟ್ಟದತ್ತ ಭಾರತ-ಇಂಗ್ಲೆಂಡ್ 2ನೇ ಟೆಸ್ಟ್: ತಿರುಗಿನಿಲ್ಲುತ್ತಾ ಕೊಹ್ಲಿ ಪಡೆ?

IPL 2021: ಐಪಿಎಲ್ ಆರಂಭಕ್ಕೆ ಒಂದು ತಿಂಗಳಿರುವಾಗ ಅಭಿಮಾನಿಗಳಿಗೆ ಸಿಕ್ಕಿತು ಸಖತ್ ಸುದ್ದಿ

(Mohammed Siraj opens up about his special finger on lips celebration India vs England second test)

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್