AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಕೊನೆಯ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸ್; ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಸಿರಾಜ್

Mohammed Siraj's Explosive Batting: ಭಾರತದ ಅಭ್ಯಾಸ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಅವರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಗಮನ ಸೆಳೆದಿದೆ. ಭಾರತಕ್ಕೆ 45 ಓವರ್‌ಗಳಲ್ಲಿ 207 ರನ್‌ಗಳ ಗುರಿಯಿತ್ತು. ಕೊನೆಯ ಓವರ್‌ನಲ್ಲಿ 15 ರನ್‌ಗಳ ಅಗತ್ಯವಿದ್ದಾಗ, ಸಿರಾಜ್ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ಹ್ಯಾಟ್ರಿಕ್ ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. 15 ಎಸೆತಗಳಲ್ಲಿ ಅಜೇಯ 32 ರನ್ ಗಳಿಸಿ, 213.33 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿ ತಂಡಕ್ಕೆ ಹೈಲೈಟ್ ನೀಡಿದರು.

IND vs SL: ಕೊನೆಯ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸ್; ಬ್ಯಾಟಿಂಗ್​ನಲ್ಲಿ ಅಬ್ಬರಿಸಿದ ಸಿರಾಜ್
Mohammed Siraj
ಪೃಥ್ವಿಶಂಕರ
|

Updated on: Aug 09, 2026 | 8:00 PM

Share

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾ (Team India) ಆಡಿದ ಏಕೈಕ ಅಭ್ಯಾಸ ಪಂದ್ಯ ಮುಕ್ತಾಯಗೊಂಡಿದೆ. ಈ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ, ಭಾರತೀಯ ಬೌಲರ್‌ಗಳು ಮತ್ತು ಬ್ಯಾಟ್ಸ್‌ಮನ್‌ಗಳು ಅಲ್ಲಿನ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಆಡುವುದರಲ್ಲಿ ಯಶಸ್ವಿಯಾದರು. ಎರಡೂ ಇನ್ನಿಂಗ್ಸ್‌ಗಳಲ್ಲಿ, ಬಹುತೇಕ ಪ್ರತಿಯೊಬ್ಬ ಬ್ಯಾಟ್ಸ್‌ಮನ್ ರನ್ ಗಳಿಸಿದರೆ, ಬಹುತೇಕ ಬೌಲರ್ ವಿಕೆಟ್ ಪಡೆದರು. ಇದರ ಪರಿಣಾಮವಾಗಿ ಈ ಪಂದ್ಯದ ಫಲಿತಾಂಶ ಟೀಂ ಇಂಡಿಯಾ ಪರ ವಾಲಿತು. ಅಂತಿಮ ಓವರ್‌ನಲ್ಲಿ, ಟೀಂ ಇಂಡಿಯಾ ಗೆಲ್ಲಲು 16 ರನ್‌ಗಳು ಬೇಕಾಗಿದ್ದವು. ಸ್ಟ್ರೈಕ್​ನಲ್ಲಿದ್ದ ಮೊಹಮ್ಮದ್ ಸಿರಾಜ್ (Mohammed Siraj) ಹ್ಯಾಟ್ರಿಕ್ ಸಿಕ್ಸರ್‌ಗಳನ್ನು ಬಾರಿಸಿ ತಂಡಕ್ಕೆ 6 ವಿಕೆಟ್‌ಗಳ ಗೆಲುವು ತಂದುಕೊಟ್ಟರು.

ಕೊನೆಯ ಓವರ್‌ನಲ್ಲಿ 15 ರನ್‌ಗಳ ಅಗತ್ಯ

ಈ ಪಂದ್ಯವನ್ನು ಗೆಲ್ಲಲು ಭಾರತಕ್ಕೆ 45 ಓವರ್​ಗಳಲ್ಲಿ 207 ರನ್‌ಗಳ ಗುರಿ ಇತ್ತು. ಭಾರತ ತಂಡ ಆರಂಭದಿಂದಲೂ ಗೆಲುವಿಗಾಗಿ ಬ್ಯಾಟಿಂಗ್ ಮಾಡುತ್ತಿರುವಂತೆ ತೋರುತ್ತಿತ್ತು. ಆದರೆ ರಿಷಭ್ ಪಂತ್ ಅವರ ತಾಳ್ಮೆಯ ಆಟ ಪಂದ್ಯವನ್ನು ಡ್ರಾದತ್ತ ತಿರುಗಿಸಿತು. ಇದರ ಪರಿಣಾಮವಾಗಿ ಭಾರತಕ್ಕೆ ಕೊನೆಯ ಓವರ್‌ನಲ್ಲಿ ಒಟ್ಟು 15 ರನ್‌ಗಳ ಅಗತ್ಯವಿತ್ತು. ಇದರರ್ಥ ಭಾರತಕ್ಕೆ ಗೆಲ್ಲಲು ಆರು ಎಸೆತಗಳಲ್ಲಿ 15 ರನ್‌ಗಳ ಅಗತ್ಯವಿತ್ತು. ಕೊನೆಯ ಓವರ್‌ನ ಮೊದಲ ಮೂರು ಎಸೆತಗಳಲ್ಲಿ ಸಿರಾಜ್ ಸತತ ಸಿಕ್ಸರ್‌ಗಳನ್ನು ಬಾರಿಸಿ ಹ್ಯಾಟ್ರಿಕ್ ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದರು. ಆದಾಗ್ಯೂ, ಇದು ಅಭ್ಯಾಸ ಪಂದ್ಯವಾದ್ದರಿಂದ, ಭಾರತವು ಕೊನೆಯ ಓವರ್ ಅನ್ನು ಆಡಲು ನಿರ್ಧರಿಸಿತು.

15 ಎಸೆತಗಳಲ್ಲಿ ಅಜೇಯ 32 ರನ್

ಕೊನೆಯ ಓವರ್‌ನ ಮೊದಲ ಮೂರು ಎಸೆತಗಳಲ್ಲಿ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿದ ಸಿರಾಜ್, ನಾಲ್ಕನೇ ಎಸೆತದಲ್ಲಿ ಒಂದು ರನ್ ಗಳಿಸಲಿಲ್ಲ ಆದರೆ ಐದನೇ ಎಸೆತದಲ್ಲಿ ಮತ್ತೊಂದು ಬೌಂಡರಿ ಬಾರಿಸಿದರು. ನಂತರ ಕೊನೆಯ ಎಸೆತದಲ್ಲಿ ಒಂದು ರನ್ ಗಳಿಸಿದರು, ಆರು ಎಸೆತಗಳಲ್ಲಿ ಮೂರು ಸಿಕ್ಸರ್‌ಗಳು ಮತ್ತು ಒಂದು ಬೌಂಡರಿ ಸೇರಿದಂತೆ 23 ರನ್‌ ಕಲೆಹಾಕಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ಸಿರಾಜ್ 15 ಎಸೆತಗಳನ್ನು ಎದುರಿಸಿ ಅಜೇಯ 32 ರನ್ ಗಳಿಸಿದರು. 213.33 ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ಸಿರಾಜ್ ತಮ್ಮ ಇನ್ನಿಂಗ್ಸ್‌ನಲ್ಲಿ ನಾಲ್ಕು ಸಿಕ್ಸರ್‌ಗಳು ಮತ್ತು ಒಂದು ಬೌಂಡರಿ ಕೂಡ ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಶಾಸಕರ ಅಸಮಾಧಾನದ ನಡುವೆ ದೆಹಲಿಗೆ ಹಾರಿದ ಸಿಎಂ ಡಿ.ಕೆ ಶಿವಕುಮಾರ್
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಚಲಿಸುತ್ತಿದ್ದಾಗಲೇ ಟೈರ್ ಬ್ಲಾಸ್ಟ್: ಗದ್ದೆಗೆ ನುಗ್ಗಿದ KSRTC ಬಸ್​​
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಸಚಿವರ ಪಟ್ಟಿ ಬದಲಾಗಿದ್ದು ಕಾಂಗ್ರೆಸ್ ಇತಿಹಾಸದಲ್ಲಿ ಇದೇ ಮೊದಲು: ರಾಜಣ್ಣ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
ಯತೀಂದ್ರಗೆ ಮತ್ತೊಂದು ಜಾಕ್​​ ಪಾಟ್, ಸಿದ್ದರಾಮಯ್ಯ ಮುನಿಸು ತಣಿಸುವ ಪ್ರಯತ್ನ
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
GBDA ಯೋಜನೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂದೇಶ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
‘ನನ್ನ ಕನಸನ್ನು ಹೆಗಲ ಮೇಲೆ ಹೊತ್ತುಕೊಂಡ ಯಶ್: ಗೀತು ಮೋಹನ್​​ದಾಸ್ ಭಾವುಕ
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಟೆಕ್ಕಿ ಅದ್ವೈತ್ ಶಿವಗಂಗೆ ಬೆಟ್ಟ ಏರುತ್ತಿರುವ ಸಿಸಿಟಿವಿ ದೃಶ್ಯಾವಳಿ ಪತ್ತೆ!
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಆಗಸ್ಟ್ 10 ರಿಂದ 16 ರವರೆಗಿನ ದ್ವಾದಶ ರಾಶಿಗಳ ಸಂಪೂರ್ಣ ವಾರಭವಿಷ್ಯ ಇಲ್ಲಿದೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ
ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್​​ಡಿಕೆ