AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ

CSK, IPL 2022: ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್​ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ
MS Dhoni Mems
TV9 Web
| Edited By: |

Updated on:May 02, 2022 | 11:37 AM

Share

ಐಪಿಎಲ್ 2022 ರಲ್ಲಿ (IPL 2022) ಭಾನುವಾರ ನಡೆದ 46ನೇ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಪುನಃ ಗೆಲುವಿನ ಹಳಿಗೆ ಮರಳಿದೆ. ಆರಂಭಿಕ ರುತುರಾಜ್ ಗಾಯಕ್ವಾಡ್ (Ruturaj Gaikwad) ಶತಕವಂಚಿತ ಬ್ಯಾಟಿಂಗ್ ಹಾಗೂ ಡೆವೊನ್ ಕಾನ್‌ವೇ ನೀಡಿದ ಸಮರ್ಥ ಬೆಂಬಲದಿಂದ ಚೆನ್ನೈ 20 ಓವರ್​​ಗೆ 2 ವಿಕೆಟ್‌ ನಷ್ಟಕ್ಕೆ 202 ರನ್ ಕಲೆಹಾಕಿತು. ಪ್ರತಿಯಾಗಿ ಮುಕೇಶ್ ಚೌಧರಿ ದಾಳಿಗೆ ನಲುಗಿದ ಸನ್‌ರೈಸರ್ಸ್‌ 6 ವಿಕೆಟ್‌ಗೆ 189 ರನ್‌ಗಳಿಸಲಷ್ಟೇ ಶಕ್ತವಾಯಿತು. ನಿಕೋಲಸ್ ಪೂರನ್ ಏಕಾಂಗಿ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಧೋನಿಯ ಚುರುಕಿನ ನಾಯಕತ್ವ ಚೆನ್ನೈಗೆ ಗೆಲುವಿನ ಸಿಹಿ ನೀಡಿತು. ರವೀಂದ್ರ ಜಡೇಜಾ (Ravindra Jadeja) ಅವರು ನಾಯಕತ್ವವನ್ನು ಎಂಎಸ್ ಧೋನಿ ಅವರಿಗೆ ಪುನಃ ನೀಡಿದ್ದು ಚೆನ್ನೈ ಸೂಪರ್ ಕಿಂಗ್ಸ್​ ಅದೃಷ್ಟ ಬದಲಾದಂತಿದೆ. ಈ ಬಗ್ಗೆ ಟ್ವಿಟರ್​​ನಲ್ಲಿ ಅಭಿಮಾನಿಗಳು ಸಂಭ್ರಮ ಹಂಚಿಕೊಂಡಿದ್ದಾರೆ.

ಪಂದ್ಯ ಮುಗಿದ ಬಳಿಕ ನಾಯಕತ್ವದ ಬಗ್ಗೆ ಮಾತನಾಡಿದ ಎಂಎಸ್ ಧೋನಿ, “ಈ ವರ್ಷ ಸಿಎಸ್​ಕೆ ತಂಡದ ನಾಯಕನ ಜವಬ್ದಾರಿ ರವೀಂದ್ರ ಜಡೇಜಾ ಅವರಿಗೆ ಎಂದು ಕಳೆದ ಸೀಸನ್​ನಲ್ಲಿಯೇ ತೀರ್ಮಾನವಾಗಿತ್ತು. ಇದಕ್ಕಾಗಿ ಅವರು ಸಾಕಷ್ಟು ಸಮಯದಿಂದ ಸಜ್ಜಾಗುತ್ತಿದ್ದರು. ನನ್ನ ಆಶಯ ಕೂಡ ಅದೇ ಆಗಿತ್ತು. ಮೊದಲ ಎರಡು ಪಂದ್ಯಗಳಲ್ಲಿ ನಾವಿಬ್ಬರು ಮಾಹಿತಿ ಹಂಚಿಕೊಳ್ಳುತ್ತಿದ್ದೆವು. ನಂತರ ಬೌಲಿಂಗ್, ಫೀಲ್ಡಿಂಗ್ ಆಯ್ಕೆ ಎಲ್ಲವನ್ನು ಅವರಿಗೆ ಬಿಟ್ಟುಕೊಟ್ಟೆ. ಯಾಕೆಂದರೆ ನಾಯಕತ್ವ ಅವನು ಮಾಡಿದ, ನಾನು ಕೇವಲ ಟಾಸ್​ಗೆ ಹೋಗಲು ಮಾತ್ರ ಎಂಬ ಭಾವನೆ ಕೊನೆಯಲ್ಲಿ ಅವರಿಗೆ ಮೂಡಬಾರದು. ಮೈದಾನದಲ್ಲಿ ನಾಯಕ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಮತ್ತು ಆ ನಿರ್ಧಾರಕ್ಕೆ ಆತನೇ ಜವಾಬ್ದಾರಿ ಆಗಿರಬೇಕು,” ಎಂಬುದು ಎಂಎಸ್​ಡಿ ಮಾತು.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:36 am, Mon, 2 May 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?