AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯ್​ ಶಾ ಬದಲಿಗೆ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಅಧ್ಯಕ್ಷ ಸ್ಥಾನ..!

Asian Cricket Council: ಪಾಕಿಸ್ತಾನ ಕ್ರಿಕೆಟ್ ತಂಡದ ನಿರಂತರ ವೈಫಲ್ಯದ ನಡುವೆ, ಮೊಹ್ಸಿನ್ ನಖ್ವಿ ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ಜಯ್​ ಶಾ ಅವರ ಬದಲಿಗೆ ಮೊಹ್ಸಿನ್ ನಖ್ವಿ ಈ ಹುದ್ದೆಯನ್ನು ಅಲಂಕರಿಸಿದ್ದಾರೆ.ಈ ಬಾರಿಯ ಏಷ್ಯಾಕಪ್ ಭಾರತದಲ್ಲೇ ನಡೆಯುತ್ತಿರುವ ಕಾರಣ ನಖ್ವಿ ತಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ಜಯ್​ ಶಾ ಬದಲಿಗೆ ಪಾಕಿಸ್ತಾನದ ಮೊಹ್ಸಿನ್ ನಖ್ವಿಗೆ ಅಧ್ಯಕ್ಷ ಸ್ಥಾನ..!
Mohsin Naqvi
ಪೃಥ್ವಿಶಂಕರ
|

Updated on:Apr 04, 2025 | 8:02 AM

Share

ಕ್ರಿಕೆಟ್ ಕ್ಷೇತ್ರದಲ್ಲಿ ನಿರಂತರ ವೈಫಲ್ಯ ಎದುರಿಸುತ್ತಿರುವ ಪಾಕಿಸ್ತಾನಕ್ಕೆ (Pakistan Cricket) ಒಂದು ಒಳ್ಳೆಯ ಸುದ್ದಿ ಸಿಕ್ಕಿದೆ. ವಾಸ್ತವವಾಗಿ, ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಅವರಿಗೆ ಮತ್ತೊಂದು ಹುದ್ದೆ ಸಿಕ್ಕಿದೆ. ಅವರು ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ (ACC) ಅಧ್ಯಕ್ಷರಾಗಿದ್ದಾರೆ. ಇದಕ್ಕೂ ಮೊದಲು, ಜಯ್​ ಶಾ (Jay Shah) ಏಷ್ಯನ್ ಕ್ರಿಕೆಟ್ ಮುಖ್ಯಸ್ಥರಾಗಿದ್ದರು. 2021 ರಲ್ಲಿ ಈ ಹುದ್ದೆಗೇರಿದ್ದ ಜಯ್​ ಶಾ ಅವರ ಅಧಿಕಾರಾವದಿ ಮುಕ್ತಯಗೊಂಡಿದ್ದು, ಇದೀಗ ಮೊಹ್ಸಿನ್ ನಖ್ವಿ ಅವರಿಗೆ ಈ ಹುದ್ದೆ ಸಿಕ್ಕಿದೆ. ದೊಡ್ಡ ವಿಷಯವೆಂದರೆ ಭಾರತದಲ್ಲಿ ಏಷ್ಯಾಕಪ್ ನಡೆಯಲಿರುವ ವರ್ಷದಲ್ಲಿ ಮೊಹ್ಸಿನ್ ನಖ್ವಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿದ್ದಾರೆ. 2025 ರ ಏಷ್ಯಾಕಪ್ ಈ ಬಾರಿ ಭಾರತದಲ್ಲಿ ನಡೆಯಲಿದ್ದು, ಈ ಪಂದ್ಯಾವಳಿಯನ್ನು ಟಿ20 ಸ್ವರೂಪದಲ್ಲಿ ನಡೆಸಲಾಗುವುದು, ಇದರಲ್ಲಿ 6 ತಂಡಗಳು ಭಾಗವಹಿಸುತ್ತವೆ. ಆ 6 ತಂಡಗಳಲ್ಲಿ ಪಾಕಿಸ್ತಾನವೂ ಸೇರಿದೆ.

ಭಾರತಕ್ಕೆ ಬರುವುದಿಲ್ಲ ಪಾಕ್ ತಂಡ

ಏಷ್ಯಾಕಪ್ ಭಾರತದಲ್ಲಿ ನಡೆಯುತ್ತಿರುವ ಕಾರಣ ಪಾಕಿಸ್ತಾನ ತಂಡ ಇಲ್ಲಿಗೆ ಬರುವುದಿಲ್ಲ. ಇತ್ತೀಚೆಗೆ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸಿತ್ತು. ಆ ಸಮಯದಲ್ಲಿ ಭಾರತ ತಂಡವು ಕೂಡ ಅಲ್ಲಿಗೆ ಹೋಗದೆ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿತ್ತು. ಈಗ ಪಾಕಿಸ್ತಾನ ತಂಡ ಕೂಡ ಅದೇ ರೀತಿ ಮಾಡಲಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರು ಕೂಡ ಪಾಕಿಸ್ತಾನದವರಾಗಿರುವುದರಿಂದ ಅವರ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ.

ಇದನ್ನೂ ಓದಿ
Image
ಭಾರತ-ಪಾಕಿಸ್ತಾನ ಕ್ರಿಕೆಟ್ ಕುರಿತು ಪ್ರಧಾನಿ ಮೋದಿ ಮಾತು
Image
ಪಾಕ್ ಕ್ರಿಕೆಟಿಗನ ಮನೆಯಲ್ಲಿ ಹಗಲು ದರೋಡೆ
Image
ದಿ ಹಂಡ್ರೆಡ್ ಲೀಗ್​ನಲ್ಲಿ ಪಾಕ್ ಆಟಗಾರರನ್ನು ಖರೀದಿಸುವವರೇ ಇಲ್ಲ
Image
ಬಾಬರ್ ಮುಂದೆ ವಿರಾಟ್ ಶೂನ್ಯ ಎಂದ ಪಾಕ್ ಮಾಜಿ ಕೋಚ್

ಮೊಹ್ಸಿನ್ ನಖ್ವಿ ವಿರುದ್ಧ ವಾಗ್ದಾಳಿ

ಒಂದೆಡೆ ಮೊಹ್ಸಿನ್ ನಖ್ವಿ ಎಸಿಸಿ ಅಧ್ಯಕ್ಷರಾಗಿದ್ದರೆ, ಮತ್ತೊಂದೆಡೆ ಅವರ ಸ್ವಂತ ದೇಶದಲ್ಲಿ ಅವರ ಸ್ವಂತ ಮಾಜಿ ಕ್ರಿಕೆಟಿಗರು ಈಗ ಅವರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಪಿಸಿಬಿ ಅಧ್ಯಕ್ಷ ಹುದ್ದೆಗೆ ನಖ್ವಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿರುವ ಕಮ್ರಾನ್ ಅಕ್ಮಲ್, ‘ಇದು ನಾಚಿಕೆಗೇಡಿನ ಸಂಗತಿ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗದಿದ್ದರೆ, ರಾಜೀನಾಮೆ ನೀಡಿ ಹೊರಡಬೇಕು ಎಂದು ಯೋಚಿಸಬೇಕು. ನಿಮ್ಮ ಖ್ಯಾತಿಯನ್ನು ಹಾಳು ಮಾಡಿಕೊಳ್ಳಬೇಡಿ. ನೀವು ಇದನ್ನು ಮಾಡಲು ಬಯಸದಿದ್ದರೆ, ಈಗಿರುವ ತಂಡದ ಸ್ಥಿತಿಯನ್ನು ಸುಧಾರಿಸಿ ಎಂದಿದ್ದಾರೆ.

‘ಫಲಿತಾಂಶವೇ ಹೇಳುತ್ತದೆ’; ಭಾರತ- ಪಾಕ್ ನಡುವೆ ಯಾವುದು ಬೆಸ್ಟ್ ತಂಡ? ಮೋದಿ ಉತ್ತರ ಏನು ಗೊತ್ತಾ?

ವಾಸ್ತವವಾಗಿ ಪಾಕಿಸ್ತಾನದ ಇತ್ತೀಚಿನ ನ್ಯೂಜಿಲೆಂಡ್ ವಿರುದ್ಧದ ಪ್ರವಾಸವು ನಿರಾಶಾದಾಯಕವಾಗಿತ್ತು. ಮೊದಲು ನಡೆದಿದ್ದ ಟಿ20 ಸರಣಿಯಲ್ಲಿ 4-1 ಅಂತರದ ಹೀನಾಯ ಸೋಲನ್ನು ಅನುಭವಿಸಿದ್ದ ಪಾಕ್ ತಂಡ ಅದರ ನಂತರ, ನಡೆಯುತ್ತಿರುವ ಏಕದಿನ ಸರಣಿಯಲ್ಲಿಯೂ ಸಹ 0-2 ಅಂತರದಿಂದ ಸರಣಿಯನ್ನು ಕಳೆದುಕೊಂಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:58 am, Fri, 4 April 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ