AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni Temple: ಚೆನ್ನೈನಲ್ಲಿ ನಿರ್ಮಾಣವಾಗಲಿದೆ ಎಂಎಸ್ ಧೋನಿ ದೇವಸ್ಥಾನ: ಹೇಗಿರಲಿದೆ ನೋಡಿ

CSK, IPL 2024: ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಸಿಎಸ್‌ಕೆಗಾಗಿ ಅವರ ಪ್ರದರ್ಶನವನ್ನು ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

MS Dhoni Temple: ಚೆನ್ನೈನಲ್ಲಿ ನಿರ್ಮಾಣವಾಗಲಿದೆ ಎಂಎಸ್ ಧೋನಿ ದೇವಸ್ಥಾನ: ಹೇಗಿರಲಿದೆ ನೋಡಿ
MS Dhoni Temple
Vinay Bhat
|

Updated on: May 14, 2024 | 9:59 AM

Share

ಭಾರತದಲ್ಲಿ ಕ್ರಿಕೆಟ್ ಅನ್ನು ಧರ್ಮವೆಂದು ಪರಿಗಣಿಸಲಾಗುತ್ತದೆ, ಕ್ರಿಕೆಟಿಗರನ್ನು ದೇವರಂತೆ ಪೂಜಿಸಲಾಗುತ್ತದೆ. ಕೆಲ ಆಟಗಾರರನ್ನು ಅವರ ಅಭಿಮಾನಿಗಳು ದೇವರು ಎಂದು ಕರೆಯುತ್ತಾರೆ. ಈ ಪಟ್ಟಿಗೆ ಸಚಿನ್ ತೆಂಡೂಲ್ಕರ್ ನಂತರ ಇದೀಗ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರು ಸೇರ್ಪಡೆಯಾಗುತ್ತಿದೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡು ವಿಶ್ವಕಪ್‌ ಗೆಲ್ಲಿಸಿಕೊಟ್ಟ ಮಹೇಂದ್ರ ಸಿಂಗ್ ಧೋನಿ ಅವರ ಜನಪ್ರಿಯತೆ ಎಂದಿಗೂ ಮರೆಯಾಗುವುದಿಲ್ಲ. ಅದರಲ್ಲೂ ದಕ್ಷಿಣ ಭಾರತದಲ್ಲಿ ಅವರಿಗೆ ಅದ್ಭುತವಾದ ಅಭಿಮಾನಿಗಳಿದ್ದಾರೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ ಐದು ಬಾರಿ ಟ್ರೋಫಿ ಗೆದ್ದಿರುವ ಮಾಹಿ ನಾಯಕತ್ವದಲ್ಲಿ ಆಡಿರುವ ಅಂಬಟಿ ರಾಯುಡು, ಚೆನ್ನೈನಲ್ಲಿ ಎಂಎಸ್ ಧೋನಿಯ ದೇವಸ್ಥಾನ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಸಿಎಸ್‌ಕೆಗಾಗಿ ಅವರ ಪ್ರದರ್ಶನವನ್ನು ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿದ ರಾಯುಡು, ಕಳೆದ ಕೆಲವು ವರ್ಷಗಳಲ್ಲಿ ರಜನಿಕಾಂತ್, ಖುಷ್ಬೂ ಸೇರಿದಂತೆ ದಕ್ಷಿಣದ ಜನಪ್ರಿಯ ತಾರೆಯರ ದೇವಾಲಯಗಳನ್ನು ಅಭಿಮಾನಿಗಳು ನಿರ್ಮಿಸಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಐಪಿಎಲ್ ಅನ್ನು ಅರ್ಧದಲ್ಲೇ ತೊರೆದ ಸ್ಟಾರ್ ಪ್ಲೇಯರ್ಸ್: ಮುಂದಿನ ಪಂದ್ಯಗಳಿಗೆ ಇವರು ಅಲಭ್ಯ

ಧೋನಿ ಅವರು ತಮ್ಮ ಆಟಗಾರರನ್ನು ನಂಬುವ ವ್ಯಕ್ತಿ, ಎಂದಿಗೂ ಕೈಬಿಡುವುದಿಲ್ಲ, ಅವರು ತಂಡ, ದೇಶ ಮತ್ತು ಸಿಎಸ್‌ಕೆಗಾಗಿ ಅನೇಕ ಸೇವೆ ಸಲ್ಲಿಸಿದ್ದಾರೆ. ಮಾಹಿ ಭಾರತಕ್ಕೆ ಎರಡು ವಿಶ್ವಕಪ್ ಮತ್ತು ಚೆನ್ನೈಗೆ ಐದು ಐಪಿಎಲ್ ಮತ್ತು ಎರಡು ಚಾಂಪಿಯನ್ಸ್ ಲೀಗ್ ಪ್ರಶಸ್ತಿಗಳನ್ನು ನೀಡಿದ್ದಾರೆ. ಹೀಗಾಗಿ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸುತ್ತೇವೆ ಎಂಬುದು ರಾಯುಡು ಮಾತು. ಇದು ಹೇಗಿರಲಿದೆ?, ಚೆನ್ನೈನಲ್ಲಿ ಎಲ್ಲಿ ನಿರ್ಮಾಣವಾಗುತ್ತೆ ಎಂಬ ಬಗ್ಗೆ ಇನ್ನಷ್ಟೆ ಅಂತಿಮವಾಗಬೇಕಿದೆ.

ಭಾನುವಾರ ರಾತ್ರಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಐದು ವಿಕೆಟ್‌ಗಳ ಜಯ ಸಾಧಿಸಿದ ನಂತರ ಚೆನ್ನೈನಲ್ಲಿ ಇದು ಧೋನಿಯ ಕೊನೆಯ ಪಂದ್ಯ ಆಗುವ ಸಾಧ್ಯತೆ ಇದೆ. ಸದ್ಯ ಸಿಎಸ್​ಕೆ +0.528 ನಿವ್ವಳ ರನ್ ರೇಟ್‌ನೊಂದಿಗೆ 14 ಅಂಕಗಳನ್ನು ಹೊಂದಿದೆ, 13 ಪಂದ್ಯಗಳಲ್ಲಿ ಏಳು ಗೆಲುವು ಕಂಡಿದೆ. ಅಂಕಪಟ್ಟಿಯಲ್ಲಿ ತಂಡ ಮೂರನೇ ಸ್ಥಾನದಲ್ಲಿದೆ. ಒಂದು ವೇಳೆ ಸಿಎಸ್‌ಕೆ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾದರೆ, ಧೋನಿ ಈ ಋತುವಿನಲ್ಲಿ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದಂತಾಗುತ್ತದೆ.

ಭಾರತದ ಮುಖ್ಯ ಕೋಚ್ ಬಗ್ಗೆ ದೊಡ್ಡ ಘೋಷಣೆ: ಹೊಸ ಕೋಚ್​ಗೆ ಬಿಸಿಸಿಐ ಕಠಿಣ ಷರತ್ತು

ಇದಕ್ಕೆ ಸಾಕ್ಷಿ ಎಂಬಂತೆ ರಾಜಸ್ಥಾನ ವಿರುದ್ಧದ ಪಂದ್ಯದ ನಂತರ ಚೆಪಾಕ್ ಕ್ರೀಡಾಂಗಣದಲ್ಲಿ ಭಾರೀ ಸಂಭ್ರಮಾಚರಣೆ ನಡೆಸಲಾಗಿದೆ. ಧೋನಿಗೆ ಪದಕ ನೀಡಿ ಗೌರವಿಸಲಾಯಿತು. ಇಡೀ ತಂಡದೊಂದಿಗೆ ಧೋನಿ ಮೈದಾನ ಸುತ್ತುವರಿದರು. ಸಿಎಸ್​ಕೆ ತನ್ನ ಕೊನೆಯ ಲೀಗ್ ಪಂದ್ಯವನ್ನು ಮೇ 18 ರಂದು ಬೆಂಗಳೂರಿನಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?