AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MPL 2023: CSK ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದ ರುತುರಾಜ್ ಪಡೆ..!

MPL 2023: ರುತುರಾಜ್ ಗಾಯಕ್ವಾಡ್ ನಾಯಕತ್ವದ ಪುಣೇರಿ ಬಪ್ಪಾ ತಂಡ ಛತ್ರಪತಿ ಸಂಭಾಜಿ ಕಿಂಗ್ಸ್ ವಿರುದ್ಧ 7 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ಲೀಗ್​ನಲ್ಲಿ ತಮ್ಮ ಸತತ ಎರಡನೇ ಜಯ ದಾಖಲಿಸಿತು.

MPL 2023: CSK ವಿರುದ್ಧ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದ ರುತುರಾಜ್ ಪಡೆ..!
ರುತುರಾಜ್ ಗಾಯಕ್ವಾಡ್
ಪೃಥ್ವಿಶಂಕರ
|

Updated on:Jun 19, 2023 | 9:33 AM

Share

ಪ್ರಸ್ತುತ ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಪ್ರೀಮಿಯರ್ ಲೀಗ್ (Maharashtra Premier League) ಸೀಸನ್ ನಡೆಯುತ್ತಿದೆ. ಐಪಿಎಲ್ (IPL) ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಕ್ರಿಕೆಟಿಗರಿಗೆ ಎಂಪಿಎಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಬಾರಿಯ ಪಂದ್ಯಾವಳಿ ಗುರುವಾರದಿಂದ ಆರಂಭವಾಗಿದ್ದು, ಮಹಾರಾಷ್ಟ್ರದ ಸ್ಥಳೀಯ ಕ್ರಿಕೆಟಿಗರು ಈ ಟೂರ್ನಿಯ ಮೂಲಕ ತಮ್ಮ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮಹಾರಾಷ್ಟ್ರ ಪ್ರೀಮಿಯರ್ ಲೀಗ್​ನ ಇನ್ನೊಂದು ವಿಶೇಷತೆ ಏನೆಂದರೆ, ಟೀಂ ಇಂಡಿಯಾ (Team India) ಪರ ಆಡಿದ ಮಹಾರಾಷ್ಟ್ರದ ದಿಗ್ಗಜ ಕ್ರಿಕೆಟಿಗರು ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಹಾಗಾಗಿ ಈ ಸ್ಪರ್ಧೆಯ ರಂಗು ಇನ್ನಷ್ಟು ಹೆಚ್ಚಿದೆ. ಎಂಪಿಎಲ್ (MPL) ಆರು ತಂಡಗಳನ್ನು ಒಳಗೊಂಡಿದ್ದು, ಲೀಗ್ ಹಂತದಲ್ಲಿ 19 ಪಂದ್ಯಗಳು ನಡೆಯಲಿವೆ.

ಈ ಲೀಗ್​ನಲ್ಲಿ ಭಾನುವಾರ ಡಬಲ್ ಹೆಡರ್ ಪಂದ್ಯಗಳು ನಡೆದವು. ದಿನದ ಎರಡನೇ ಪಂದ್ಯ ಪುಣೇರಿ ಬಪ್ಪಾ ಮತ್ತು ಛತ್ರಪತಿ ಸಂಭಾಜಿ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಪುಣೇರಿ ಬಪ್ಪಾ ತಂಡ ಛತ್ರಪತಿ ಸಂಭಾಜಿ ಕಿಂಗ್ಸ್ ವಿರುದ್ಧ 7 ವಿಕೆಟ್​ಗಳ ಜಯ ಸಾಧಿಸುವುದರೊಂದಿಗೆ ಲೀಗ್​ನಲ್ಲಿ ತಮ್ಮ ಸತತ ಎರಡನೇ ಜಯ ದಾಖಲಿಸಿತು.

Ruturaj Gaikwad: 27 ಎಸೆತಗಳಲ್ಲಿ 64 ರನ್! ಮಡದಿಗಾಗಿ ಸ್ಮರಣೀಯ ಇನ್ನಿಂಗ್ಸ್ ಆಡಿದ ರುತುರಾಜ್

146 ರನ್ ಕಲೆಹಾಕಿದೆ ಸಿಎಸ್​ಕೆ

ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಛತ್ರಪತಿ ಸಂಭಾಜಿ ಕಿಂಗ್ಸ್ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್ ಕಲೆ ಹಾಕಿತು. ಛತ್ರಪತಿ ಸಂಭಾಜಿ ಕಿಂಗ್ಸ್ ತಂಡದ ಪರ ಓಂ ಭೋಸ್ಲೆ 33 ಎಸೆತಗಳಲ್ಲಿ 46 ರನ್ ಗಳಿಸಿ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಓಂ ಭೋಸ್ಲೆ ಅವರ ಇನ್ನಿಂಗ್ಸ್​ನಲ್ಲಿ 5 ಬೌಂಡರಿ, 1 ಸಿಕ್ಸರ್‌ ಕೂಡ ಸೇರಿತ್ತು. ಇವರನ್ನು ಹೊರತುಪಡಿಸಿ ಆರಂಭಿಕ ಆಟಗಾರ ಸೌರಭ್ ನವಲೆ ಕೂಡ 23 ಎಸೆತಗಳಲ್ಲಿ 31 ರನ್ ಸಿಡಿಸಿದರು. ಇವರಿಬ್ಬರನ್ನು ಬಿಟ್ಟರೆ ತಂಡದ ಇತರ ಬ್ಯಾಟ್ಸ್​ಮನ್​ಗಳು ಮಿಂಚಲು ಸಾಧ್ಯವಾಗಲಿಲ್ಲ.

ಪವನ್ ಶಾ ಅರ್ಧಶತಕ

ಛತ್ರಪತಿ ಸಂಭಾಜಿ ಕಿಂಗ್ಸ್ ನೀಡಿದ 146 ರನ್​ಗಳ ಗುರಿಯನ್ನು ಪುಣೇರಿ ಬಪ್ಪಾ ತಂಡ ಸುಲಭವಾಗಿ ಬೆನ್ನಟ್ಟಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ರುತುರಾಜ್ ಗಾಯಕ್ವಾಡ್ ಹಾಗೂ ಪವನ್ ಶಾ ತಂಡಕ್ಕೆ ಅದ್ಭುತ ಆರಂಭ ತಂದುಕೊಟ್ಟರು. ಇದರಲ್ಲಿ ಪವನ್ 32 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್‌ ಸಹಿತ 54 ರನ್ ಬಾರಿಸಿದರು. ಹಾಗೆಯೇ ರುತುರಾಜ್ ಗಾಯಕ್ವಾಡ್ 18 ಎಸೆತಗಳಲ್ಲಿ ಅಜೇಯ 29 ರನ್ ಸಿಡಿಸಿದರು. ರುತುರಾಜ್ ಅವರ ಇನ್ನಿಂಗ್ಸ್​ನಲ್ಲಿ 1 ಬೌಂಡರಿ, 2 ಸಿಕ್ಸರ್‌ ಸೇರಿದ್ದವು. ಹೀಗಾಗಿ ಪುಣೇರಿ ಬಪ್ಪಾ ತಂಡ 147 ರನ್‌ಗಳ ಗುರಿಯನ್ನು 16.2 ಓವರ್‌ಗಳಲ್ಲಿ ತಲುಪಿತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:31 am, Mon, 19 June 23

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ