AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ರನೌಟ್​ ಮಾಡಲು ಹೋಗಿ ನಾಟಕವಾಡಿದ ಸಿರಾಜ್..!

Mohammed Siraj: ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಸಿರಾಜ್ 10 ಓವರ್​ಗಳಲ್ಲಿ ಕೇವಲ 38 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದರು.

VIDEO: ರನೌಟ್​ ಮಾಡಲು ಹೋಗಿ ನಾಟಕವಾಡಿದ ಸಿರಾಜ್..!
mohammed siraj
TV9 Web
| Edited By: |

Updated on: Oct 10, 2022 | 10:25 AM

Share

India vs South Africa: ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡದ ಹಂಗಾಮಿ ನಾಯಕ ಕೇಶವ್ ಮಹಾರಾಜ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಮೂರನೇ ಓವರ್​ನಲ್ಲೇ ಮೊಹಮ್ಮದ್ ಸಿರಾಜ್ ಡಿಕಾಕ್ ವಿಕೆಟ್ ಕಬಳಿಸಿ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಐಡೆನ್ ಮಾರ್ಕ್ರಾಮ್ ಹಾಗೂ ರೀಜಾ ಹೆನ್ರಿಕ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಅಷ್ಟೇ ಅಲ್ಲದೆ ಮೂರನೇ ವಿಕೆಟ್‌ಗೆ 129 ರನ್‌ಗಳ ಜೊತೆಯಾಟ ಆಡುವ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

76 ಎಸೆತಗಳನ್ನು ಎದುರಿಸಿದ ರೀಜಾ 9 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 74 ರನ್ ಗಳಿಸಿದರೆ, ಮಾರ್ಕ್ರಾಮ್ 89 ಎಸೆತಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 79 ರನ್ ಬಾರಿಸಿದರು. ಆದರೆ ತಂಡದ ಮೊತ್ತ 250 ರ ಗಡಿದಾಟುವಷ್ಟರಲ್ಲಿ ಸೌತ್ ಆಫ್ರಿಕಾ ತಂಡವು 6 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಉತ್ತಮ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ರನ್​ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರು.

ಇದನ್ನೂ ಓದಿ
Image
Anna Rajan: ಸಿಮ್ ಖರೀದಿಸಲು ಹೋದ ನಟಿಯನ್ನು ಶೋ ರೂಮ್​ನಲ್ಲಿ ಕೂಡಿ ಹಾಕಿದ ಸಿಬ್ಬಂದಿ..!
Image
David Miller: ಕಿಲ್ಲರ್ ಮಿಲ್ಲರ್ ಆರ್ಭಟಕ್ಕೆ ಧೋನಿ ದಾಖಲೆ ಧೂಳೀಪಟ
Image
Dinesh Karthik: ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಹೊಸ ವಿಶ್ವ ದಾಖಲೆ ಬರೆದ DK
Image
Virat Kohli: ಸ್ಪೋಟಕ ಬ್ಯಾಟಿಂಗ್ ಮೂಲಕ ಹೊಸ ದಾಖಲೆ ಬರೆದ ಕಿಂಗ್ ಕೊಹ್ಲಿ

ಇದರ ನಡುವೆ ಕೆಲ ನಾಟಕೀಯ ಸನ್ನಿವೇಶಗಳಿಗೂ ಈ ಪಂದ್ಯ ಸಾಕ್ಷಿಯಾಯಿತು. ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ನ 48ನೇ ಓವರ್ ಅನ್ನು ಸಿರಾಜ್ ಬೌಲ್ ಮಾಡಿದ್ದರು. ಈ ವೇಳೆ ಎಸೆದ 2ನೇ ಎಸೆತವನ್ನು ಕೇಶವ್ ಮಹಾರಾಜ್ ಗುರುತಿಸುವಲ್ಲಿ ಎಡವಿದರು. ಚೆಂಡು ನೇರವಾಗಿ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಕೈ ಸೇರಿತು.

ಆ ಬಳಿಕ ಸ್ಯಾಮ್ಸನ್ ಚೆಂಡನ್ನು ಬೌಲರ್ ಸಿರಾಜ್​ಗೆ ನೀಡಿದರು. ಅತ್ತ ನಾನ್​ ಸ್ಟ್ರೈಕ್​ನಲ್ಲಿದ್ದ ಡೇವಿಡ್ ಮಿಲ್ಲರ್ ಕ್ರೀಸ್​ ರನ್ ಓಡಲು ಬಂದು ಕೇಶವ್ ಮಹಾರಾಜ್​ರತ್ತ ನೋಡುತ್ತಾ ನಿಂತಿದ್ದರು. ಇದನ್ನು ಮೊದಲೇ ಗಮನಿಸಿದ ಸಿರಾಜ್ ಕೈಗೆ ಚೆಂಡು ಸಿಗುತ್ತಿದ್ದಂತೆ ರನೌಟ್ ಮಾಡಲು ಯತ್ನಿಸಿದ್ದರು.

ಆದರೆ ಸಿರಾಜ್ ಎಸೆದ ಥ್ರೋ ಸ್ಟಂಪ್​ಗೆ ತಾಗದೇ ನೇರವಾಗಿ ಬೌಂಡರಿಗೆ ಸಾಗಿತು. ಬೌಂಡರಿ ಲೈನ್​ ದಾಟುತ್ತಿದ್ದಂತೆ ಅಂಪೈರ್ ಬೈಸ್ ಫೋರ್ ನೀಡಿದರು. ಅಚ್ಚರಿ ಎಂದರೆ ಈ ವೇಳೆ ಸಿರಾಜ್ ಅಂಪೈರ್ ಜೊತೆ ವಾಗ್ವಾದಕ್ಕಿಳಿದಿರುವುದು ಕಂಡು ಬಂತು. ಚೆಂಡು ಡೆಡ್ ಆಗಿದೆ. ನಾನು ರನೌಟ್ ಮಾಡಲು ಮುಂದಾಗಿರಲಿಲ್ಲ ಎಂಬ ವಾದವನ್ನು ಸಿರಾಜ್ ಮುಂದಿಟ್ಟರು. ಆದರೆ ರಿಪ್ಲೇನಲ್ಲಿ ಸಿರಾಜ್ ರನೌಟ್ ಮಾಡಲೇಂದೇ ಥ್ರೋ ಎಸೆದಿರುವುದು ಕಂಡು ಬಂತು. ಇದೀಗ ಸಿರಾಜ್ ಅವರ ಈ ನಾಟಕೀಯ ಸನ್ನಿವೇಶಗಳ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದಾಗ್ಯೂ ಈ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಸಿರಾಜ್ 10 ಓವರ್​ಗಳಲ್ಲಿ ಕೇವಲ 38 ರನ್ ನೀಡಿ 3 ವಿಕೆಟ್ ಕಬಳಿಸಿದರು. ಈ ಮೂಲಕ ಸೌತ್ ಆಫ್ರಿಕಾ ತಂಡವನ್ನು 50 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 278 ರನ್​ಗಳಿಗೆ ನಿಯಂತ್ರಿಸಿತು. 279 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಟೀಮ್ ಇಂಡಿಯಾ 45.5 ಓವರ್​ಗಳಲ್ಲಿ 3 ವಿಕೆಟ್​ ನಷ್ಟಕ್ಕೆ ಗುರಿ ತಲುಪುವ ಮೂಲಕ ಗೆಲುವಿನ ನಗೆ ಬೀರಿತು. 84 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್​ ನೆರವಿನಿಂದ 93 ರನ್​ ಬಾರಿಸಿದ ಕಿಶನ್​ 7 ರನ್​ ಅಂತರದಲ್ಲಿ ಶತಕವನ್ನು ಮಿಸ್ ಮಾಡಿಕೊಂಡರು. ಇನ್ನೊಂದೆಡೆ ಅಜೇಯ ಆಟವಾಡಿದ ಶ್ರೇಯಸ್​ ಅಯ್ಯರ್ (113) ಭರ್ಜರಿ ಶತಕ ದಾಖಲಿಸಿ ಗೆಲುವಿನ ರೂವಾರಿ ಎನಿಸಿಕೊಂಡರು.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?