AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoni Entertainment: ತಮಿಳು ಸ್ಟಾರ್ ನಟ ಯೋಗಿ ಬಾಬುಗೆ ಸರ್​ಪ್ರೈಸ್ ಗಿಫ್ಟ್ ನೀಡಿದ ಎಂಎಸ್ ಧೋನಿ: ಫೋಟೋ ವೈರಲ್​

MS Dhoni - Yogi Babu: ಜನವರಿ 27 ರಂದು ಧೋನಿ ಎಂಟರ್​ಟೇನ್​ಮೆಂಟ್ ಕಡೆಯಿಂದ ಚೊಚ್ಚಲ ಸಿನಿಮಾ ಕೂಡ ಘೋಷಣೆ ಆಗಿತ್ತು. ಅವರ ಮೊದಲ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್​’ (Lets Get Married) ಎಂದು ಶೀರ್ಷಿಕೆ ಇಡಲಾಗಿದೆ.

Dhoni Entertainment: ತಮಿಳು ಸ್ಟಾರ್ ನಟ ಯೋಗಿ ಬಾಬುಗೆ ಸರ್​ಪ್ರೈಸ್ ಗಿಫ್ಟ್ ನೀಡಿದ ಎಂಎಸ್ ಧೋನಿ: ಫೋಟೋ ವೈರಲ್​
Yogi Babu and MS Dhoni
Vinay Bhat
|

Updated on:Feb 16, 2023 | 9:45 AM

Share

ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಅಂತರರಾಷ್ಟ್ರೀಯ ಕ್ರಿಕೆಟ್​ನಿಂದ ದೂರವಾದ ಬಳಿಕ ಅನೇಕ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಬಿಟ್ಟರೆ ಧೋನಿ ಇತರೆ ಯಾವುದೇ ಪಂದ್ಯದಲ್ಲಿ ಆಡುತ್ತಿಲ್ಲ. ಬದಲಾಗಿ ತನ್ನದೇ ಒಂದು ನಿರ್ಮಾಣ ಸಂಸ್ಥೆ ಹುಟ್ಟುಹಾಕಿದ್ದು ಇದಕ್ಕೆ ಧೋನಿ ಎಂಟರ್​ಟೇನ್​ಮೆಂಟ್ (Dhoni Entertainment) ಎಂದು ಹೆಸರಿಡಲಾಗಿದೆ. ಕಳೆದ ತಿಂಗಳು ಜನವರಿ 27 ರಂದು ಧೋನಿ ಎಂಟರ್​ಟೇನ್​ಮೆಂಟ್ ಕಡೆಯಿಂದ ಚೊಚ್ಚಲ ಸಿನಿಮಾ ಕೂಡ ಘೋಷಣೆ ಆಗಿತ್ತು. ಅವರ ಮೊದಲ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್​’ (Lets Get Married) ಎಂದು ಶೀರ್ಷಿಕೆ ಇಡಲಾಗಿದೆ.

ಇದೀಗ ಈ ಚಿತ್ರದ ನಾಯಕ ಯೋಗಿ ಬಾಬು ಅವರಿಗೆ ಧೋನಿ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ. ಎಂಎಸ್​ಡಿ ಅವರು ತನ್ನ ಅಟೋಗ್ರಾಫ್ ಇರುವ ಬ್ಯಾಟ್​ವೊಂದನ್ನು ಯೋಗಿ ಅವರಿಗೆ ಗಿಫ್ಟ್ ಆಗಿ ನೀಡಿದ್ದಾರೆ. ಈ ಫೋಟೋವನ್ನು ಯೋಗಿ ಬಾಬು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಸಖತ್ ವೈರಲ್ ಆಗುತ್ತಿದೆ. ಲೆಟ್ಸ್ ಗೆಟ್ ಮ್ಯಾರೀಡ್ ‘ಎಲ್​ಜಿಎಂ’ ಎಂಬುದು ಸಿನಿಮಾ ಟೈಟಲ್​ನ ಶಾರ್ಟ್​ಫಾರ್ಮ್​. ರಮೇಶ್ ತಮಿಳ್​ಮಣಿ ಅವರು ಚಿತ್ರವನ್ನು ನಿರ್ದೇಶನ ಮಾಡಿದರೆ, ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
IND vs AUS 2nd Test: ಭಾರತಕ್ಕಿಂದು ಕೊನೆಯ ಪ್ರ್ಯಾಕ್ಟೀಸ್ ಸೆಷನ್: ಎಲ್ಲರಿಗಿಂತ ಮುಂಚಿತವಾಗಿ ಅಭ್ಯಾಸಕ್ಕೆ ಬಂದ ವಿರಾಟ್ ಕೊಹ್ಲಿ
Image
Happy Birthday Mayank Agarwal: 32ನೇ ವರ್ಷಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಬ್ಯಾಟರ್ ಮಯಾಂಕ್ ಅಗರ್ವಾಲ್: ಹೆಮ್ಮೆಯ ಕನ್ನಡಿಗನ ಬಗ್ಗೆ ನಿಮಗೆಷ್ಟು ಗೊತ್ತು?
Image
Deepthi Sharma: ಕ್ರಿಕೆಟ್ ಲೋಕದಲ್ಲಿ ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ: ಪುರುಷರಿಗೂ ಸಾಧ್ಯವಾಗಿಲ್ಲ ಈ ಸಾಧನೆ
Image
IND vs AUS 2nd Test: ಕೋಟಿ ಬೆಲೆಯ ಕಾರಲ್ಲಿ ಆಗಮಿಸಿದ ಕೊಹ್ಲಿ: ಈ ಕಾರಿನ ವಿಶೇಷತೆ ಏನು ಗೊತ್ತಾ?

ICC Womens T20 World Cup 2023: ವೆಸ್ಟ್ ಇಂಡೀಸ್​ ತಂಡಕ್ಕೆ ಸೋಲುಣಿಸಿದ ಟೀಮ್ ಇಂಡಿಯಾ

ಈ ಸಿನಿಮಾದಲ್ಲಿ ಯೋಗಿ ಬಾಬು ಜೊತೆಗೆ ಹರೀಶ್ ಕಲ್ಯಾಣ್, ಇವಾನ, ನದಿಯಾ ಸೇರಿದಂತೆ ದೊಡ್ಡ ತಾರಾಗಣ ಇರಲಿದೆ. ಇದೊಂದು ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಸಿನಿಮಾ. ಧೋನಿಗೂ ತಮಿಳುನಾಡಿಗೂ ಉತ್ತಮ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

ಕೇವಲ ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:43 am, Thu, 16 February 23

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ