AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Temple: ಚೆನ್ನೈನಲ್ಲಿ ನಿರ್ಮಾಣವಾಗಲಿದೆ ಎಂಎಸ್ ಧೋನಿ ದೇವಸ್ಥಾನ: ಹೇಗಿರಲಿದೆ ನೋಡಿ

CSK, IPL 2024: ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಸಿಎಸ್‌ಕೆಗಾಗಿ ಅವರ ಪ್ರದರ್ಶನವನ್ನು ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

MS Dhoni Temple: ಚೆನ್ನೈನಲ್ಲಿ ನಿರ್ಮಾಣವಾಗಲಿದೆ ಎಂಎಸ್ ಧೋನಿ ದೇವಸ್ಥಾನ: ಹೇಗಿರಲಿದೆ ನೋಡಿ
MS Dhoni Temple
Vinay Bhat
|

Updated on: May 14, 2024 | 9:59 AM

Share

ಭಾರತದಲ್ಲಿ ಕ್ರಿಕೆಟ್ ಅನ್ನು ಧರ್ಮವೆಂದು ಪರಿಗಣಿಸಲಾಗುತ್ತದೆ, ಕ್ರಿಕೆಟಿಗರನ್ನು ದೇವರಂತೆ ಪೂಜಿಸಲಾಗುತ್ತದೆ. ಕೆಲ ಆಟಗಾರರನ್ನು ಅವರ ಅಭಿಮಾನಿಗಳು ದೇವರು ಎಂದು ಕರೆಯುತ್ತಾರೆ. ಈ ಪಟ್ಟಿಗೆ ಸಚಿನ್ ತೆಂಡೂಲ್ಕರ್ ನಂತರ ಇದೀಗ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರು ಸೇರ್ಪಡೆಯಾಗುತ್ತಿದೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟ ಮಹೇಂದ್ರ ಸಿಂಗ್ ಧೋನಿ ಅವರ ಜನಪ್ರಿಯತೆ ಎಂದಿಗೂ ಮರೆಯಾಗುವುದಿಲ್ಲ. ಅದರಲ್ಲೂ ದಕ್ಷಿಣ ಭಾರತದಲ್ಲಿ ಅವರಿಗೆ ಅದ್ಭುತವಾದ ಅಭಿಮಾನಿಗಳಿದ್ದಾರೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ ಐದು ಬಾರಿ ಟ್ರೋಫಿ ಗೆದ್ದಿರುವ ಮಾಹಿ ನಾಯಕತ್ವದಲ್ಲಿ ಆಡಿರುವ ಅಂಬಟಿ ರಾಯುಡು, ಚೆನ್ನೈನಲ್ಲಿ ಎಂಎಸ್ ಧೋನಿಯ ದೇವಸ್ಥಾನ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಸಿಎಸ್‌ಕೆಗಾಗಿ ಅವರ ಪ್ರದರ್ಶನವನ್ನು ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ರಾಯುಡು, ಕಳೆದ ಕೆಲವು ವರ್ಷಗಳಲ್ಲಿ ರಜನಿಕಾಂತ್, ಖುಷ್ಬೂ ಸೇರಿದಂತೆ ದಕ್ಷಿಣದ ಜನಪ್ರಿಯ ತಾರೆಯರ ದೇವಾಲಯಗಳನ್ನು ಅಭಿಮಾನಿಗಳು ನಿರ್ಮಿಸಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಐಪಿಎಲ್ ಅನ್ನು ಅರ್ಧದಲ್ಲೇ ತೊರೆದ ಸ್ಟಾರ್ ಪ್ಲೇಯರ್ಸ್: ಮುಂದಿನ ಪಂದ್ಯಗಳಿಗೆ ಇವರು ಅಲಭ್ಯ

ಧೋನಿ ಅವರು ತಮ್ಮ ಆಟಗಾರರನ್ನು ನಂಬುವ ವ್ಯಕ್ತಿ, ಎಂದಿಗೂ ಕೈಬಿಡುವುದಿಲ್ಲ, ಅವರು ತಂಡ, ದೇಶ ಮತ್ತು ಸಿಎಸ್‌ಕೆಗಾಗಿ ಅನೇಕ ಸೇವೆ ಸಲ್ಲಿಸಿದ್ದಾರೆ. ಮಾಹಿ ಭಾರತಕ್ಕೆ ಎರಡು ವಿಶ್ವಕಪ್ ಮತ್ತು ಚೆನ್ನೈಗೆ ಐದು ಐಪಿಎಲ್ ಮತ್ತು ಎರಡು ಚಾಂಪಿಯನ್ಸ್ ಲೀಗ್ ಪ್ರಶಸ್ತಿಗಳನ್ನು ನೀಡಿದ್ದಾರೆ. ಹೀಗಾಗಿ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸುತ್ತೇವೆ ಎಂಬುದು ರಾಯುಡು ಮಾತು. ಇದು ಹೇಗಿರಲಿದೆ?, ಚೆನ್ನೈನಲ್ಲಿ ಎಲ್ಲಿ ನಿರ್ಮಾಣವಾಗುತ್ತೆ ಎಂಬ ಬಗ್ಗೆ ಇನ್ನಷ್ಟೆ ಅಂತಿಮವಾಗಬೇಕಿದೆ.

ಭಾನುವಾರ ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಚೆನ್ನೈನಲ್ಲಿ ಇದು ಧೋನಿಯ ಕೊನೆಯ ಪಂದ್ಯ ಆಗುವ ಸಾಧ್ಯತೆ ಇದೆ. ಸದ್ಯ ಸಿಎಸ್​ಕೆ +0.528 ನಿವ್ವಳ ರನ್ ರೇಟ್‌ನೊಂದಿಗೆ 14 ಅಂಕಗಳನ್ನು ಹೊಂದಿದೆ, 13 ಪಂದ್ಯಗಳಲ್ಲಿ ಏಳು ಗೆಲುವು ಕಂಡಿದೆ. ಅಂಕಪಟ್ಟಿಯಲ್ಲಿ ತಂಡ ಮೂರನೇ ಸ್ಥಾನದಲ್ಲಿದೆ. ಒಂದು ವೇಳೆ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾದರೆ, ಧೋನಿ ಈ ಋತುವಿನಲ್ಲಿ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದಂತಾಗುತ್ತದೆ.

ಭಾರತದ ಮುಖ್ಯ ಕೋಚ್ ಬಗ್ಗೆ ದೊಡ್ಡ ಘೋಷಣೆ: ಹೊಸ ಕೋಚ್​ಗೆ ಬಿಸಿಸಿಐ ಕಠಿಣ ಷರತ್ತು

ಇದಕ್ಕೆ ಸಾಕ್ಷಿ ಎಂಬಂತೆ ರಾಜಸ್ಥಾನ ವಿರುದ್ಧದ ಪಂದ್ಯದ ನಂತರ ಚೆಪಾಕ್ ಕ್ರೀಡಾಂಗಣದಲ್ಲಿ ಭಾರೀ ಸಂಭ್ರಮಾಚರಣೆ ನಡೆಸಲಾಗಿದೆ. ಧೋನಿಗೆ ಪದಕ ನೀಡಿ ಗೌರವಿಸಲಾಯಿತು. ಇಡೀ ತಂಡದೊಂದಿಗೆ ಧೋನಿ ಮೈದಾನ ಸುತ್ತುವರಿದರು. ಸಿಎಸ್​ಕೆ ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 18 ರಂದು ಬೆಂಗಳೂರಿನಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ