AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನೀವು ನನ್ನ ನಾಯಕತ್ವದಲ್ಲಿ ಆಡಬೇಡಿ: ಗೆದ್ದರೂ ಪಂದ್ಯದ ಬಳಿಕ ಬೌಲರ್​​ಗಳ ಮೈಚಳಿ ಬಿಡಿಸಿದ ಎಂಎಸ್ ಧೋನಿ

CSK vs LSG, IPL 2023: ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಎಂಎಸ್ ಧೋನಿ, ಬೌಲರ್​ಗಳು ನೀಡಿದ ಪ್ರದರ್ಶನದಿಂದ ಕೋಪಗೊಂಡು ನೀವು ಹೊಸ ನಾಯಕನ ಅಡಿಯಲ್ಲಿ ಆಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

MS Dhoni: ನೀವು ನನ್ನ ನಾಯಕತ್ವದಲ್ಲಿ ಆಡಬೇಡಿ: ಗೆದ್ದರೂ ಪಂದ್ಯದ ಬಳಿಕ ಬೌಲರ್​​ಗಳ ಮೈಚಳಿ ಬಿಡಿಸಿದ ಎಂಎಸ್ ಧೋನಿ
ms dhoni post match presentation
Vinay Bhat
|

Updated on: Apr 04, 2023 | 11:08 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ನಾಲ್ಕು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ 2023 ರಲ್ಲಿ (IPL 2023) ಸೋಲಿನ ಮೂಲಕ ಅಭಿಯಾನ ಆರಂಭಿಸಿತ್ತು. ಆದರೆ, ದ್ವಿತೀಯ ಪಂದ್ಯದಲ್ಲಿ ಫಿನಿಕ್ಸ್​ನಂತೆ ಕಮ್​ಬ್ಯಾಕ್ ಮಾಡಿ ಜಯ ಸಾಧಿಸಿತು. ಸೋಮವಾರ ಚೆನ್ನೈನ ಎಮ್​ಎ ಚಿದಂಬರಂ ಸ್ಟೇಡಿಯಂನಲ್ಲಿ ಲಖನೌ ಸೂಪರ್ ಜೇಂಟ್ಸ್ ವಿರುದ್ಧದ ಪಂದ್ಯದಲ್ಲಿ ಸಿಎಸ್​ಕೆ (CSK vs LDG) 12 ರನ್​ಗಳ ರೋಚಕ ಗೆಲುವು ಕಂಡಿತು. ಎದುರಾಳಿಗೆ ಗೆಲ್ಲಲು 200+ ರನ್​ಗಳ ಗುರಿ ನೀಡಿದ್ದರೂ ಎಲ್​​ಎಸ್​ಜಿ ಟಾರ್ಗೆಟ್ ಹತ್ತಿರ ಸಮೀಪಿಸಿ ಸೋಲುಂಡಿತು. ಇದರಿಂದ ಚೆನ್ನೈ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಕೋಪಗೊಂಡಿದ್ದು ತಮ್ಮ ತಂಡದ ಬೌಲರ್​ಗಳ ಮೈಚಳಿ ಬಿಡಿಸಿದ್ದಾರೆ.

ಪಂದ್ಯ ಮುಗಿದ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಿದ ಧೋನಿ, ಬೌಲರ್​ಗಳು ನೀಡಿದ ಪ್ರದರ್ಶನದಿಂದ ಕೋಪಗೊಂಡಿದ್ದಾರೆ. ಈ ಪಂದ್ಯದಲ್ಲಿ ಸಿಎಸ್​ಕೆ ಬೌಲರ್‌ಗಳು ಅತಿಯಾಗಿ ವೈಡ್ ಹಾಗೂ ನೋ ಬಾಲ್‌ಗಳನ್ನು ಎಸೆದಿದ್ದಾರೆ. ದೀಪಕ್ ಚಹರ್ ನಾಲ್ಕು ಓವರ್‌ಗಳ ಬೌಲಿಂಗ್‌ನಲ್ಲಿ ಒಂದೂ ವಿಕೆಟ್ ಪಡೆಯದೆ 55 ರನ್‌ಗಳನ್ನು ಬಿಟ್ಟುಕೊಟ್ಟಿದ್ದರು. ಅಲ್ಲದೆ 5 ವೈಡ್ ಎಸೆತಗಳನ್ನು ಎಸೆದಿದ್ದರು. ಒಟ್ಟಾರೆಯಾಗಿ ಚೆನ್ನೈ ಬೌಲರ್​ಗಳು 3 ನೋ ಬಾಲ್‌ಗಳು ಮತ್ತು 13 ವೈಡ್‌ಗಳನ್ನು ಬಿಟ್ಟುಕೊಟ್ಟರು. ಇದರಿಂದ ಸಿಟ್ಟಾಗಿರುವ ಧೋನಿ, ಪಂದ್ಯದ ಮುಕ್ತಾಯದ ಬಳಿಕ ಎಚ್ಚರಿಕೆ ನೀಡಿದ್ದಾರೆ. ನೋ ಬಾಲ್, ವೈಡ್​ಗಳನ್ನು ಎಸೆಯುವುದನ್ನು ನಿಲ್ಲಿಸಿ, ಇಲ್ಲವೇ ಹೊಸ ನಾಯಕನ ಅಡಿಯಲ್ಲಿ ಆಡಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ
Image
Chahal-Dhanashree Verma: ನಮ್ಮಿಬ್ಬರ ನಡುವೆ ಸರಿಯಿಲ್ಲ ಎಂದವರಿಗೆ ಪಂದ್ಯದ ಮಧ್ಯೆಯೇ ತಕ್ಕ ಉತ್ತರ ನೀಡಿದ ಚಹಲ್-ಧನಶ್ರೀ
Image
IPL 2023 Points Table: ಐಪಿಎಲ್ 2023 ಆರೆಂಜ್, ಪರ್ಪಲ್ ಕ್ಯಾಪ್ ಯಾರ ಬಳಿಯಿದೆ?, ಟೇಬಲ್ ಟಾಪರ್ ಯಾರು?
Image
DC vs GT, IPL 2023: ವಾರ್ನರ್ vs ಹಾರ್ದಿಕ್: ಐಪಿಎಲ್​ನಲ್ಲಿಂದು ಡೆಲ್ಲಿ- ಗುಜರಾತ್ ಮುಖಾಮುಖಿ
Image
CSK vs LSG: ಚೆನ್ನೈ ಸೂಪರ್ ಕಿಂಗ್ಸ್-ಲಖನೌ ಹೈವೋಲ್ಟೇಜ್ ಪಂದ್ಯದ ರೋಚಕ ಫೋಟೋಗಳು ನೋಡಿ

IPL 2023: 140 ದಶಲಕ್ಷ ವೀಕ್ಷಕರು; ಐಪಿಎಲ್ ವೀಕ್ಷಣೆಯಲ್ಲಿ ದಾಖಲೆ ಬರೆದ ಡಿಸ್ನಿ ಸ್ಟಾರ್

”ನೋ ಬಾಲ್ ಮತ್ತು ವೈಡ್‌ಗಳನ್ನು ಬೌಲ್ ಮಾಡಿ ಹೆಚ್ಚುವರಿ ಎಸೆತಗಳನ್ನು ಹಾಕುತ್ತಿದ್ದೇವೆ. ಅವುಗಳನ್ನು ಕಡಿತಗೊಳಿಸಬೇಕಾಗಿದೆ. ಇಲ್ಲದಿದ್ದರೆ ಆಟದ ಮೇಲೆ ಪರಿಣಾಮ ಬೀರಲಿದೆ. ಇದು ಮುಂದುವರಿಯಬಾರದು. ಬೌಲರ್​ಗಳು ನೋಬಾಲ್ ಇಲ್ಲದೆ, ವೈಡ್‌ಗಳನ್ನು ಕಡಿಮೆ ಮಾಡಿಕೊಂಡು ಬೌಲಿಂಗ್ ನಡೆಸಬೇಕು. ಇಲ್ಲವಾದರೆ ಅವರು ಹೊಸ ನಾಯಕನ ಅಡಿಯಲ್ಲಿ ಆಡಬೇಕಾಗುತ್ತದೆ,” ಎಂದು ಧೋನಿ ಹೇಳಿದ್ದಾರೆ.

“ಇದೊಂದು ಹೈ ಸ್ಕೋರಿಂಗ್ ಪಂದ್ಯವಾಗಿತ್ತು. ನಾವೆಲ್ಲರೂ ವಿಕೆಟ್ ಹೇಗೆ ಪಡೆಯುವುದು ಎಂದು ಯೋಚಿಸುತ್ತಿದ್ದೆವು. ಈ ಬಗ್ಗೆ ನಮಗೆ ಅನುಮಾನವಿದ್ದವು. ಇದೊಂದು ಪರಿಪೂರ್ಣ ಪಂದ್ಯ ಎಂದು ನಾನು ಭಾವಿಸುತ್ತೇನೆ. 5- 6 ವರ್ಷಗಳ ಬಳಿಕ ಕ್ರೀಡಾಂಗಣ ಭರ್ತಿಯಾಗಿದೆ. ಇದು ಸಂತಸದ ವಿಚಾರ. ತವರಿನಲ್ಲಿ ಮುಂದೆ 6 ಪಂದ್ಯಗಳು ನಡೆಯಲಿದ್ದು, ಅಲ್ಲಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಇದು ಬಹಳ ನಿಧಾನಗತಿಯ ಪಿಚ್ ಆಗಿರಲಿದೆ ಎಂದು ನಾನು ಭಾವಿಸಿದ್ದೆ. ಆದರೆ, ಇದು ಹೆಚ್ಚು ರನ್‌ಗಳಿಸಬಹುದಾದ ಪಿಚ್ ಆಗಿದೆ,,” ಎಂಬುದು ಧೋನಿ ಮಾತು.

217 ರನ್ ಗಳಿಸಿದ ಸಿಎಸ್​ಕೆ:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಚೆನ್ನೈಗೆ ಓಪನರ್​ಗಳಾದ ಗಾಯಕ್ವಾಡ್ (57) ಹಾಗೂ ಕಾನ್ವೆ (47) ಸ್ಫೋಟಕ ಬ್ಯಾಟಿಂಗ್ ನಡೆಸಿ ಶತಕದ ಜೊತೆಯಾಟ ಆಡಿದರು. 9.1 ಓವರ್​ನಲ್ಲಿ ಇವರು 110 ರನ್ ಕಲೆಹಾಕಿದರು. ಶಿವಂ ದುಬೆ 16 ಎಸೆತಗಳಲ್ಲಿ 27 ರನ್ ಬಾರಿಸಿದರೆ, ಮೊಯೀನ್ ಅಲಿ 19, ಬೆನ್ ಸ್ಟೋಕ್ಸ್ 8, ಜಡೇಜಾ 3 ಹಾಗೂ ರಾಯುಡು ಅಜೇಯ 27 ರನ್ ಗಳಿಸಿದರು. ಕೊನೆಯ ಓವರ್​ನಲ್ಲಿ ಧೋನಿ 2 ಸಿಕ್ಸ್ ಸಿಡಿಸಿದರು. ಅಂತಿಮವಾಗಿ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 217 ರನ್ ಗಳಿಸಿತು. ಎಲ್​​ಎಸ್​ಜಿ ಪರ ಮಾರ್ಕ್ ವುಡ್ ಹಾಗೂ ಬಿಷ್ಟೋಯಿ ತಲಾ 3 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಲಖನೌ ಕೂಡ ಸ್ಫೋಟಕ ಆರಂಭ ಕಂಡಿತು. ಖೈಲ್ ಮೇಯರ್ಸ್ 22 ಎಸೆತಗಳಲ್ಲಿ 53 ರನ್ ಸಿಡಿಸಿದರು. ಮೊದಲ ವಿಕೆಟ್​ಗೆ ಕೆಎಲ್ ರಾಹುಲ್ (20) ಜೊತೆಗೂಡಿ 79 ರನ್​ಗಳು ಬಂದವು. ಹೂಡ (2) ಹಾಗೂ ಕ್ರುನಾಲ್ ಪಾಂಡ್ಯ (9) ಬೇಗನೆ ನಿರ್ಗಮಿಸಿದರು. ಸ್ಟೋಯಿನಿಸ್ 21, ಬದೋನಿ 23 ಹಾಗೂ ಪೂರನ್ 32 ರನ್​ಗಳ ಕೊಡುಗೆ ನೀಡಿ ಗೆಲುವಿನ ಆಸೆ ಚಿಗುರಿಸಿದರು. ಆದರೆ, ಗೆಲುವು ಸಾಧ್ಯವಾಗಲಿಲ್ಲ. ಲಖನೌ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 205 ರನ್ ಬಾರಿಸಲಷ್ಟೆ ಶಕ್ತವಾಯಿತು. ಸಿಎಸ್​ಕೆ ಪರ ಮೊಯಿನ್ ಅಲಿ 4 ವಿಕೆಟ್ ಕಿತ್ತು ಮಿಂಚಿದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?