AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಸೂಪರ್​ ಹೀರೋಗೆ… ವಿರಾಟ್ ಕೊಹ್ಲಿಗೆ ಮೊಹಮ್ಮದ್ ಸಿರಾಜ್ ಭಾವುಕ ಪತ್ರ

Virat Kohli retires: ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ 210 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಅವರು ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿ ಮಿಂಚಿದ್ದಾರೆ.

ನನ್ನ ಸೂಪರ್​ ಹೀರೋಗೆ... ವಿರಾಟ್ ಕೊಹ್ಲಿಗೆ ಮೊಹಮ್ಮದ್ ಸಿರಾಜ್ ಭಾವುಕ ಪತ್ರ
Virat Kohli - Siraj
ಝಾಹಿರ್ ಯೂಸುಫ್
|

Updated on: May 13, 2025 | 12:23 PM

Share

14 ವರ್ಷಗಳ ಟೆಸ್ಟ್ ಕೆರಿಯರ್​ಗೆ ವಿರಾಟ್ ಕೊಹ್ಲಿ (Virat Kohli) ವಿದಾಯ ಹೇಳಿದ್ದಾರೆ. 2011 ರಲ್ಲಿ ಶುರುವಾದ ತಮ್ಮ ಕೆರಿಯರ್​ನಲ್ಲಿ ಕಿಂಗ್ ಕೊಹ್ಲಿ ಹಲವು ಆಟಗಾರರಿಗೆ ಬೆನ್ನೆಲುಬಾಗಿ ನಿಂತಿದ್ದರು. ಅಂತವರಲ್ಲಿ ಮೊಹಮ್ಮದ್ ಸಿರಾಜ್ ಕೂಡ ಒಬ್ಬರು. ಇದೀಗ ವಿರಾಟ್ ಕೊಹ್ಲಿಯ ನಿವೃತ್ತಿಯನ್ನು ಸಿರಾಜ್​ಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ನೋವಿನೊಂದಿಗೆ ಸೋಷಿಯಲ್ ಮೀಡಿಯಾದಲ್ಲಿ ಕೊಹ್ಲಿಗೆ ಧನ್ಯವಾದ ತಿಳಿಸಿ ಬಹಿರಂಗ ಪತ್ರ ಬರೆದಿದ್ದಾರೆ.

ಮೊಹಮ್ಮದ್ ಸಿರಾಜ್ ಅವರ ಬಹಿರಂಗ ಪತ್ರದ ಸಾರಾಂಶ ಹೀಗಿದೆ:

ನನ್ನ ಸೂಪರ್ ಹೀರೋಗೆ…  ಟೆಸ್ಟ್ ಕ್ರಿಕೆಟ್‌ನಲ್ಲಿ ನಿಮ್ಮ ಅದ್ಭುತ ವೃತ್ತಿಜೀವನಕ್ಕೆ ಅಭಿನಂದನೆಗಳು. ನಿಮ್ಮ ಪರಂಪರೆ ಶಾಶ್ವತವಾಗಿ ಉಳಿಯುತ್ತದೆ. ನೀವು ನನ್ನಂತಹ ಪೀಳಿಗೆಯ ಕ್ರಿಕೆಟಿಗರಿಗೆ ಸ್ಫೂರ್ತಿ ನೀಡಿದ್ದೀರಿ. ನಿಮ್ಮ ಸಾಧನೆಗಳನ್ನು ಮತ್ತು ಅದನ್ನು ಮುಂದುವರಿಸುತ್ತೀರಿ ಭಯ್ಯಾ. ನೀವು ಇಲ್ಲದ ಡ್ರೆಸ್ಸಿಂಗ್ ರೂಮ್, ಈ ಹಿಂದಿನಂತೆ ಇರುವುದಿಲ್ಲ.

ಯಾವಾಗಲೂ ನನ್ನನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ನನ್ನನ್ನು ಪ್ರೇರೇಪಿಸಿದ್ದಕ್ಕಾಗಿ ಧನ್ಯವಾದಗಳು. ನಿಮಗೆ ಶುಭ ಹಾರೈಸುತ್ತೇನೆ. ಕಿಂಗ್ ವಿರಾಟ್ ಕೊಹ್ಲಿ ಭಯ್ಯಾ ಎಂದು ಮೊಹಮ್ಮದ್ ಸಿರಾಜ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ತನ್ನನ್ನು ಕೆರಿಯರ್​ನ ಉದ್ದಕ್ಕೂ ಬೆಂಬಲಿಸಿದ್ದಕ್ಕಾಗಿ ವಿರಾಟ್ ಕೊಹ್ಲಿಗೆ ಸಿರಾಜ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಸಿರಾಜ್​ಗೆ ಅವಕಾಶ:

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 2020 ರಲ್ಲಿ ಮೊಹಮ್ಮದ್ ಸಿರಾಜ್​ ಭಾರತ ಟೆಸ್ಟ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಬಳಿಕ ಟೀಮ್ ಇಂಡಿಯಾದ ಖಾಯಂ ಸದಸ್ಯರಾಗಿ ಕಾಣಿಸಿಕೊಂಡ ಸಿರಾಜ್ ಈವರೆಗೆ ಒಟ್ಟು 36 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 67 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 100 ವಿಕೆಟ್​ಗಳನ್ನು ಕಬಳಿಸಿದ್ದಾರೆ.

ಅದರಲ್ಲೂ 2021 ರಲ್ಲಿ ಲಾರ್ಡ್ಸ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಪಂದ್ಯವು ವಿರಾಟ್ ಕೊಹ್ಲಿ ಹಾಗೂ ಮೊಹಮ್ಮದ್ ಸಿರಾಜ್ ಪಾಲಿಗೆ ಸ್ಮರಣೀಯ. ಏಕೆಂದರೆ ಈ ಪಂದ್ಯದಲ್ಲಿ ಅತ್ಯಧ್ಭುತ ನಾಯಕತ್ವ ಪ್ರದರ್ಶಿಸಿದ್ದ ಕೊಹ್ಲಿ, ಸಿರಾಜ್ ಕಡೆಯಿಂದ ಮಾರಕ ದಾಳಿ ಸಂಘಟಿಸಿದ್ದರು.

ಈ ಪಂದ್ಯದಲ್ಲಿ ಒಟ್ಟು 8 ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಸಿರಾಜ್ ಟೀಮ್ ಇಂಡಿಯಾಗೆ 151 ರನ್​ಗಳ ಭರ್ಜರಿ ಜಯ ತಂದುಕೊಟ್ಟಿದ್ದರು. ಇದು ಕಿಂಗ್ ಕೊಹ್ಲಿಯ ನಾಯಕತ್ವದಲ್ಲಿ ಮೂಡಿಬಂದ ಮಿಯಾ ಮ್ಯಾಜಿಕ್ ಎಂದು ಈಗಲೂ ವರ್ಣಿಸಲಾಗುತ್ತದೆ.

2021ರ ಲಾರ್ಡ್ಸ್ ಟೆಸ್ಟ್ ಹೈಲೆಟ್ಸ್:

ಇದನ್ನೂ ಓದಿ: IPL 2025: PBKS vs DC ನಡುವೆ ಮರು ಪಂದ್ಯ: ಸೋತರೆ 1 ಪಾಯಿಂಟ್ ಮಿಸ್..!

ಇದೀಗ ಟೆಸ್ಟ್ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಯುಗಾಂತ್ಯವಾಗಿದೆ. ಈ ಯುಗಾಂತ್ಯದ ಬೆನ್ನಲ್ಲೇ ಮೊಹಮ್ಮದ್ ಸಿರಾಜ್ ಭಾವುಕ ಪತ್ರ ಹಂಚಿಕೊಳ್ಳುವ ಮೂಲಕ ತನ್ನ ನೆಚ್ಚಿನ ನಾಯಕನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ