AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MPL 2023: CSK ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದ ರುತುರಾಜ್ ಪಡೆ..!

MPL 2023: ರುತುರಾಜ್ ಗಾಯಕ್ವಾಡ್ ನಾಯಕತ್ವದ ಪುಣೇರಿ ಬಪ್ಪಾ ತಂಡ ಛತ್ರಪತಿ ಸಂಭಾಜಿ ಕಿಂಗ್ಸ್ ವಿರುದ್ಧ 7 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ಲೀಗ್​ನಲ್ಲಿ ತಮ್ಮ ಸತತ ಎರಡನೇ ಜಯ ದಾಖಲಿಸಿತು.

MPL 2023: CSK ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದ ರುತುರಾಜ್ ಪಡೆ..!
ರುತುರಾಜ್ ಗಾಯಕ್ವಾಡ್
ಪೃಥ್ವಿಶಂಕರ
|

Updated on:Jun 19, 2023 | 9:33 AM

Share

ಪ್ರಸ್ತುತ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ (Maharashtra Premier League) ಸೀಸನ್ ನಡೆಯುತ್ತಿದೆ. ಐಪಿಎಲ್ (IPL) ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಕ್ರಿಕೆಟಿಗರಿಗೆ ಎಂಪಿಎಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಬಾರಿಯ ಪಂದ್ಯಾವಳಿ ಗುರುವಾರದಿಂದ ಆರಂಭವಾಗಿದ್ದು, ಮಹಾರಾಷ್ಟ್ರದ ಸ್ಥಳೀಯ ಕ್ರಿಕೆಟಿಗರು ಈ ಟೂರ್ನಿಯ ಮೂಲಕ ತಮ್ಮ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನ ಇನ್ನೊಂದು ವಿಶೇಷತೆ ಏನೆಂದರೆ, ಟೀಂ ಇಂಡಿಯಾ (Team India) ಪರ ಆಡಿದ ಮಹಾರಾಷ್ಟ್ರದ ದಿಗ್ಗಜ ಕ್ರಿಕೆಟಿಗರು ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಹಾಗಾಗಿ ಈ ಸ್ಪರ್ಧೆಯ ರಂಗು ಇನ್ನಷ್ಟು ಹೆಚ್ಚಿದೆ. ಎಂಪಿಎಲ್ (MPL) ಆರು ತಂಡಗಳನ್ನು ಒಳಗೊಂಡಿದ್ದು, ಲೀಗ್ ಹಂತದಲ್ಲಿ 19 ಪಂದ್ಯಗಳು ನಡೆಯಲಿವೆ.

ಈ ಲೀಗ್​ನಲ್ಲಿ ಭಾನುವಾರ ಡಬಲ್ ಹೆಡರ್ ಪಂದ್ಯಗಳು ನಡೆದವು. ದಿನದ ಎರಡನೇ ಪಂದ್ಯ ಪುಣೇರಿ ಬಪ್ಪಾ ಮತ್ತು ಛತ್ರಪತಿ ಸಂಭಾಜಿ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಪುಣೇರಿ ಬಪ್ಪಾ ತಂಡ ಛತ್ರಪತಿ ಸಂಭಾಜಿ ಕಿಂಗ್ಸ್ ವಿರುದ್ಧ 7 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ಲೀಗ್​ನಲ್ಲಿ ತಮ್ಮ ಸತತ ಎರಡನೇ ಜಯ ದಾಖಲಿಸಿತು.

Ruturaj Gaikwad: 27 ಎಸೆತಗಳಲ್ಲಿ 64 ರನ್! ಮಡದಿಗಾಗಿ ಸ್ಮರಣೀಯ ಇನ್ನಿಂಗ್ಸ್ ಆಡಿದ ರುತುರಾಜ್

146 ರನ್ ಕಲೆಹಾಕಿದೆ ಸಿಎಸ್​ಕೆ

ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ರಪತಿ ಸಂಭಾಜಿ ಕಿಂಗ್ಸ್ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್ ಕಲೆ ಹಾಕಿತು. ಛತ್ರಪತಿ ಸಂಭಾಜಿ ಕಿಂಗ್ಸ್ ತಂಡದ ಪರ ಓಂ ಭೋಸ್ಲೆ 33 ಎಸೆತಗಳಲ್ಲಿ 46 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಓಂ ಭೋಸ್ಲೆ ಅವರ ಇನ್ನಿಂಗ್ಸ್​ನಲ್ಲಿ 5 ಬೌಂಡರಿ, 1 ಸಿಕ್ಸರ್‌ ಕೂಡ ಸೇರಿತ್ತು. ಇವರನ್ನು ಹೊರತುಪಡಿಸಿ ಆರಂಭಿಕ ಆಟಗಾರ ಸೌರಭ್ ನವಲೆ ಕೂಡ 23 ಎಸೆತಗಳಲ್ಲಿ 31 ರನ್ ಸಿಡಿಸಿದರು. ಇವರಿಬ್ಬರನ್ನು ಬಿಟ್ಟರೆ ತಂಡದ ಇತರ ಬ್ಯಾಟ್ಸ್​ಮನ್​ಗಳು ಮಿಂಚಲು ಸಾಧ್ಯವಾಗಲಿಲ್ಲ.

ಪವನ್ ಶಾ ಅರ್ಧಶತಕ

ಛತ್ರಪತಿ ಸಂಭಾಜಿ ಕಿಂಗ್ಸ್ ನೀಡಿದ 146 ರನ್​ಗಳ ಗುರಿಯನ್ನು ಪುಣೇರಿ ಬಪ್ಪಾ ತಂಡ ಸುಲಭವಾಗಿ ಬೆನ್ನಟ್ಟಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರುತುರಾಜ್ ಗಾಯಕ್ವಾಡ್ ಹಾಗೂ ಪವನ್ ಶಾ ತಂಡಕ್ಕೆ ಅದ್ಭುತ ಆರಂಭ ತಂದುಕೊಟ್ಟರು. ಇದರಲ್ಲಿ ಪವನ್ 32 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಿತ 54 ರನ್ ಬಾರಿಸಿದರು. ಹಾಗೆಯೇ ರುತುರಾಜ್ ಗಾಯಕ್ವಾಡ್ 18 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿದರು. ರುತುರಾಜ್ ಅವರ ಇನ್ನಿಂಗ್ಸ್​ನಲ್ಲಿ 1 ಬೌಂಡರಿ, 2 ಸಿಕ್ಸರ್‌ ಸೇರಿದ್ದವು. ಹೀಗಾಗಿ ಪುಣೇರಿ ಬಪ್ಪಾ ತಂಡ 147 ರನ್‌ಗಳ ಗುರಿಯನ್ನು 16.2 ಓವರ್‌ಗಳಲ್ಲಿ ತಲುಪಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 am, Mon, 19 June 23

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?