AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ

CSK, IPL 2022: ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್​ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ
MS Dhoni Mems
TV9 Web
| Updated By: Vinay Bhat|

Updated on:May 02, 2022 | 11:37 AM

Share

ಐಪಿಎಲ್ 2022 ರಲ್ಲಿ (IPL 2022) ಭಾನುವಾರ ನಡೆದ 46ನೇ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಪುನಃ ಗೆಲುವಿನ ಹಳಿಗೆ ಮರಳಿದೆ. ಆರಂಭಿಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಶತಕವಂಚಿತ ಬ್ಯಾಟಿಂಗ್ ಹಾಗೂ ಡೆವೊನ್ ಕಾನ್‌ವೇ ನೀಡಿದ ಸಮರ್ಥ ಬೆಂಬಲದಿಂದ ಚೆನ್ನೈ 20 ಓವರ್​​ಗೆ 2 ವಿಕೆಟ್‌ ನಷ್ಟಕ್ಕೆ 202 ರನ್ ಕಲೆಹಾಕಿತು. ಪ್ರತಿಯಾಗಿ ಮುಕೇಶ್ ಚೌಧರಿ ದಾಳಿಗೆ ನಲುಗಿದ ಸನ್‌ರೈಸರ್ಸ್‌ 6 ವಿಕೆಟ್‌ಗೆ 189 ರನ್‌ಗಳಿಸಲಷ್ಟೇ ಶಕ್ತವಾಯಿತು. ನಿಕೋಲಸ್ ಪೂರನ್ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಧೋನಿಯ ಚುರುಕಿನ ನಾಯಕತ್ವ ಚೆನ್ನೈಗೆ ಗೆಲುವಿನ ಸಿಹಿ ನೀಡಿತು. ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್​ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ.

ಪಂದ್ಯ ಮುಗಿದ ಬಳಿಕ ನಾಯಕತ್ವದ ಬಗ್ಗೆ ಮಾತನಾಡಿದ ಎಂಎಸ್ ಧೋನಿ, “ಈ ವರ್ಷ ಸಿಎಸ್​ಕೆ ತಂಡದ ನಾಯಕನ ಜವಬ್ದಾರಿ ರವೀಂದ್ರ ಜಡೇಜಾ ಅವರಿಗೆ ಎಂದು ಕಳೆದ ಸೀಸನ್​ನಲ್ಲಿಯೇ ತೀರ್ಮಾನವಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಸಮಯದಿಂದ ಸಜ್ಜಾಗುತ್ತಿದ್ದರು. ನನ್ನ ಆಶಯ ಕೂಡ ಅದೇ ಆಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ನಾವಿಬ್ಬರು ಮಾಹಿತಿ ಹಂಚಿಕೊಳ್ಳುತ್ತಿದ್ದೆವು. ನಂತರ ಬೌಲಿಂಗ್, ಫೀಲ್ಡಿಂಗ್ ಆಯ್ಕೆ ಎಲ್ಲವನ್ನು ಅವರಿಗೆ ಬಿಟ್ಟುಕೊಟ್ಟೆ. ಯಾಕೆಂದರೆ ನಾಯಕತ್ವ ಅವನು ಮಾಡಿದ, ನಾನು ಕೇವಲ ಟಾಸ್​ಗೆ ಹೋಗಲು ಮಾತ್ರ ಎಂಬ ಭಾವನೆ ಕೊನೆಯಲ್ಲಿ ಅವರಿಗೆ ಮೂಡಬಾರದು. ಮೈದಾನದಲ್ಲಿ ನಾಯಕ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮತ್ತು ಆ ನಿರ್ಧಾರಕ್ಕೆ ಆತನೇ ಜವಾಬ್ದಾರಿ ಆಗಿರಬೇಕು,” ಎಂಬುದು ಎಂಎಸ್​ಡಿ ಮಾತು.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:36 am, Mon, 2 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ